• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಹೇಳಿದ ಭವಿಷ್ಯ ವಾರದೊಳಗೆ ನಿಜವಾಗಿದೆ!

Tulunadu News Posted On February 16, 2024
0


0
Shares
  • Share On Facebook
  • Tweet It

ತಮ್ಮ ಸರಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಚುನಾವಣೆಯಲ್ಲಿ ವಿಪಕ್ಷಗಳಿಂದ ಕೆಲವರು ಲೋಕಸಭೆಗೆ ಸ್ಪರ್ಧಿಸಲು ಹಿಂದೇಟು ಹಾಕಲಿದ್ದಾರೆ. ರಾಜ್ಯಸಭೆಯಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಕೆಲವರು ಎಂದಿನಂತೆ ಈ ಬಾರಿಯೂ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ” ಎಂದು ಬಹಿರಂಗವಾಗಿ ತಿಳಿಸಿದ್ದರು. ಅವರು ಹಾಗೆ ಹೇಳಿದ್ದು ವಿಪಕ್ಷ ಕಾಂಗ್ರೆಸ್ ಕುರಿತಾದರೂ ಅದು ಇಷ್ಟು ಬೇಗ ನಿಜವಾಗುತ್ತೆ ಎಂದು ಅನಿಸಿರಲಿಲ್ಲ. ಆದರೆ ಅಧಿವೇಶನ ಮುಗಿಸಿ ಇನ್ನು ಕೂಡ ವಾರ ಮುಗಿದಿಲ್ಲ, ಮೋದಿ ಭವಿಷ್ಯ ಸತ್ಯವಾಗಿದೆ.

1999 ರಲ್ಲಿ ಅಮೇಥಿ ಮತ್ತು ಬಳ್ಳಾರಿ ಎರಡು ಕಡೆಯಿಂದ ಸ್ಪರ್ಧಿಸಿ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾದ ಸೋನಿಯಾ ಅವರು ಅಮೇಥಿಯನ್ನು ಉಳಿಸಿಕೊಂಡರು. ಆಗ ಅವರ ವಿರುದ್ಧ ಬಳ್ಳಾರಿಯಿಂದ ಸ್ಪರ್ಧಿಸಿದ್ದು ಸುಷ್ಮಾ ಸ್ವರಾಜ್. ನಂತರ ಮುಂದಿನ ಚುನಾವಣೆಯಲ್ಲಿ ಸೋನಿಯಾ ಅಮೇಥಿಯನ್ನು ಮಗನಿಗೆ ಬಿಟ್ಟುಕೊಟ್ಟು ತಾವು ಪಕ್ಕದ ರಾಯಬರೇಲಿಯಿಂದ ಸ್ಪರ್ಧಿಸಿದರು. 2004 ರಿಂದ ಅದೇ ಕ್ಷೇತ್ರದಿಂದ ಗೆಲ್ಲುತ್ತಿರುವ ಸೋನಿಯಾ 2006 ರ ಉಪಚುನಾವಣೆಯೂ ಸೇರಿದಂತೆ ಐದು ಬಾರಿ ರಾಯಬರೇಲಿಯಿಂದ ಒಮ್ಮೆ ಅಮೇಥಿಯಿಂದ ಒಟ್ಟು ಆರು ಬಾರಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದಾರೆ. ಇಲ್ಲಿಯ ತನಕ ಸೋಲು ಕಾರಣ ಸೋನಿಯಾ ಈ ಬಾರಿ ಸೋಲಿನ ರುಚಿಯನ್ನು ಗ್ರಹಿಸಿದರೇ? ಎನ್ನುವ ಪ್ರಶ್ನೆ ಉದ್ಭವಿಸುತ್ತಿದೆ. ಕಳೆದ ಬಾರಿ ಪರಂಪರಾಗತವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಪುತ್ರ ರಾಹುಲ್ ಬಿಜೆಪಿಯ ಮುಖಂಡೆ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡರೋ ಅದರ ಬಳಿಕ ಈ ಬಾರಿ ಅಂತಹ ಫಲಿತಾಂಶ ರಾಯಬರೇಲಿಯಿಂದ ಬರಬಹುದಾ ಎನ್ನುವ ಆತಂಕ ಗಾಂಧಿ ಕುಟುಂಬಕ್ಕೆ ಇದ್ದಂತಿದೆ.

ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಮುಖಂಡರು ಕಾಂಗ್ರೆಸ್ಸಿಗೆ ಚುನಾವಣೆಯ ಮೊದಲೇ ಸೋಲಿನ ಮುನ್ಸೂಚನೆ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಅಮೇಥಿ ಕಾಂಗ್ರೆಸ್ ರಾಜಪರಿವಾರದಿಂದ ಕೈತಪ್ಪಿ ಹೋಗಿದ್ದರೆ ಈ ಬಾರಿ ರಾಯಬರೇಲಿಯಲ್ಲಿಯೂ ಅದೇ ಇತಿಹಾಸ ಮರುಕಳಿಸಬಹುದು ಎಂಬ ಹಿಂಟ್ ಗಾಂಧೀ ಕುಟುಂಬಕ್ಕೆ ಸಿಕ್ಕಿರಬಹುದು. ಅಜ್ಜ ನೆಟ್ಟ ಆಲದಮರ ಎಂದು ನೇತಾಡುವ ಪರಿಸ್ಥಿತಿ ಈಗ ಉತ್ತರ ಪ್ರದೇಶದಲ್ಲಿ ಇಲ್ಲ. ಆದ್ದರಿಂದ ಎರಡೆರಡು ಕಡೆ ತಾನೇ ನಿಂತು ಸುಮ್ಮನೆ ಸೋಲುವ ಸೂಚನೆಯನ್ನು ರವಾನಿಸುವ ಬದಲು ಎರಡು ತಿಂಗಳ ಮೊದಲೇ ಸೈಲೆಂಟಾಗಿ ಹಿಂದೆ ಸರಿದುಬಿಟ್ಟರೆ ರಗಳೆ ಇಲ್ವಲ್ಲಾ ಎನ್ನುವುದು ಕಾಂಗ್ರೆಸ್ ಕಿಚನ್ ಕ್ಯಾಬಿನೆಟ್ ಸೋನಿಯಾ ಅವರಿಗೆ ಐಡಿಯಾ ನೀಡಿರಬಹುದು.

ಇನ್ನು ಸೋನಿಯಾ ಬಿಟ್ಟುಕೊಡಲಿರುವ ರಾಯಬರೇಲಿಯಿಂದ ಗಾಂಧಿ ಕುಟುಂಬದಿಂದಲೇ ಯಾರಾದರೂ ಸ್ಪರ್ಧಿಸುತ್ತಾರಾ? ಪ್ರಿಯಾಂಕಾ ವಾದ್ರಾ. ಆ ಬಗ್ಗೆ ಈಗಲೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಅವರು ಈ ಬಾರಿ ತಾಯಿಯ ಸ್ಥಾನವನ್ನು ರಾಯಬರೇಲಿಯಲ್ಲಿ ತುಂಬುತ್ತಾರಾ ಅಥವಾ ಪುತ್ರ ರಾಹುಲ್ ರಾಯಬರೇಲಿಗೆ ಬರುತ್ತಾರಾ, ಹದಿನೈದು ದಿನಗಳಲ್ಲಿ ಉತ್ತರ ಸಿಗಬಹುದು!

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search