• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೂಪೂರ್ ಶರ್ಮಾ ರಾಯಬರೇಲಿ ಬಿಜೆಪಿ ಅಭ್ಯರ್ಥಿ ಆಗ್ತಾರಾ?

Tulunadu News Posted On March 19, 2024
0


0
Shares
  • Share On Facebook
  • Tweet It

ಬಹುತೇಕ ಎರಡು ವರ್ಷಗಳಿಂದ ಅಜ್ಞಾತವಾಸದಲ್ಲಿರುವ ಭಾರತೀಯ ಜನತಾ ಪಾರ್ಟಿಯ ಯುವ ನಾಯಕಿ ನೂಪೂರ್ ಶರ್ಮಾ ಅವರಿಗೆ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಪಕ್ಷದ ವರಿಷ್ಟರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸುತ್ತಿದ್ದಾರೆ. ಆದರೆ ಈ ಬಾರಿ ಸೋನಿಯಾ ಗಾಂಧಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ. ಅವರು ಈಗಾಗಲೇ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇನ್ನು ಗಾಂಧಿ ಕುಟುಂಬದಿಂದ ಯಾರೂ ಕೂಡ ರಾಯಬರೇಲಿ ಮತ್ತು ಅಮೇಠಿಯಿಂದ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಹಂತದಲ್ಲಿ ಫೈರ್ ಬ್ರಾಂಡ್ ಲೀಡರ್, ವಕೀಲೆ ನುಪೂರ್ ಶರ್ಮಾ ಅವರಿಗೆ ಅಲ್ಲಿ ಟಿಕೆಟ್ ಕೊಟ್ಟು ಗೆಲ್ಲಿಸಿದರೆ ಕಾಂಗ್ರೆಸ್ಸಿನ ಗಾಂಧಿ ಕುಟುಂಬದ ಮತ್ತೊಂದು ಪಾರಂಪರಿಕ ಸೀಟು ವಶಪಡಿಸಿಕೊಂಡಂತೆ ಆಗುತ್ತದೆ ಎನ್ನುವುದು ಬಿಜೆಪಿ ಚಿಂತನೆ.

ಇನ್ನು ನುಪೂರ್ ಶರ್ಮಾ ಅವರ ಹಿನ್ನಲೆ ಕೂಡ ಕುತೂಹಲಭರಿತವಾಗಿದೆ. ಪ್ರತಿಷ್ಟಿತ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆಲ್ಲುವುದು ಕಷ್ಟಸಾಧ್ಯದ ವಾತಾವರಣ ಇದ್ದಾಗ 2008 ರಲ್ಲಿ ಮೊತ್ತಮೊದಲಬಾರಿಗೆ ಏಕಾಂಗಿಯಾಗಿ ಗೆದ್ದು ಎಬಿವಿಪಿ ಬಾವುಟ ಹಾರಿಸಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ. ಈ ಮೂಲಕ ಎಬಿವಿಪಿಯ ಆರು ವರ್ಷದ ಗೆಲುವಿನ ಬರವನ್ನು ಅವರು ನೀಗಿಸಿದ್ದರು. ಅವರಿಗೆ ರಾಯಬರೇಲಿಯಲ್ಲಿ ಟಿಕೆಟ್ ದೊರೆತರೆ ಗೆಲುವು ನಿಶ್ಚಿತ ಎನ್ನುವುದು ಎಲ್ಲರ ಅಭಿಪ್ರಾಯ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search