• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಚೆನ್ನಾಗಿರುವ ರಸ್ತೆೆ ದುರಸ್ತಿಗೆ ಕೋಟ್ಯಂತರ ಅನುದಾನ!

TNN Correspondent Posted On August 31, 2017
0


0
Shares
  • Share On Facebook
  • Tweet It

ಹನುಮಂತ ಕಾಮತ್ ಮಂಗಳೂರು

ಮಂಗಳೂರಿನ ಎಬಿ ಶೆಟ್ಟಿ ವೃತ್ತದಿಂದ ಮಿನಿ ವಿಧಾನ ಸೌಧದವರೆಗಿನ ರಸ್ತೆೆ ಹೇಗಿದೆ? ಎಂದು ಯಾರಿಗೇ ಕೇಳಿದರೂ ಬರುವ ಉತ್ತರ ಚೆನ್ನಾಗಿದೆ, ಸ್ಮಾರ್ಟ್ ಆಗಿದೆ ಎಂದು ಹೇಳುತ್ತಾರೆ. ಆ ರಸ್ತೆೆಯಲ್ಲಿ ಏನು ತೊಂದರೆ ಇದೆ ಎಂದು ಮತ್ತೊ0ದು ಪ್ರಶ್ನೆೆ ಕೇಳಿದರೆ ‘ಕುರುಡ ಕೂಡ ಚೆನ್ನಾಗಿ ಗಾಡಿ ಬಿಟ್ಟು ಹೋಗಬಹುದು ಆ ರಸ್ತೆೆಯಲ್ಲಿ, ಹಾಗಿರುವಾಗ ಏನು ತೊಂದರೆ ಎಂದು ಕೇಳುತ್ತಿರಲ್ಲ ಎಂದು ಮರು ಪ್ರಶ್ನೆೆ ಮಾಡಬಹುದು.
ಹೊಂಡ, ಗುಂಡಿ ಎಷ್ಟಿವೆ ಆ ರಸ್ತೆೆಯಲ್ಲಿ ಎಂದು ಮೂರನೇ ಪ್ರಶ್ನೆೆ ಕೇಳಿದರೆ ‘ನಿಮಗೆ ತಲೆಕೆಟ್ಟಿದೆಯಾ, ಆ ರಸ್ತೆೆಯಲ್ಲಿ ಹೊಂಡ ಅಥವಾ ಗುಂಡಿ ಒಂದೇ ಒಂದು ಇಲ್ಲ ಎಂದು ತಟ್ಟನೆ ಪ್ರತಿಕ್ರಿಯೆ ನೀಡಬಹುದು. ಆ ರಸ್ತೆೆಯನ್ನು ದುರಸ್ತಿ ಮಾಡಬೇಕಾ ಎಂದು ನಾಲ್ಕನೇ ಪ್ರಶ್ನೆೆ ಕೇಳಿದರೆ ‘ಹೋಗಿ ಸ್ವಾಮಿ, ಮೊದಲಿಗೆ ಆ ಜೋಕಟ್ಟೆೆ, ಕುಳಾಯಿ ಸೇರಿ ನಾನಾ ಹದಗೆಟ್ಟಿರುವ ರಸ್ತೆೆಗಳನ್ನು ಮೊದಲು ಸರಿ ಮಾಡಿ, ನಂತರ ಚೆನ್ನಾಗಿರುವ ರಸ್ತೆೆ ದುರಸ್ತಿ ಬಗ್ಗೆೆ ಯೋಚಿಸಿ ಎಂದು ಸಲಹೆ ನೀಡುತ್ತಾರೆ.
ಹೋಗಲಿ, ಆ ರಸ್ತೆೆಯಲ್ಲಿ ಬೀದಿ ದೀಪ ಚೆನ್ನಾಗಿ ಉರಿಯುತ್ತಾ? ಎಂದು ಕೆದಕಿದರೇ ‘ನಿಮಗೆ ಮೊದಲು ಏನು ಆಗ್ಬೇಕು, ಅದು ಹೇಳಿ?’ ಎಂದು ಮರು ಜನ ಪ್ರಶ್ನೆೆ ಮಾಡಬಹುದು.
ಮಂಗಳೂರಿಗೆ ಸ್ವಾರ್ಟ್ ಸಿಟಿ ಯೋಜನೆಯಲ್ಲಿ ಮುನ್ನೂರು ಕೋಟಿ ಬಂದಿದೆ, ಅದನ್ನು ಬಳಸಿ ಮಂಗಳೂರಿನ ಎಬಿ ಶೆಟ್ಟಿ ವೃತ್ತದಿಂದ ಮಿನಿ ವಿಧಾನ ಸೌಧದವರೆಗಿನ ರಸ್ತೆೆಯನ್ನು ಸ್ಮಾರ್ಟ್ ಮಾಡಬೇಕಿದೆ ಎಂದು ಕೇಳಿದರೆ, ಅದಕ್ಕೆೆ ಆ ವ್ಯಕ್ತಿ ಒಂದೋ ನಿಮಗೆ ಯಾವ ರಸ್ತೆೆಯನ್ನು ಸ್ಮಾರ್ಟ್ ಮಾಡಬೇಕು ಮತ್ತು ಯಾವುದನ್ನು ಸಂಚರಿಸಲು ಯೋಗ್ಯವಾಗಿಸಬೇಕು ಎಂದು ಗೊತ್ತಿಲ್ಲದಷ್ಟು ಮೂರ್ಖರು ಅಥವಾ ನಿಮಗೆ ಬಂದಿರುವ ಅಷ್ಟು ಕೋಟಿ ಹಣದಲ್ಲಿ ಎಷ್ಟು ನುಂಗಿ ನೀರು ಕುಡಿಯಲು ಆಗುತ್ತದೆ ಎನ್ನುವ ಧಾವಂತ ಇದೆ ಎಂಬುದನ್ನು ಸಾಬೀತು ಮಾಡಿದಂತಾಗಬಹುದು.
ಇಲ್ಲಪ್ಪಾ, ನಾವು ಹಣ ಹೊಡೆಯಬೇಕು ಎಂದು ನಿರ್ಧರಿಸಿಲ್ಲ, ನಮ್ಮದೇನಿದ್ದರೂ ಅಭಿವೃದ್ಧಿ ರಾಜಕೀಯ ಎಂದು ನೀವು ಹೇಳಿದರೆ ಅವನು ನಕ್ಕು ‘ನೀವು ಪಾಲಿಕೆ ಸದಸ್ಯರೊ, ಅಧಿಕಾರಿಯೋ ಆಗಿರಬಹುದು. ನಾನು ನೀವು ಹೇಳಿದ್ದನ್ನು ಹಾಗೆ ಕಣ್ಣುಮುಚ್ಚಿ ನಂಬಲು ಮಂಗಳೂರಿನ ನಾಗರಿಕನಲ್ಲ’ ಎಂದು ಹೇಳಿ ಕಾಸರಗೋಡು ಕಡೆ ಹೋಗುವ ಬಸ್ಸು ಹತ್ತಬಹುದು. ಒಟ್ಟಿನಲ್ಲಿ ನೀವು ಈ ಊರಿನ ಅಥವಾ ಬೇರೆ ಊರಿನ ಯಾರನ್ನೇ ಕೇಳಿದರೂ ಆ ರಸ್ತೆೆಯ ಬಗ್ಗೆೆ ಚಕಾರವೆತ್ತುವುದಿಲ್ಲ.
ಒಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಎರಡನೇ ಸಭೆಯಲ್ಲಿ ಎಬಿ ಶೆಟ್ಟಿ ಸರ್ಕಲ್ ನಿಂದ ಮಿನಿ ವಿಧಾನಸೌಧದವರೆಗಿನ ರಸ್ತೆೆಯನ್ನು ಸ್ಮಾರ್ಟ್ ಮಾಡಲು ಯೋಜನೆ ರೂಪಿಸಲಾಗಿದೆ. ಅದು ಮುಗಿದ ನಂತರ ಸ್ಟೇಟ್ ಬ್ಯಾಕ್ ಸುತ್ತಲಿನ ಪ್ರದೇಶಗಳು ಅಭಿವೃದ್ಧಿ ಆಗಲಿವೆ ಎಂದು ಹೇಳಲಾಗುತ್ತದೆ. ಈ ಮೂಲಕ ಮಂಗಳೂರಿನಲ್ಲಿ ಅಭಿವೃದ್ಧಿಯ ಶಬ್ದ ಮತ್ತೆೆ ರಿಂಗಣಿಸುತ್ತಿದೆ.
ಆದರೆ ಅಭಿವೃದ್ಧಿ ಆಗಬೇಕು ನಿಜ, ನಮ್ಮ ಮಂಗಳೂರು ಸ್ಮಾರ್ಟ್ ಸಿಟಿ ಆಗಬೇಕು ಎನ್ನುವುದರಲ್ಲಿ ಯಾವ ಆಕ್ಷೇಪವೂ ಇಲ್ಲ. ಅದರ ಅವಶ್ಯಕತೆ ಮಂಗಳೂರಿಗೆ ಖಂಡಿತ ಇದೆ. ಆದರೆ ಒಂಬತ್ತು ವರ್ಷಗಳ ಹಿಂದೆ ಆದ ಕಾಂಕ್ರೀಟ್ ರಸ್ತೆೆಗಳಿಗೆ ಇವತ್ತಿಗೂ ಫುಟ್ ಪಾತ್ ನಿರ್ಮಾಣವಾಗಿಲ್ಲ. ಭಾರತೀಯ ಜನತಾ ಪಾರ್ಟಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿ ಇದ್ದಾಗ ಕೇವಲ ಕಾಂಕ್ರೀಟ್ ರಸ್ತೆೆ ಮಾಡಿತ್ತು. ಆದರೆ ಫುಟ್ ಪಾತ್, ಚರಂಡಿ ಮಾಡಿಲ್ಲ ಎಂದು ವಿಪಕ್ಷದಲ್ಲಿದ್ದ ಕಾಂಗ್ರೆೆಸ್ ಬೊಬ್ಬೆೆ ಹೊಡೆದು ಅಧಿಕಾರಕ್ಕೆೆ ಬಂತು. ಅಭಿವೃದ್ಧಿ ಅಂದರೆ ಕೇವಲ ಕಾಂಕ್ರೀಟ್ ರಸ್ತೆೆ ಅಲ್ಲ ಎಂದಿದ್ದ ಕಾಂಗ್ರೆೆಸ್ ಗೆದ್ದು ಬಂದ ನಂತರ ಏನಾಯಿತು? ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ ಕಾಂಕ್ರೀಟ್ ರಸ್ತೆೆಗಳ ಫುಟ್ ಪಾತ್, ಒಳಚರಂಡಿ ಬಿಡಿ, ಇವರೇ ಮಾಡಿಸಿರುವ ಕಾಂಕ್ರೀಟ್ ರಸ್ತೆೆಗಳಲ್ಲಿ ಕೆಲವಕ್ಕೆೆ ಫುಟ್ ಪಾತ್, ಚರಂಡಿಯೇ ನಿರ್ಮಿಸಿಲ್ಲ ಏಕೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search