• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ 40 ಸೀಟ್ ಗೆದ್ರೆ ಅದೇ ದೊಡ್ಡ ವಿಷಯ ಎಂದ ಮಮತಾ ಬ್ಯಾನರ್ಜಿ!

Tulunadu News Posted On February 3, 2024
0


0
Shares
  • Share On Facebook
  • Tweet It

ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಇಂಡಿಯಿಂದ ಒಂದೊಂದೇ ಅಂಗ ಪಕ್ಷಗಳು ಕಾಂಗ್ರೆಸ್ಸಿಗೆ ಟಕ್ಕರ್ ಕೊಡುತ್ತಿರುವ ಘಳಿಗೆಯಲ್ಲಿಯೇ ಮಮತಾ ಬ್ಯಾನರ್ಜಿ ಹೇಳಿರುವ ಮಾತುಗಳು ಕಾಂಗ್ರೆಸ್ಸಿನ ಮಟ್ಟಿಗೆ ದೊಡ್ಡ ಮುಖಭಂಗವೆನ್ನಬಹುದಾಗಿದೆ. ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 40 ಸೀಟುಗಳನ್ನು ಗೆದ್ದರೆ ಅದೇ ದೊಡ್ಡ ಸಂಗತಿ ಎನ್ನುವ ಅರ್ಥದ ಮಾತುಗಳನ್ನು ಪಶ್ಚಿಮ ಬಂಗಾಲ ಸಿಎಂ ಹೇಳಿದ್ದಾರೆ. 40 ಸೀಟುಗಳನ್ನು ಗೆಲ್ಲುವುದು ಕೂಡ ಡೌಟ್ ಎನ್ನುವ ಟಾಂಗ್ ಕೊಟ್ಟಿರುವ ಮಮತಾ ಹೇಳಿಕೆ ರಾಹುಲ್ ಭಾರತ್ ಜೋಡೋ ಯಾತ್ರೆ ಪಶ್ಚಿಮ ಬಂಗಾಲವನ್ನು ಪ್ರವೇಶಿಸುವ ದಿನವೇ ಬಂದಿರುವ ಕಾಕತಾಳೀಯ ಅಂತೂ ಖಂಡಿತ ಅಲ್ಲ.


ಪಶ್ಚಿಮ ಬಂಗಾಲದ ಮುರ್ಶಿದಾಬಾದ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ ” ಕಾಂಗ್ರೆಸ್ಸಿಗರೇ, ನೀವು ಸ್ಪರ್ಧಿಸಲು ಬಯಸಿರುವ 300 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಟ 40 ರಲ್ಲಾದರೂ ಗೆಲ್ಲುತ್ತೀರಾ ಎನ್ನುವ ಸಂಶಯ ನನಗಿದೆ. ಹೀಗಿರುವಾಗ ನಿಮಗೆ ಇಂತಹ ದುರಂಹಕಾರ ಯಾಕೆ? ನೀವು ಪಶ್ಚಿಮ ಬಂಗಾಲದಲ್ಲಿ ಯಾತ್ರೆ ಮಾಡುತ್ತಿದ್ದೀರಿ. ಸೌಜನ್ಯಕ್ಕಾದರೂ ನಮಗೆ ತಿಳಿಸಬಾರದೇ? ನನಗೆ ಅಧಿಕಾರಿಗಳು ಬಂದು ಮಾಹಿತಿ ನೀಡಿದ ಕಾರಣ ತಿಳಿಯಿತು. ನಾವು ಒಂದೇ
ಒಕ್ಕೂಟದಲ್ಲಿದ್ದೂ ಹೀಗಾದರೆ ಹೇಗೆ? ನಿಮಗೆ ಅಷ್ಟು ಧಮ್ ಇದ್ರೆ ವಾರಣಾಸಿಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೋಲಿಸಿ. ನೀವು ಹಿಂದೆ ಗೆಲ್ಲುತ್ತಿದ್ದ ಸ್ಥಾನಗಳಲ್ಲಿಯೇ ಈಗ ಸೋಲುವಂತಹ ಸ್ಥಿತಿ ನಿರ್ಮಾಣವಾಗಿದೆ”

“ನೀವು ಉತ್ತರ ಪ್ರದೇಶ, ರಾಜಸ್ಥಾನಗಳಲ್ಲಿ ಗೆಲ್ಲುತ್ತಿಲ್ಲ. ಅಲಹಬಾದ್, ವಾರಣಾಸಿಯಲ್ಲಿ ಮೊದಲು ಗೆದ್ದು ತೋರಿಸಿ. ಆಗ ನಿಮ್ಮ ಪಕ್ಷಕ್ಕೆ ಎಷ್ಟು ತಾಕತ್ತು ಇದೆ ಎಂದು ತಿಳಿಯಲಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇನ್ನು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಪಶ್ಚಿಮ ಬಂಗಾಲದಲ್ಲಿ ಸಂಚರಿಸುತ್ತಿದೆ. ರಾಹುಲ್ ಬೀಡಿ ಕಾರ್ಮಿಕರೊಂದಿಗೆ ಕುಳಿತು ಫೋಟೋ ತೆಗೆಸುತ್ತಿದ್ದಾರೆ. ಇದನ್ನು ವ್ಯಂಗ್ಯವಾಗಿ ಹೇಳಿರುವ ಮಮತಾ ” ಈಗ ಹೊಸ ಶೈಲಿಯ ಮುಖ ಹೊರಗೆ ಬರುತ್ತಿದೆ… ಫೋಟೋ ಶೂಟ್… ಯಾರೂ ಇಲ್ಲಿಯ ತನಕ ಟೀ ಶಾಪಿಗೆ ಹೋಗಿರಲಿಲ್ಲವೋ ಅಂತವರು ಈಗ ಬೀಡಿ ಕಾರ್ಮಿಕರೊಂದಿಗೆ ಕುಳಿತು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ವಲಸೆ ಹಕ್ಕಿಗಳು ಇವರು” ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಬೀಡಿ ಕಾರ್ಮಿಕರೊಂದಿಗೆ ವಿಶೇಷವಾಗಿ ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸುತ್ತಿರುವ ಫೋಟೋಗಳು “ಏಕ್ಸ್”ನಲ್ಲಿ ಹಂಚಿಕೊಂಡ ಬಳಿಕ ಮಮತಾ ಈ ಮಾತುಗಳನ್ನು ಆಡಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ತೃಣಮೂಲ್ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ ನಂತರ ಕಾಂಗ್ರೆಸ್ ವಿರುದ್ಧ ಮಮತಾ ಖಾರವಾಗಿ ಮಾತನಾಡುವುದು ಆರಂಭವಾಗಿದೆ.
ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಸೀಟ್ ಹಂಚಿಕೆ ನಿರ್ಧರಿತವಾಗುವುದು 2019 ಲೋಕಸಭಾ ಕ್ಷೇತ್ರದ ಫಲಿತಾಂಶ ಮತ್ತು 2021 ರ ಪಶ್ಚಿಮ ಬಂಗಾಲ ವಿಧಾನಸಭಾ ಚುನಾವಣೆಯ ಫಲಿತಾಂಶ ಆಧರಿಸಿ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಪಶ್ಚಿಮ ಬಂಗಾಲದಲ್ಲಿ ಐದು ಶೇಕಡಾಗಳಿಗಿಂತ ಕಡಿಮೆ ಮತಗಳನ್ನು ಪಡೆದಿರುವುದರಿಂದ ಸೀಟು ಹಂಚಿಕೆ ಮಾತುಕತೆ ಮುರಿದುಬಿದ್ದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search