• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೂಪೂರ್ ಶರ್ಮಾ ರಾಯಬರೇಲಿ ಬಿಜೆಪಿ ಅಭ್ಯರ್ಥಿ ಆಗ್ತಾರಾ?

Tulunadu News Posted On March 19, 2024
0


0
Shares
  • Share On Facebook
  • Tweet It

ಬಹುತೇಕ ಎರಡು ವರ್ಷಗಳಿಂದ ಅಜ್ಞಾತವಾಸದಲ್ಲಿರುವ ಭಾರತೀಯ ಜನತಾ ಪಾರ್ಟಿಯ ಯುವ ನಾಯಕಿ ನೂಪೂರ್ ಶರ್ಮಾ ಅವರಿಗೆ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಪಕ್ಷದ ವರಿಷ್ಟರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸುತ್ತಿದ್ದಾರೆ. ಆದರೆ ಈ ಬಾರಿ ಸೋನಿಯಾ ಗಾಂಧಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ. ಅವರು ಈಗಾಗಲೇ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇನ್ನು ಗಾಂಧಿ ಕುಟುಂಬದಿಂದ ಯಾರೂ ಕೂಡ ರಾಯಬರೇಲಿ ಮತ್ತು ಅಮೇಠಿಯಿಂದ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಹಂತದಲ್ಲಿ ಫೈರ್ ಬ್ರಾಂಡ್ ಲೀಡರ್, ವಕೀಲೆ ನುಪೂರ್ ಶರ್ಮಾ ಅವರಿಗೆ ಅಲ್ಲಿ ಟಿಕೆಟ್ ಕೊಟ್ಟು ಗೆಲ್ಲಿಸಿದರೆ ಕಾಂಗ್ರೆಸ್ಸಿನ ಗಾಂಧಿ ಕುಟುಂಬದ ಮತ್ತೊಂದು ಪಾರಂಪರಿಕ ಸೀಟು ವಶಪಡಿಸಿಕೊಂಡಂತೆ ಆಗುತ್ತದೆ ಎನ್ನುವುದು ಬಿಜೆಪಿ ಚಿಂತನೆ.

ಇನ್ನು ನುಪೂರ್ ಶರ್ಮಾ ಅವರ ಹಿನ್ನಲೆ ಕೂಡ ಕುತೂಹಲಭರಿತವಾಗಿದೆ. ಪ್ರತಿಷ್ಟಿತ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆಲ್ಲುವುದು ಕಷ್ಟಸಾಧ್ಯದ ವಾತಾವರಣ ಇದ್ದಾಗ 2008 ರಲ್ಲಿ ಮೊತ್ತಮೊದಲಬಾರಿಗೆ ಏಕಾಂಗಿಯಾಗಿ ಗೆದ್ದು ಎಬಿವಿಪಿ ಬಾವುಟ ಹಾರಿಸಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ. ಈ ಮೂಲಕ ಎಬಿವಿಪಿಯ ಆರು ವರ್ಷದ ಗೆಲುವಿನ ಬರವನ್ನು ಅವರು ನೀಗಿಸಿದ್ದರು. ಅವರಿಗೆ ರಾಯಬರೇಲಿಯಲ್ಲಿ ಟಿಕೆಟ್ ದೊರೆತರೆ ಗೆಲುವು ನಿಶ್ಚಿತ ಎನ್ನುವುದು ಎಲ್ಲರ ಅಭಿಪ್ರಾಯ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search