• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೂರದರ್ಶನದ ರಾಮ ಆಗ್ತಾರಾ ಮೀರತ್ ಸಂಸದ?

Tulunadu News Posted On March 19, 2024
0


0
Shares
  • Share On Facebook
  • Tweet It

35 ವರ್ಷಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರಗೊಂಡು ಇಡೀ ದೇಶದಲ್ಲಿ ಪ್ರಖ್ಯಾತಗೊಂಡಿದ್ದ ರಾಮಾಯಣ ಧಾರಾವಾಹಿಯ ಶ್ರೀರಾಮ ಪಾತ್ರಧಾರಿ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

ಧಾರಾವಾಹಿ ಮೊದಲ ಬಾರಿಗೆ ಪ್ರಸಾರಗೊಂಡು ಮೂರವರೆ ದಶಕಗಳ ಬಳಿಕವೂ ಅರುಣ್ ಗೋವಿಲ್ ಜನಪ್ರಿಯತೆ ಮಾಸಿಲ್ಲ. ಅವರು ಹೋದಲೆಲ್ಲಾ ಗ್ರಾಮಸ್ಥರು ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆಯುವುದು ಇವತ್ತಿಗೂ ಮುಂದುವರೆದಿದೆ. ಅವರು ತಾನು ದೇವರಲ್ಲ ಎಂದು ಎಷ್ಟೇ ಹೇಳಿದರೂ ಅವರನ್ನೇ ಶ್ರೀರಾಮ ಎಂದು ಅಂದುಕೊಂಡಿರುವ ಅಮಾಯಕರ ಸಂಖ್ಯೆ ಏನೂ ಕಡಿಮೆ ಇಲ್ಲ. ಅವರ ಜನಪ್ರಿಯತೆಯನ್ನು ಚುನಾವಣೆಗೆ ಬಳಸಿಕೊಳ್ಳುವ ಯೋಚನೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಅವರಿಗೆ ಮೀರತ್ ಲೋಕಸಭೆಯ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಮೀರತ್ ಲೋಕಸಭಾ ಕ್ಷೇತ್ರದಿಂದ ಕಳೆದ ಬಾರಿ ಮೂರು ಬಾರಿ ಬಿಜೆಪಿಯ ರಾಜೇಂದ್ರ ಅಗರವಾಲ್ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿ ಅವರನ್ನು ಬದಲಾಯಿಸಿ ಅರುಣ್ ಗೋವಿಲ್ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.

ಇನ್ನು ಏಪ್ರಿಲ್ 17 ರಂದು ರಾಮ ನವಮಿ ಬರುವುದರಿಂದ ಅಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಅದರ ಎರಡು ದಿನಗಳ ಬಳಿಕ ದೇಶ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ತಯಾರಾಗುವುದರಿಂದ ರಾಮನವಮಿಯಂದು ಅಯೋಧ್ಯೆಯ ರಾಮಪೂಜೆ ಬಹಳ ಪ್ರಮುಖ ಸಂದೇಶವನ್ನು ದೇಶಕ್ಕೆ ನೀಡಲಿದೆ. ಇನ್ನು ಈ ಬಾರಿಯ ರಾಮ ನವಮಿಯನ್ನು ರಾಷ್ಟ್ರಾದ್ಯಂತ ಅದ್ದೂರಿಯಾಗಿ ಆಚರಿಸಲು ಬಿಜೆಪಿ ತೀರ್ಮಾನಿಸಿದಂತಿದೆ. ಈ ಮೂಲಕ ಅಯೋಧ್ಯೆಯ ಭವ್ಯ ರಾಮ ಮಂದಿರದ ಹಿಂದಿನ ಶ್ರಮ ಜನ ಮತ್ತೆ ಸ್ಮರಿಸುವಂತಾಗಲಿ ಎನ್ನುವುದು ಮತ್ತು ಎಪ್ರಿಲ್ 19 ರಂದು ದೇಶ ಮೊದಲ ಹಂತದ ಮತದಾನಕ್ಕೆ ಸಜ್ಜಾಗುವುದರಿಂದ ಇಂತಹ ರಣತಂತ್ರ ಹೆಣೆಯುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search