• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂಬೈಗೆ ಮಂಗಳೂರಿನಿಂದ ವಂದೇ ಭಾರತ್ ರೈಲು ವಿಸ್ತರಣೆಗೆ ನಳಿನ್ ಪತ್ರ

Tulunadu News Posted On February 21, 2024
0


0
Shares
  • Share On Facebook
  • Tweet It

ಪ್ರಯಾಣಿಕರ ಅನುಕೂಲತೆಗೆ ಇದು ಅಗತ್ಯ ಎಂದು ರೈಲ್ವೆ ಸಚಿವರಿಗೆ ಮನವಿ

ಮಂಗಳೂರು ಸೆಂಟ್ರಲ್ – ಮಡಗಾಂ ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ (ವಿ.ಬಿ) ರೈಲನ್ನು ಮುಂಬಯಿಯವರೆಗೆ ವಿಸ್ತರಿಸುವ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಯಾಣಿಕರಿಗೆ ನ್ಯಾಯ ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಸ್ತುತ ಕೆಲವರು ಮಂಗಳೂರು ವಂದೇ ಭಾರತ್ ರೈಲನ್ನೇ ಕೋಯಿಕ್ಕೋಡ್ ಗೆ ವಿಸ್ತರಿಸಬೇಕೆಂಬ ಬೇಡಿಕೆ ಮಂಡಿಸಿರುವುದು ಕಂಡುಬಂದಿದೆ. ಆದರೆ ಈ ವಿಸ್ತರಣೆಯಿಂದ ಯಾವುದೇ ಉಪಯೋಗವಿಲ್ಲ. ಅದರ ಬದಲಿಗೆ ಮುಂಬೈಗೆ ವಿಸ್ತರಿಸುವುದರಿಂದ ಹೆಚ್ಚು ಉಪಯೋಗವಿದೆ. ಮಂಗಳೂರು ಭಾಗದಿಂದ ಮುಂಬೈಗೆ ತೆರಳುವ ಎಲ್ಲಾ ರೈಲುಗಳಲ್ಲಿ ಯಾವಾಗಲೂ ಆಸನಗಳು ಭರ್ತಿಯಾಗುವುದರಿಂದ ಈ ರೂಟಿನಲ್ಲಿ ವಂದೇ ಭಾರತ್ ರೈಲು ಓಡಿಸಿದರೆ ಜನರಿಗೂ ಹೆಚ್ಚು ಉಪಯೋಗವಾಗಲಿದೆ. ಮಂಗಳೂರಿನಿಂದ ಮುಂಬೈಗೆ ಉದ್ಯೋಗ, ವ್ಯವಹಾರಕ್ಕೆ ತೆರಳುವವರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಎರಡು ಪ್ರಮುಖ ಕಡೆ ನಿಲುಗಡೆಗೆ ಮನವಿ

ಈಗ ಈ ರೈಲು ಮೂಕಾಂಬಿಕಾ ರೋಡ್ ಬೈಂದೂರು ಮತ್ತು ಕುಮಟಾ ನಿಲ್ದಾಣಗಳಲ್ಲಿ ನಿಲುಗಡೆಯಿಲ್ಲ. ಈ ಪ್ರದೇಶಗಳಿಗೆ ದೊಡ್ಡ ಸಂಖ್ಯೆಯಲ್ಲಿ ಯಾತ್ರಿಕರು ಬರುತ್ತಾರೆ. ಆದರೆ ವಂದೇ ಭಾರತ್ ಗೆ ನಿಲುಗಡೆ ಇರದ ಕಾರಣ ಪ್ರಯಾಣಿಕರು ಸೌಲಭ್ಯವನ್ನು ಬಳಸಿಕೊಳ್ಳದಂತಾಗಿದೆ. ಮುಂಬೈಗೆ ವಿಸ್ತರಣೆಯಾಗುವಾಗಲೂ ಈ ಎರಡು ನಿಲ್ದಾಣಗಳಲ್ಲಿ ನಿಲುಗಡೆ ಒದಗಿಸಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.
ಇತರ ರೈಲುಗಳಿಗಿಂತ ವಂದೇ ಭಾರತ್ ರೈಲಿನಲ್ಲಿ ಹೆಚ್ಚಿನ ಸೌಲಭ್ಯ, ಉತ್ತಮ ಆಸನ ವ್ಯವಸ್ಥೆ, ಅಧಿಕ ವೇಗ ಹಾಗೂ ಆರಾಮದಾಯಕವಾಗಿದೆ. ಹಾಗಾಗಿ 12 ಗಂಟೆಗಿಂತ ಅಧಿಕ ಪ್ರಯಾಣ ಅವಧಿ ಇದ್ದರೂ ಕುಳಿತು ಪ್ರಯಾಣಿಸುವುದು ತ್ರಾಸದಾಯಕವಲ್ಲ. ಹಾಗಾಗಿ ವಂದೇ ಭಾರತ್ ಮುಂಬಯಿಗೆ ವಿಸ್ತರಣೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಮಂಗಳೂರು – ಮಡಗಾಂ ವಿಸ್ತರಣೆ ಅಸಾಧ್ಯವಾದರೆ ಮಂಗಳೂರು – ಮಡಗಾಂ ರೈಲನ್ನೇ ಮುಂಬೈಗೆ ಈಗಿರುವ ಕೋಚ್ ಗಳೊಂದಿಗೆ ವಾರಕ್ಕೆ ಮೂರು ದಿನಗಳಂತೆ ಮುಂಬೈ ಮತ್ತು ಮಂಗಳೂರು ಸೆಂಟ್ರಲ್ ಮಧ್ಯೆ ಓಡಿಸಿದರೆ ಜನರಿಗೆ ಅನುಕೂಲವಾಗಲಿದೆ. ಹಾಗೆಯೇ ಪ್ರವಾಸೋದ್ಯಮಕ್ಕೂ ಪುಷ್ಟಿ ಸಿಗಲಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search