• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಧ್ಯಮಗಳು ಮೋದಿಪರ ಎಂಬ ಟೀಕೆಗೆ ಇಲ್ಲಿದೆ ಉತ್ತರ!

Tulunadu News Posted On March 18, 2024
0


0
Shares
  • Share On Facebook
  • Tweet It

ಮಾಧ್ಯಮಗಳು ವಿಪಕ್ಷಗಳ ಪಾತ್ರವನ್ನೇ ವಹಿಸಬೇಕಾಗಿಲ್ಲ ಎಂದು ಇಂಡಿಯಾ ಟುಡೇ ಗ್ರೂಪ್ ಉಪಾಧ್ಯಕ್ಷೆ ಕಾಳ್ಳಿ ಪುರಿ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳು ಮೋದಿಯವರನ್ನೇ ಹೈಲೈಟ್ ಮಾಡುತ್ತಿವೆ ಎನ್ನುವ ಆರೋಪಗಳನ್ನು ಕಾಂಗ್ರೆಸ್ಸಿಗರು ಮಾಡುತ್ತಲೇ ಬಂದಿದ್ದಾರೆ. ವಿಪಕ್ಷಗಳಿಗೆ ಮಾಧ್ಯಮಗಳಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎನ್ನುವ ಟೀಕೆ, ವ್ಯಂಗ್ಯಗಳನ್ನು ಮಾಧ್ಯಮಗಳು ಎದುರಿಸುತ್ತಿವೆ. ಕೆಲವರು ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿಯವರ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತಿರುವುದರಿಂದ ಮೋದಿಯವರ ಮೈಲೇಜ್ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡರು ಬಹಿರಂಗವಾಗಿ ಹೇಳುತ್ತಾ ಬಂದಿದ್ದಾರೆ. ಕೆಲವರು ಮೋದಿಯವರ ಕಾರ್ಯಕ್ರಮಗಳನ್ನು ತೋರಿಸುವ ಮಾಧ್ಯಮಗಳಿಗೆ ಗೋಧಿ ಮೀಡಿಯಾ ಎಂದು ಹಣೆಪಟ್ಟಿ ಕಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ದೇಶದ ಪ್ರಮುಖ ಮಾಧ್ಯಮ ಸಂಸ್ಥೆ ಇಂಡಿಯಾ ಗ್ರೂಪ್ ಇದರ ಉಪಾಧ್ಯಕ್ಷೆ ಕಾಳ್ಳಿ ಪುರಿಯವರು ಗೋಧಿ ಮೀಡಿಯಾ, ಮೋದಿ ಮೀಡಿಯಾ ಹೀಗೆ ಏನೇನೋ ವರ್ಗಿಕರಣ ಮಾಡುವುದು ಸರಿಯಲ್ಲ, ದೇಶದ ಪ್ರಜಾಪ್ರಭುತ್ವದಲ್ಲಿ ಪ್ರಬಲವಾಗಿರಬೇಕಾದ ವಿಪಕ್ಷಗಳು ಅಸ್ತವ್ಯಸ್ತವಾಗಿ ತಮ್ಮೊಳಗೆ ಎಲ್ಲವೂ ಸರಿಯಿಲ್ಲ ಎಂದು ಜನಸಾಮಾನ್ಯರ ಕಣ್ಣಿಗೂ ಕಾಣುವಂತೆ ವರ್ತಿಸುತ್ತಿರುವಾಗ ಮಾಧ್ಯಮಗಳನ್ನು ದೂರುವುದು ಸರಿಯಲ್ಲ. ಆಡಳಿತ ಪಕ್ಷದಷ್ಟೇ ವಿಪಕ್ಷಗಳು ಸ್ಟ್ರಾಂಗ್ ಆಗಿದ್ದರೆ ಆಗ ಅವುಗಳಿಗೂ ಮಾಧ್ಯಮಗಳಲ್ಲಿ ಅಷ್ಟೇ ಪ್ರಾಧ್ಯಾನತೆ ಕೊಡಲು ಸಾಧ್ಯ. ಇಲ್ಲದೆ ಹೋದರೆ ತಾವಾಗಿಯೇ ಮಾಧ್ಯಮಗಳು ಏನು ಮಾಡಲು ಆಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮಗಳು ಬಾಕ್ಸಿಂಗ್ ಅಂಕಣದಲ್ಲಿ ನಡೆಯುವ ಜಂಗಿ ಕುಸ್ತಿಯ ವೀಕ್ಷಕರು ಅಷ್ಟೇ ವಿನ: ತಾವೇ ಸ್ವತ: ಆಟಗಾರರಲ್ಲ. ಒಂದು ವೇಳೆ ಒಂದು ಸೈಡ್ ದುರ್ಬಲವಾಗಿದ್ದರೆ, ಮಾಧ್ಯಮಗಳೇ ಅಂಗಣದೊಳಗೆ ನುಗ್ಗಿ ವೀಕ್ ತಂಡವನ್ನು ಎತ್ತಿ ಹಿಡಿಯಲು ಅಸಾಧ್ಯ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ದೇಶದಲ್ಲಿ ವಿಪಕ್ಷಗಳು ತಾವಾಗಿಯೇ ಗಟ್ಟಿತನವನ್ನು ತೋರಿಸದೇ ಹೋದಲ್ಲಿ ತಮ್ಮನ್ನು ಎತ್ತಿಹಿಡಿಯಿರಿ ಎಂದು ಮಾಧ್ಯಮಗಳನ್ನು ಸಹಾಯಕ್ಕೆ ಕರೆಯುವುದು ನಂತರ ತಮಗೆ ಪ್ರಾತಿನಿಧ್ಯ ಕೊಡಲಿಲ್ಲ ಎಂದು ದೂರುವುದು ಎಷ್ಟು ಸರಿ ಎಂದು ವಿಪಕ್ಷಗಳು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search