• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಹೇಳಿದ ಭವಿಷ್ಯ ವಾರದೊಳಗೆ ನಿಜವಾಗಿದೆ!

Tulunadu News Posted On February 16, 2024
0


0
Shares
  • Share On Facebook
  • Tweet It

ತಮ್ಮ ಸರಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಚುನಾವಣೆಯಲ್ಲಿ ವಿಪಕ್ಷಗಳಿಂದ ಕೆಲವರು ಲೋಕಸಭೆಗೆ ಸ್ಪರ್ಧಿಸಲು ಹಿಂದೇಟು ಹಾಕಲಿದ್ದಾರೆ. ರಾಜ್ಯಸಭೆಯಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಕೆಲವರು ಎಂದಿನಂತೆ ಈ ಬಾರಿಯೂ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ” ಎಂದು ಬಹಿರಂಗವಾಗಿ ತಿಳಿಸಿದ್ದರು. ಅವರು ಹಾಗೆ ಹೇಳಿದ್ದು ವಿಪಕ್ಷ ಕಾಂಗ್ರೆಸ್ ಕುರಿತಾದರೂ ಅದು ಇಷ್ಟು ಬೇಗ ನಿಜವಾಗುತ್ತೆ ಎಂದು ಅನಿಸಿರಲಿಲ್ಲ. ಆದರೆ ಅಧಿವೇಶನ ಮುಗಿಸಿ ಇನ್ನು ಕೂಡ ವಾರ ಮುಗಿದಿಲ್ಲ, ಮೋದಿ ಭವಿಷ್ಯ ಸತ್ಯವಾಗಿದೆ.

1999 ರಲ್ಲಿ ಅಮೇಥಿ ಮತ್ತು ಬಳ್ಳಾರಿ ಎರಡು ಕಡೆಯಿಂದ ಸ್ಪರ್ಧಿಸಿ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾದ ಸೋನಿಯಾ ಅವರು ಅಮೇಥಿಯನ್ನು ಉಳಿಸಿಕೊಂಡರು. ಆಗ ಅವರ ವಿರುದ್ಧ ಬಳ್ಳಾರಿಯಿಂದ ಸ್ಪರ್ಧಿಸಿದ್ದು ಸುಷ್ಮಾ ಸ್ವರಾಜ್. ನಂತರ ಮುಂದಿನ ಚುನಾವಣೆಯಲ್ಲಿ ಸೋನಿಯಾ ಅಮೇಥಿಯನ್ನು ಮಗನಿಗೆ ಬಿಟ್ಟುಕೊಟ್ಟು ತಾವು ಪಕ್ಕದ ರಾಯಬರೇಲಿಯಿಂದ ಸ್ಪರ್ಧಿಸಿದರು. 2004 ರಿಂದ ಅದೇ ಕ್ಷೇತ್ರದಿಂದ ಗೆಲ್ಲುತ್ತಿರುವ ಸೋನಿಯಾ 2006 ರ ಉಪಚುನಾವಣೆಯೂ ಸೇರಿದಂತೆ ಐದು ಬಾರಿ ರಾಯಬರೇಲಿಯಿಂದ ಒಮ್ಮೆ ಅಮೇಥಿಯಿಂದ ಒಟ್ಟು ಆರು ಬಾರಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದಾರೆ. ಇಲ್ಲಿಯ ತನಕ ಸೋಲು ಕಾರಣ ಸೋನಿಯಾ ಈ ಬಾರಿ ಸೋಲಿನ ರುಚಿಯನ್ನು ಗ್ರಹಿಸಿದರೇ? ಎನ್ನುವ ಪ್ರಶ್ನೆ ಉದ್ಭವಿಸುತ್ತಿದೆ. ಕಳೆದ ಬಾರಿ ಪರಂಪರಾಗತವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಪುತ್ರ ರಾಹುಲ್ ಬಿಜೆಪಿಯ ಮುಖಂಡೆ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡರೋ ಅದರ ಬಳಿಕ ಈ ಬಾರಿ ಅಂತಹ ಫಲಿತಾಂಶ ರಾಯಬರೇಲಿಯಿಂದ ಬರಬಹುದಾ ಎನ್ನುವ ಆತಂಕ ಗಾಂಧಿ ಕುಟುಂಬಕ್ಕೆ ಇದ್ದಂತಿದೆ.

ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಮುಖಂಡರು ಕಾಂಗ್ರೆಸ್ಸಿಗೆ ಚುನಾವಣೆಯ ಮೊದಲೇ ಸೋಲಿನ ಮುನ್ಸೂಚನೆ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಅಮೇಥಿ ಕಾಂಗ್ರೆಸ್ ರಾಜಪರಿವಾರದಿಂದ ಕೈತಪ್ಪಿ ಹೋಗಿದ್ದರೆ ಈ ಬಾರಿ ರಾಯಬರೇಲಿಯಲ್ಲಿಯೂ ಅದೇ ಇತಿಹಾಸ ಮರುಕಳಿಸಬಹುದು ಎಂಬ ಹಿಂಟ್ ಗಾಂಧೀ ಕುಟುಂಬಕ್ಕೆ ಸಿಕ್ಕಿರಬಹುದು. ಅಜ್ಜ ನೆಟ್ಟ ಆಲದಮರ ಎಂದು ನೇತಾಡುವ ಪರಿಸ್ಥಿತಿ ಈಗ ಉತ್ತರ ಪ್ರದೇಶದಲ್ಲಿ ಇಲ್ಲ. ಆದ್ದರಿಂದ ಎರಡೆರಡು ಕಡೆ ತಾನೇ ನಿಂತು ಸುಮ್ಮನೆ ಸೋಲುವ ಸೂಚನೆಯನ್ನು ರವಾನಿಸುವ ಬದಲು ಎರಡು ತಿಂಗಳ ಮೊದಲೇ ಸೈಲೆಂಟಾಗಿ ಹಿಂದೆ ಸರಿದುಬಿಟ್ಟರೆ ರಗಳೆ ಇಲ್ವಲ್ಲಾ ಎನ್ನುವುದು ಕಾಂಗ್ರೆಸ್ ಕಿಚನ್ ಕ್ಯಾಬಿನೆಟ್ ಸೋನಿಯಾ ಅವರಿಗೆ ಐಡಿಯಾ ನೀಡಿರಬಹುದು.

ಇನ್ನು ಸೋನಿಯಾ ಬಿಟ್ಟುಕೊಡಲಿರುವ ರಾಯಬರೇಲಿಯಿಂದ ಗಾಂಧಿ ಕುಟುಂಬದಿಂದಲೇ ಯಾರಾದರೂ ಸ್ಪರ್ಧಿಸುತ್ತಾರಾ? ಪ್ರಿಯಾಂಕಾ ವಾದ್ರಾ. ಆ ಬಗ್ಗೆ ಈಗಲೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಅವರು ಈ ಬಾರಿ ತಾಯಿಯ ಸ್ಥಾನವನ್ನು ರಾಯಬರೇಲಿಯಲ್ಲಿ ತುಂಬುತ್ತಾರಾ ಅಥವಾ ಪುತ್ರ ರಾಹುಲ್ ರಾಯಬರೇಲಿಗೆ ಬರುತ್ತಾರಾ, ಹದಿನೈದು ದಿನಗಳಲ್ಲಿ ಉತ್ತರ ಸಿಗಬಹುದು!

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search