• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೂರದರ್ಶನದ ರಾಮ ಆಗ್ತಾರಾ ಮೀರತ್ ಸಂಸದ?

Tulunadu News Posted On March 19, 2024
0


0
Shares
  • Share On Facebook
  • Tweet It

35 ವರ್ಷಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರಗೊಂಡು ಇಡೀ ದೇಶದಲ್ಲಿ ಪ್ರಖ್ಯಾತಗೊಂಡಿದ್ದ ರಾಮಾಯಣ ಧಾರಾವಾಹಿಯ ಶ್ರೀರಾಮ ಪಾತ್ರಧಾರಿ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

ಧಾರಾವಾಹಿ ಮೊದಲ ಬಾರಿಗೆ ಪ್ರಸಾರಗೊಂಡು ಮೂರವರೆ ದಶಕಗಳ ಬಳಿಕವೂ ಅರುಣ್ ಗೋವಿಲ್ ಜನಪ್ರಿಯತೆ ಮಾಸಿಲ್ಲ. ಅವರು ಹೋದಲೆಲ್ಲಾ ಗ್ರಾಮಸ್ಥರು ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆಯುವುದು ಇವತ್ತಿಗೂ ಮುಂದುವರೆದಿದೆ. ಅವರು ತಾನು ದೇವರಲ್ಲ ಎಂದು ಎಷ್ಟೇ ಹೇಳಿದರೂ ಅವರನ್ನೇ ಶ್ರೀರಾಮ ಎಂದು ಅಂದುಕೊಂಡಿರುವ ಅಮಾಯಕರ ಸಂಖ್ಯೆ ಏನೂ ಕಡಿಮೆ ಇಲ್ಲ. ಅವರ ಜನಪ್ರಿಯತೆಯನ್ನು ಚುನಾವಣೆಗೆ ಬಳಸಿಕೊಳ್ಳುವ ಯೋಚನೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಅವರಿಗೆ ಮೀರತ್ ಲೋಕಸಭೆಯ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಮೀರತ್ ಲೋಕಸಭಾ ಕ್ಷೇತ್ರದಿಂದ ಕಳೆದ ಬಾರಿ ಮೂರು ಬಾರಿ ಬಿಜೆಪಿಯ ರಾಜೇಂದ್ರ ಅಗರವಾಲ್ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿ ಅವರನ್ನು ಬದಲಾಯಿಸಿ ಅರುಣ್ ಗೋವಿಲ್ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.

ಇನ್ನು ಏಪ್ರಿಲ್ 17 ರಂದು ರಾಮ ನವಮಿ ಬರುವುದರಿಂದ ಅಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಅದರ ಎರಡು ದಿನಗಳ ಬಳಿಕ ದೇಶ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ತಯಾರಾಗುವುದರಿಂದ ರಾಮನವಮಿಯಂದು ಅಯೋಧ್ಯೆಯ ರಾಮಪೂಜೆ ಬಹಳ ಪ್ರಮುಖ ಸಂದೇಶವನ್ನು ದೇಶಕ್ಕೆ ನೀಡಲಿದೆ. ಇನ್ನು ಈ ಬಾರಿಯ ರಾಮ ನವಮಿಯನ್ನು ರಾಷ್ಟ್ರಾದ್ಯಂತ ಅದ್ದೂರಿಯಾಗಿ ಆಚರಿಸಲು ಬಿಜೆಪಿ ತೀರ್ಮಾನಿಸಿದಂತಿದೆ. ಈ ಮೂಲಕ ಅಯೋಧ್ಯೆಯ ಭವ್ಯ ರಾಮ ಮಂದಿರದ ಹಿಂದಿನ ಶ್ರಮ ಜನ ಮತ್ತೆ ಸ್ಮರಿಸುವಂತಾಗಲಿ ಎನ್ನುವುದು ಮತ್ತು ಎಪ್ರಿಲ್ 19 ರಂದು ದೇಶ ಮೊದಲ ಹಂತದ ಮತದಾನಕ್ಕೆ ಸಜ್ಜಾಗುವುದರಿಂದ ಇಂತಹ ರಣತಂತ್ರ ಹೆಣೆಯುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search