• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಹೇಳಿದ ಭವಿಷ್ಯ ವಾರದೊಳಗೆ ನಿಜವಾಗಿದೆ!

Tulunadu News Posted On February 16, 2024
0


0
Shares
  • Share On Facebook
  • Tweet It

ತಮ್ಮ ಸರಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಚುನಾವಣೆಯಲ್ಲಿ ವಿಪಕ್ಷಗಳಿಂದ ಕೆಲವರು ಲೋಕಸಭೆಗೆ ಸ್ಪರ್ಧಿಸಲು ಹಿಂದೇಟು ಹಾಕಲಿದ್ದಾರೆ. ರಾಜ್ಯಸಭೆಯಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಕೆಲವರು ಎಂದಿನಂತೆ ಈ ಬಾರಿಯೂ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ” ಎಂದು ಬಹಿರಂಗವಾಗಿ ತಿಳಿಸಿದ್ದರು. ಅವರು ಹಾಗೆ ಹೇಳಿದ್ದು ವಿಪಕ್ಷ ಕಾಂಗ್ರೆಸ್ ಕುರಿತಾದರೂ ಅದು ಇಷ್ಟು ಬೇಗ ನಿಜವಾಗುತ್ತೆ ಎಂದು ಅನಿಸಿರಲಿಲ್ಲ. ಆದರೆ ಅಧಿವೇಶನ ಮುಗಿಸಿ ಇನ್ನು ಕೂಡ ವಾರ ಮುಗಿದಿಲ್ಲ, ಮೋದಿ ಭವಿಷ್ಯ ಸತ್ಯವಾಗಿದೆ.

1999 ರಲ್ಲಿ ಅಮೇಥಿ ಮತ್ತು ಬಳ್ಳಾರಿ ಎರಡು ಕಡೆಯಿಂದ ಸ್ಪರ್ಧಿಸಿ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾದ ಸೋನಿಯಾ ಅವರು ಅಮೇಥಿಯನ್ನು ಉಳಿಸಿಕೊಂಡರು. ಆಗ ಅವರ ವಿರುದ್ಧ ಬಳ್ಳಾರಿಯಿಂದ ಸ್ಪರ್ಧಿಸಿದ್ದು ಸುಷ್ಮಾ ಸ್ವರಾಜ್. ನಂತರ ಮುಂದಿನ ಚುನಾವಣೆಯಲ್ಲಿ ಸೋನಿಯಾ ಅಮೇಥಿಯನ್ನು ಮಗನಿಗೆ ಬಿಟ್ಟುಕೊಟ್ಟು ತಾವು ಪಕ್ಕದ ರಾಯಬರೇಲಿಯಿಂದ ಸ್ಪರ್ಧಿಸಿದರು. 2004 ರಿಂದ ಅದೇ ಕ್ಷೇತ್ರದಿಂದ ಗೆಲ್ಲುತ್ತಿರುವ ಸೋನಿಯಾ 2006 ರ ಉಪಚುನಾವಣೆಯೂ ಸೇರಿದಂತೆ ಐದು ಬಾರಿ ರಾಯಬರೇಲಿಯಿಂದ ಒಮ್ಮೆ ಅಮೇಥಿಯಿಂದ ಒಟ್ಟು ಆರು ಬಾರಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದಾರೆ. ಇಲ್ಲಿಯ ತನಕ ಸೋಲು ಕಾರಣ ಸೋನಿಯಾ ಈ ಬಾರಿ ಸೋಲಿನ ರುಚಿಯನ್ನು ಗ್ರಹಿಸಿದರೇ? ಎನ್ನುವ ಪ್ರಶ್ನೆ ಉದ್ಭವಿಸುತ್ತಿದೆ. ಕಳೆದ ಬಾರಿ ಪರಂಪರಾಗತವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಪುತ್ರ ರಾಹುಲ್ ಬಿಜೆಪಿಯ ಮುಖಂಡೆ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡರೋ ಅದರ ಬಳಿಕ ಈ ಬಾರಿ ಅಂತಹ ಫಲಿತಾಂಶ ರಾಯಬರೇಲಿಯಿಂದ ಬರಬಹುದಾ ಎನ್ನುವ ಆತಂಕ ಗಾಂಧಿ ಕುಟುಂಬಕ್ಕೆ ಇದ್ದಂತಿದೆ.

ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಮುಖಂಡರು ಕಾಂಗ್ರೆಸ್ಸಿಗೆ ಚುನಾವಣೆಯ ಮೊದಲೇ ಸೋಲಿನ ಮುನ್ಸೂಚನೆ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಅಮೇಥಿ ಕಾಂಗ್ರೆಸ್ ರಾಜಪರಿವಾರದಿಂದ ಕೈತಪ್ಪಿ ಹೋಗಿದ್ದರೆ ಈ ಬಾರಿ ರಾಯಬರೇಲಿಯಲ್ಲಿಯೂ ಅದೇ ಇತಿಹಾಸ ಮರುಕಳಿಸಬಹುದು ಎಂಬ ಹಿಂಟ್ ಗಾಂಧೀ ಕುಟುಂಬಕ್ಕೆ ಸಿಕ್ಕಿರಬಹುದು. ಅಜ್ಜ ನೆಟ್ಟ ಆಲದಮರ ಎಂದು ನೇತಾಡುವ ಪರಿಸ್ಥಿತಿ ಈಗ ಉತ್ತರ ಪ್ರದೇಶದಲ್ಲಿ ಇಲ್ಲ. ಆದ್ದರಿಂದ ಎರಡೆರಡು ಕಡೆ ತಾನೇ ನಿಂತು ಸುಮ್ಮನೆ ಸೋಲುವ ಸೂಚನೆಯನ್ನು ರವಾನಿಸುವ ಬದಲು ಎರಡು ತಿಂಗಳ ಮೊದಲೇ ಸೈಲೆಂಟಾಗಿ ಹಿಂದೆ ಸರಿದುಬಿಟ್ಟರೆ ರಗಳೆ ಇಲ್ವಲ್ಲಾ ಎನ್ನುವುದು ಕಾಂಗ್ರೆಸ್ ಕಿಚನ್ ಕ್ಯಾಬಿನೆಟ್ ಸೋನಿಯಾ ಅವರಿಗೆ ಐಡಿಯಾ ನೀಡಿರಬಹುದು.

ಇನ್ನು ಸೋನಿಯಾ ಬಿಟ್ಟುಕೊಡಲಿರುವ ರಾಯಬರೇಲಿಯಿಂದ ಗಾಂಧಿ ಕುಟುಂಬದಿಂದಲೇ ಯಾರಾದರೂ ಸ್ಪರ್ಧಿಸುತ್ತಾರಾ? ಪ್ರಿಯಾಂಕಾ ವಾದ್ರಾ. ಆ ಬಗ್ಗೆ ಈಗಲೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಅವರು ಈ ಬಾರಿ ತಾಯಿಯ ಸ್ಥಾನವನ್ನು ರಾಯಬರೇಲಿಯಲ್ಲಿ ತುಂಬುತ್ತಾರಾ ಅಥವಾ ಪುತ್ರ ರಾಹುಲ್ ರಾಯಬರೇಲಿಗೆ ಬರುತ್ತಾರಾ, ಹದಿನೈದು ದಿನಗಳಲ್ಲಿ ಉತ್ತರ ಸಿಗಬಹುದು!

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search