• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮುಚ್ಚಿಹಾಕಿದ್ದ ಇತಿಹಾಸದ ಅಧ್ಯಾಯ `ರಜಾಕರ್´

Tulunadu News Posted On March 18, 2024
0


0
Shares
  • Share On Facebook
  • Tweet It

ಇತ್ತೀಚಿಗೆ ನಮ್ಮ ದೇಶದ ಸಿನಿಮಾರಂಗದಲ್ಲಿ ಇತಿಹಾಸ ಆಧಾರಿತ ಕಥೆಯನ್ನು ದೃಶ್ಯಕಾವ್ಯವನ್ನಾಗಿಸಿ ಪ್ರೇಕ್ಷಕರಿಗೆ ನೈಜ ಇತಿಹಾಸವನ್ನು ಹೇಳುವ ಪ್ರಯತ್ನ ನಡೆಯುತ್ತಲೇ ಬಂದಿದೆ. ವಿವೇಕ್ ಅಗ್ನಿಹೋತ್ರಿ ಯವರ `ದಿ ಕಾಶ್ಮೀರ್ ಫೈಲ್ಸ್’ ನಂತಹ ಸಿನಿಮಾ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ ಅಂದರು ತಪ್ಪಾಗದು.ಕೆಲವೊಂದು ರಾಜಕೀಯ ಹಿತಾಸಕ್ತಿಗಳ ಷಡ್ಯಂತ್ರದ ಭಾಗವಾಗಿ ಈ ದೇಶದ ನೈಜ ಇತಿಹಾಸ ತೆರೆಯ ಮರೆಯಲ್ಲೇ ಅಡಕವಾಗಿತ್ತು ಆದರೆ ಈಗ ಸಿನಿಮಾದ ಮುಖಂತರ ಅದೆಲ್ಲ ಹೊರ ಬರುತ್ತಿದೆ.

ಇದಕ್ಕೆ ಪೂರಕವಾಗಿ ಯಾಟ ಸತ್ಯನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ `ರಜಾಕರ್´ ಎಂಬ ಸಿನಿಮಾ ಬೆಳ್ಳಿಪರದೆಗೆ ಬಂದಪ್ಪಳಿಸಿದೆ.

ಮಾರ್ಚ್ 15 ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅಷ್ಟಕ್ಕೂ ಈ ಸಿನಿಮಾ ಈಗ ಸದ್ದು ಮಾಡಲು ಮುಖ್ಯ ಕಾರಣ ಇದು ನೈಜ ಇತಿಹಾಸ ಆಧಾರಿತ ಸಿನಿಮಾ, ಹೈದೆರಾಬಾದ್ ಕರ್ನಾಟಕ ಭಾಗದಲ್ಲಿ 1947 ರ ನಂತರ ನಡೆದ ಸಾಮೂಹಿಕ ಹಿಂದೂ ನರಮೇಧದ ಕಥೆ.

ಹೌದು ಹೈದರಾಬಾದ್ ನಲ್ಲಿ 1947 ರ ನಂತರ ಅಂದರೆ ಈ ದೇಶಕ್ಕೆ ಸ್ವಾತಂತ್ರ ದೊರಕಿದ ನಂತರ ಒಂದು ದೊಡ್ಡ ನರಮೇಧ ನಡೆದಿತ್ತು ಆದರೆ ಅದು ಇತಿಹಾಸದ ಪರದೆಯಡಿಯಲ್ಲಿ ಮರೆಯಾಗಿತ್ತು ಆದರೆ ಅದು ಈಗ `ರಜಾಕರ್´ ಸಿನಿಮಾದ ಮೂಲಕ ಬೆಳಕಿಗೆ ಬಂದಿದೆ.
ಹೈದೆರಾಬಾದ್ ಕರ್ನಾಟಕ ಭಾಗವು ರಜಾಕರ ಆಡಳಿತದಲ್ಲಿದ್ದಾಗ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಕತೆಯ ಜೊತೆಗೆ ಸ್ವಾತಂತ್ರ್ಯದ ನಂತರ ಅಲ್ಲಿನ ರಜಾಕರು (ಮುಸ್ಲಿಮ್ ಆಡಳಿತಗಾರರು) ಹೇಗೆ ಆ ಪ್ರದೇಶವನ್ನು ತಮ್ಮ ತೆಕ್ಕೆಯಲ್ಲೇ ಇಡಲು ಷಡ್ಯಂತ್ರ ಮಾಡಿದರು ಮತ್ತು ಹಿಂದೂಗಳ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡಿದರು ಎಂಬ ಚಿತ್ರಣವನ್ನು ಈ ದೃಶ್ಯಕಾವ್ಯ ಬಿಚ್ಚಿಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೈದೆರಾಬಾದ್ ಕರ್ನಾಟಕವನ್ನು ಭಾರತಕ್ಕೆ ಹೇಗೆ ಸೇರಿಸಲಾಯಿತು,ಈ ದೇಶದ ಮೊದಲ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಜಾಕರ ತೆಕ್ಕೆಯಲ್ಲಿದ್ದ ಹೈದೆರಾಬಾದ್ ಕರ್ನಾಟಕವನ್ನು ಹೇಗೆ ಶಾಂತವನ್ನಗಿಸಿದರು ಎಂಬ ಕಥೆಯನ್ನು ಈ ಸಿನೆಮಾ ಹೇಳುತ್ತದೆ.

 

https://youtu.be/QRtlHmID7n4?si=wSMhRIQfCOz415Tc

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search