• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈಗೆ ಮಂಗಳೂರಿನಿಂದ ವಂದೇ ಭಾರತ್ ರೈಲು ವಿಸ್ತರಣೆಗೆ ನಳಿನ್ ಪತ್ರ

Tulunadu News Posted On February 21, 2024
0


0
Shares
  • Share On Facebook
  • Tweet It

ಪ್ರಯಾಣಿಕರ ಅನುಕೂಲತೆಗೆ ಇದು ಅಗತ್ಯ ಎಂದು ರೈಲ್ವೆ ಸಚಿವರಿಗೆ ಮನವಿ

ಮಂಗಳೂರು ಸೆಂಟ್ರಲ್ – ಮಡಗಾಂ ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ (ವಿ.ಬಿ) ರೈಲನ್ನು ಮುಂಬಯಿಯವರೆಗೆ ವಿಸ್ತರಿಸುವ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಯಾಣಿಕರಿಗೆ ನ್ಯಾಯ ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಸ್ತುತ ಕೆಲವರು ಮಂಗಳೂರು ವಂದೇ ಭಾರತ್ ರೈಲನ್ನೇ ಕೋಯಿಕ್ಕೋಡ್ ಗೆ ವಿಸ್ತರಿಸಬೇಕೆಂಬ ಬೇಡಿಕೆ ಮಂಡಿಸಿರುವುದು ಕಂಡುಬಂದಿದೆ. ಆದರೆ ಈ ವಿಸ್ತರಣೆಯಿಂದ ಯಾವುದೇ ಉಪಯೋಗವಿಲ್ಲ. ಅದರ ಬದಲಿಗೆ ಮುಂಬೈಗೆ ವಿಸ್ತರಿಸುವುದರಿಂದ ಹೆಚ್ಚು ಉಪಯೋಗವಿದೆ. ಮಂಗಳೂರು ಭಾಗದಿಂದ ಮುಂಬೈಗೆ ತೆರಳುವ ಎಲ್ಲಾ ರೈಲುಗಳಲ್ಲಿ ಯಾವಾಗಲೂ ಆಸನಗಳು ಭರ್ತಿಯಾಗುವುದರಿಂದ ಈ ರೂಟಿನಲ್ಲಿ ವಂದೇ ಭಾರತ್ ರೈಲು ಓಡಿಸಿದರೆ ಜನರಿಗೂ ಹೆಚ್ಚು ಉಪಯೋಗವಾಗಲಿದೆ. ಮಂಗಳೂರಿನಿಂದ ಮುಂಬೈಗೆ ಉದ್ಯೋಗ, ವ್ಯವಹಾರಕ್ಕೆ ತೆರಳುವವರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಎರಡು ಪ್ರಮುಖ ಕಡೆ ನಿಲುಗಡೆಗೆ ಮನವಿ

ಈಗ ಈ ರೈಲು ಮೂಕಾಂಬಿಕಾ ರೋಡ್ ಬೈಂದೂರು ಮತ್ತು ಕುಮಟಾ ನಿಲ್ದಾಣಗಳಲ್ಲಿ ನಿಲುಗಡೆಯಿಲ್ಲ. ಈ ಪ್ರದೇಶಗಳಿಗೆ ದೊಡ್ಡ ಸಂಖ್ಯೆಯಲ್ಲಿ ಯಾತ್ರಿಕರು ಬರುತ್ತಾರೆ. ಆದರೆ ವಂದೇ ಭಾರತ್ ಗೆ ನಿಲುಗಡೆ ಇರದ ಕಾರಣ ಪ್ರಯಾಣಿಕರು ಸೌಲಭ್ಯವನ್ನು ಬಳಸಿಕೊಳ್ಳದಂತಾಗಿದೆ. ಮುಂಬೈಗೆ ವಿಸ್ತರಣೆಯಾಗುವಾಗಲೂ ಈ ಎರಡು ನಿಲ್ದಾಣಗಳಲ್ಲಿ ನಿಲುಗಡೆ ಒದಗಿಸಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.
ಇತರ ರೈಲುಗಳಿಗಿಂತ ವಂದೇ ಭಾರತ್ ರೈಲಿನಲ್ಲಿ ಹೆಚ್ಚಿನ ಸೌಲಭ್ಯ, ಉತ್ತಮ ಆಸನ ವ್ಯವಸ್ಥೆ, ಅಧಿಕ ವೇಗ ಹಾಗೂ ಆರಾಮದಾಯಕವಾಗಿದೆ. ಹಾಗಾಗಿ 12 ಗಂಟೆಗಿಂತ ಅಧಿಕ ಪ್ರಯಾಣ ಅವಧಿ ಇದ್ದರೂ ಕುಳಿತು ಪ್ರಯಾಣಿಸುವುದು ತ್ರಾಸದಾಯಕವಲ್ಲ. ಹಾಗಾಗಿ ವಂದೇ ಭಾರತ್ ಮುಂಬಯಿಗೆ ವಿಸ್ತರಣೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಮಂಗಳೂರು – ಮಡಗಾಂ ವಿಸ್ತರಣೆ ಅಸಾಧ್ಯವಾದರೆ ಮಂಗಳೂರು – ಮಡಗಾಂ ರೈಲನ್ನೇ ಮುಂಬೈಗೆ ಈಗಿರುವ ಕೋಚ್ ಗಳೊಂದಿಗೆ ವಾರಕ್ಕೆ ಮೂರು ದಿನಗಳಂತೆ ಮುಂಬೈ ಮತ್ತು ಮಂಗಳೂರು ಸೆಂಟ್ರಲ್ ಮಧ್ಯೆ ಓಡಿಸಿದರೆ ಜನರಿಗೆ ಅನುಕೂಲವಾಗಲಿದೆ. ಹಾಗೆಯೇ ಪ್ರವಾಸೋದ್ಯಮಕ್ಕೂ ಪುಷ್ಟಿ ಸಿಗಲಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search