• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶ್ವರಪ್ಪ ಹಿಂದೆ ಎಲ್ಲಾ ಸಾಧು ಸಂತರು, ಮಠಾಧೀಶರು ಇದ್ದೇವೆ ಎಂದ ಆನಂದ ಗುರೂಜಿ

Tulunadu News Posted On March 18, 2024
0


0
Shares
  • Share On Facebook
  • Tweet It

ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಲಿಲ್ಲ ಎನ್ನುವ ಕಾರಣಕ್ಕೆ ತೀವ್ರ ಬೇಸರಗೊಂಡಿರುವ ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪನವರ ಮನೆಗೆ ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಭೇಟಿ ನೀಡಿದರು. ಈ ಬಗ್ಗೆ ಮಾತನಾಡಿದ ಅವರು ಧರ್ಮ ಸಂಘಟನೆ ಮಾಡುತ್ತಾ, ಶ್ರೀರಾಮ ನಾಮವನ್ನು ನಿರಂತರವಾಗಿ ಪಠಣ ಮಾಡುತ್ತಾ ಇರುವ ಇಂತಹ ನಾಯಕ ನಮ್ಮ ದೇಶಕ್ಕೆ, ವಿಶೇಷವಾಗಿ ನಮ್ಮ ರಾಜ್ಯಕ್ಕೆ ಬೇಕು ಎಂದು ಆನಂದ ಗುರೂಜಿ ಹೇಳಿದರು.

ಇನ್ನು ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿಯೂ ಈಶ್ವರಪ್ಪ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಅವರಿಗಾಗಿ ವೇದಿಕೆಯಲ್ಲಿಯೂ ಕುರ್ಚಿ ಮೀಸಲಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ಬಿಜೆಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ, ರಾಜ್ಯ ಚುನಾವಣಾ ಉಸ್ತುವಾರಿ, ತೀರ್ಥಹಳ್ಳಿ ಶಾಸಕ, ವಿಧಾನಪರಿಷತ್ ಮುಖ್ಯ ಸಚೇತಕರ ಸಹಿತ ಪಕ್ಷದ ವಿವಿಧ ಪದಾಧಿಕಾರಿಗಳು ಈಶ್ವರಪ್ಪನವರ ಮನೆಗೆ ಆಗಮಿಸಿ ಅವರನ್ನು ಸಂತೈಸುವ ಕೆಲಸ ಮಾಡಿದರೂ ಈಶ್ವರಪ್ಪ ಅದಕ್ಕೆ ಸೊಪ್ಪು ಹಾಕುತ್ತಿಲ್ಲ. ಮಗನಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ಪದವೀಧರ ಕ್ಷೇತ್ರದಿಂದ ಟಿಕೆಟ್ ಕೊಡುತ್ತೇವೆ ಎಂದು ಭರವಸೆ ನೀಡಿದರೂ ಅದನ್ನು ನಂಬುವ ಸ್ಥಿತಿಯಲ್ಲಿ ಈಶ್ವರಪ್ಪನವರಿಲ್ಲ.

ಇನ್ನು ಹಾವೇರಿಯಲ್ಲಿ ನಿಮ್ಮ ಮಗನಿಗೆ ಟಿಕೆಟ್ ಸಿಗುವಂತೆ ಮಾಡಲಾಗುವುದು, ಆತನಿಗೆ ಅಲ್ಲಿ ಕೆಲಸ ಮಾಡಲು ಹೇಳಿ ಎಂದು ಯಡ್ಯೂರಪ್ಪನವರು ವರ್ಷದ ಹಿಂದೆ ಭರವಸೆ ನೀಡಿದ ಕಾರಣ ಈಶ್ವರಪ್ಪ ಪುತ್ರ ಕಾಂತೇಶ್ ಅಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಈಗ ಎಲ್ಲಾ ಸಿದ್ಧತೆ ನಡೆದು ಟಿಕೆಟ್ ಘೋಷಣೆಯಾಗಬೇಕು ಎನ್ನುವಾಗ ಆ ಟಿಕೆಟ್ ಯಡ್ಯೂರಪ್ಪನವರು ತಮ್ಮ ಆಪ್ತ ಬಸವರಾಜ್ ಬೊಮ್ಮಾಯಿಯವರಿಗೆ ಕೊಡಿಸಿದ್ದು ಈಶ್ವರಪ್ಪನವರಿಗೆ ನುಂಗಲಾರದ ತುತ್ತಾಗಿದೆ. ಹೀಗಿರುವಾಗ ಅವರು ಬಂಡಾಯ ಸ್ಪರ್ಧಿಯಾಗಿ ನಿಂತು ಶಿವಮೊಗ್ಗದಲ್ಲಿ ಯಡ್ಯೂರಪ್ಪ ಹಿರಿಯ ಪುತ್ರ ಬಿ.ವೈ ರಾಘವೇಂದ್ರ ಅವರನ್ನು ಸೋಲಿಸಲು ಪಣತೊಟ್ಟಿದ್ದಾರೆ. ಅವರ ಸಿಟ್ಟು ಶಿವಮೊಗ್ಗ ಫಲಿತಾಂಶದಲ್ಲಿ ಬದಲಾವಣೆ ತರುತ್ತಾ ಅಥವಾ ಕೊನೆಯ ಹಂತದಲ್ಲಿ ಸಿಟ್ಟು ಕರಗಿ ಅವರು ರಾಘವೇಂದ್ರ ವಿಜಯಕ್ಕೆ ಶ್ರಮಿಸುತ್ತಾರಾ ಎನ್ನುವುದಕ್ಕೆ ಎರಡ್ಮೂರು ವಾರ ಕಾಯಬೇಕು.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search