• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯ, ರಾಷ್ಟ್ರಮಟ್ಟದಲ್ಲಿ ಹುಲಿವೇಷ ಖ್ಯಾತಿಯ ಅಶೋಕ್ ರಾಜ್ ಕಾಡಬೆಟ್ಟು ಇನ್ನಿಲ್ಲ..

Tulunadu News Posted On February 2, 2024
0


0
Shares
  • Share On Facebook
  • Tweet It

ಉಡುಪಿ ಕಾಡಬೆಟ್ಟು ನಿವಾಸಿ “ಟೈಗರ್” ಅಶೋಕ್ ರಾಜ್ ಕೆಲವು ತಿಂಗಳ ಅನಾರೋಗ್ಯದ ಬಳಿಕ ಚೇತರಿಕೆ ಕಾಣದೇ ನಿಧನರಾಗಿದ್ದಾರೆ. ಅವರು ಆರೋಗ್ಯವಂತರಾಗಿ ಬಂದು ಮತ್ತೆ ಹುಲಿವೇಷ ತಂಡದ ಸಾರಥ್ಯವನ್ನು ವಹಿಸುತ್ತಾರೆ ಎನ್ನುವ ಅವರ ಅಸಂಖ್ಯಾತ ಅಭಿಮಾನಿಗಳಿಗೆ ಇದರಿಂದ ಭಾರೀ ನೋವಾಗಿದೆ. 56 ವರ್ಷ ವಯಸ್ಸಾಗಿದ್ದ ಅಶೋಕ್ ರಾಜ್ ಕಾಡಬೆಟ್ಟು ಕಳೆದ ನವರಾತ್ರಿ ಸಮಯದಲ್ಲಿ ಬೆಂಗಳೂರಿನಲ್ಲಿ ಹುಲಿವೇಷ ಕಾರ್ಯಕ್ರಮದಲ್ಲಿ ಹುಲಿವೇಷ ಧರಿಸಿಯೇ ಪಾಲ್ಗೊಂಡಿದ್ದರು. ಅಲ್ಲಿಯೇ ಏಕಾಏಕಿ ಕುಸಿದುಬಿದ್ದಿದ್ದ ಅಶೋಕ್ ರಾಜ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಉಡುಪಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ.


ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹುಲಿವೇಷದ ಕಾರ್ಯಕ್ರಮಗಳಲ್ಲಿ ತಮ್ಮ ತಂಡವನ್ನು ಮುನ್ನಡೆಸುತ್ತಿದ್ದ ಅಶೋಕ್ ರಾಜ್ ಅವರು ಉಡುಪಿಯಲ್ಲಿ ಅಷ್ಟಮಿ, ವಿಟ್ಲಪಿಂಡಿಯ ವೇಳೆ ತಮ್ಮ ತಂಡದ ಜೊತೆಗೆ ಪ್ರದರ್ಶನ ನೀಡುವಾಗ ಅದನ್ನು ನೋಡಲು ಜನ ಮುಗಿಬೀಳುತ್ತಿದ್ದರು. ಕಳೆದ ಮೂರು ದಶಕಗಳಿಂದ ಹುಲಿವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ಇವರು ಅನೇಕ ಯುವ ಕಲಾವಿದರಿಗೆ ಸ್ಫೂರ್ತಿಯಾಗಿದ್ದರು. ರಾಜ್ಯ ಮತ್ತು ದೇಶಾದ್ಯಂತ ಹುಲಿಕುಣಿತವನ್ನು ಪ್ರಚುರಪಡಿಸುವಲ್ಲಿ ತಮ್ಮದೇ ಕೊಡುಗೆ ನೀಡಿದ್ದರು.

ಅವರ ಮಗಳು ಸುಷ್ಮಾ ಕೂಡ ಅದ್ಭುತವಾಗಿ ಹುಲಿಕುಣಿತವನ್ನು ಮಾಡುವ ಮೂಲಕ ಪ್ರಖ್ಯಾತಿಗಳಿಸಿದ್ದಾರೆ. ಅಶೋಕ್ ರಾಜ್ ಅಂತ್ಯಸಂಸ್ಕಾರ ಉಡುಪಿಯಲ್ಲಿ ನಡೆಯಿತು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search