• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈಗೆ ಮಂಗಳೂರಿನಿಂದ ವಂದೇ ಭಾರತ್ ರೈಲು ವಿಸ್ತರಣೆಗೆ ನಳಿನ್ ಪತ್ರ

Tulunadu News Posted On February 21, 2024
0


0
Shares
  • Share On Facebook
  • Tweet It

ಪ್ರಯಾಣಿಕರ ಅನುಕೂಲತೆಗೆ ಇದು ಅಗತ್ಯ ಎಂದು ರೈಲ್ವೆ ಸಚಿವರಿಗೆ ಮನವಿ

ಮಂಗಳೂರು ಸೆಂಟ್ರಲ್ – ಮಡಗಾಂ ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ (ವಿ.ಬಿ) ರೈಲನ್ನು ಮುಂಬಯಿಯವರೆಗೆ ವಿಸ್ತರಿಸುವ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಯಾಣಿಕರಿಗೆ ನ್ಯಾಯ ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಸ್ತುತ ಕೆಲವರು ಮಂಗಳೂರು ವಂದೇ ಭಾರತ್ ರೈಲನ್ನೇ ಕೋಯಿಕ್ಕೋಡ್ ಗೆ ವಿಸ್ತರಿಸಬೇಕೆಂಬ ಬೇಡಿಕೆ ಮಂಡಿಸಿರುವುದು ಕಂಡುಬಂದಿದೆ. ಆದರೆ ಈ ವಿಸ್ತರಣೆಯಿಂದ ಯಾವುದೇ ಉಪಯೋಗವಿಲ್ಲ. ಅದರ ಬದಲಿಗೆ ಮುಂಬೈಗೆ ವಿಸ್ತರಿಸುವುದರಿಂದ ಹೆಚ್ಚು ಉಪಯೋಗವಿದೆ. ಮಂಗಳೂರು ಭಾಗದಿಂದ ಮುಂಬೈಗೆ ತೆರಳುವ ಎಲ್ಲಾ ರೈಲುಗಳಲ್ಲಿ ಯಾವಾಗಲೂ ಆಸನಗಳು ಭರ್ತಿಯಾಗುವುದರಿಂದ ಈ ರೂಟಿನಲ್ಲಿ ವಂದೇ ಭಾರತ್ ರೈಲು ಓಡಿಸಿದರೆ ಜನರಿಗೂ ಹೆಚ್ಚು ಉಪಯೋಗವಾಗಲಿದೆ. ಮಂಗಳೂರಿನಿಂದ ಮುಂಬೈಗೆ ಉದ್ಯೋಗ, ವ್ಯವಹಾರಕ್ಕೆ ತೆರಳುವವರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಎರಡು ಪ್ರಮುಖ ಕಡೆ ನಿಲುಗಡೆಗೆ ಮನವಿ

ಈಗ ಈ ರೈಲು ಮೂಕಾಂಬಿಕಾ ರೋಡ್ ಬೈಂದೂರು ಮತ್ತು ಕುಮಟಾ ನಿಲ್ದಾಣಗಳಲ್ಲಿ ನಿಲುಗಡೆಯಿಲ್ಲ. ಈ ಪ್ರದೇಶಗಳಿಗೆ ದೊಡ್ಡ ಸಂಖ್ಯೆಯಲ್ಲಿ ಯಾತ್ರಿಕರು ಬರುತ್ತಾರೆ. ಆದರೆ ವಂದೇ ಭಾರತ್ ಗೆ ನಿಲುಗಡೆ ಇರದ ಕಾರಣ ಪ್ರಯಾಣಿಕರು ಸೌಲಭ್ಯವನ್ನು ಬಳಸಿಕೊಳ್ಳದಂತಾಗಿದೆ. ಮುಂಬೈಗೆ ವಿಸ್ತರಣೆಯಾಗುವಾಗಲೂ ಈ ಎರಡು ನಿಲ್ದಾಣಗಳಲ್ಲಿ ನಿಲುಗಡೆ ಒದಗಿಸಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.
ಇತರ ರೈಲುಗಳಿಗಿಂತ ವಂದೇ ಭಾರತ್ ರೈಲಿನಲ್ಲಿ ಹೆಚ್ಚಿನ ಸೌಲಭ್ಯ, ಉತ್ತಮ ಆಸನ ವ್ಯವಸ್ಥೆ, ಅಧಿಕ ವೇಗ ಹಾಗೂ ಆರಾಮದಾಯಕವಾಗಿದೆ. ಹಾಗಾಗಿ 12 ಗಂಟೆಗಿಂತ ಅಧಿಕ ಪ್ರಯಾಣ ಅವಧಿ ಇದ್ದರೂ ಕುಳಿತು ಪ್ರಯಾಣಿಸುವುದು ತ್ರಾಸದಾಯಕವಲ್ಲ. ಹಾಗಾಗಿ ವಂದೇ ಭಾರತ್ ಮುಂಬಯಿಗೆ ವಿಸ್ತರಣೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಮಂಗಳೂರು – ಮಡಗಾಂ ವಿಸ್ತರಣೆ ಅಸಾಧ್ಯವಾದರೆ ಮಂಗಳೂರು – ಮಡಗಾಂ ರೈಲನ್ನೇ ಮುಂಬೈಗೆ ಈಗಿರುವ ಕೋಚ್ ಗಳೊಂದಿಗೆ ವಾರಕ್ಕೆ ಮೂರು ದಿನಗಳಂತೆ ಮುಂಬೈ ಮತ್ತು ಮಂಗಳೂರು ಸೆಂಟ್ರಲ್ ಮಧ್ಯೆ ಓಡಿಸಿದರೆ ಜನರಿಗೆ ಅನುಕೂಲವಾಗಲಿದೆ. ಹಾಗೆಯೇ ಪ್ರವಾಸೋದ್ಯಮಕ್ಕೂ ಪುಷ್ಟಿ ಸಿಗಲಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search