• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಸಚಿವರ ಪತ್ನಿ, ಮಕ್ಕಳಿಗೆ, ಸಹೋದರರಿಗೆ ಟಿಕೆಟ್!!

Tulunadu News Posted On March 21, 2024
0


0
Shares
  • Share On Facebook
  • Tweet It

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಸಚಿವರುಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರ ಮಗಳು ಜಯನಗರ ಶಾಸಕಿ ಸೌಮ್ಯ ರೆಡ್ಡಿಯವರಿಗೆ ಬೆಂಗಳೂರು ದಕ್ಷಿಣದಿಂದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಮಗಳು ಪ್ರಿಯಾಂಕಾ ಜಾರಕಿಹೊಳಿಯವರಿಗೆ ಚಿಕ್ಕೋಡಿಯಿಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಅವರಿಗೆ ಬೆಳಗಾಂನಿಂದ  ಟಿಕೆಟ್ ಸಿಗಲಿದೆ .

ಕೃಷಿ ಸಚಿವ ಶಿವಾನಂದ ಪಾಟೀಲ್ ಅವರ ಮಗಳು ಸಂಯುಕ್ತಾ ಅವರಿಗೆ ಬಾಗಲಕೋಟೆಯಿಂದ, ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರ ಮಗ ಸಾಗರ್ ಖಂಡ್ರೆಯವರಿಗೆ ಬೀದರ್ ನಿಂದ, ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ರಾಧಾಕೃಷ್ಣ ದೊಡ್ಡಮನಿಯವರಿಗೆ ಕಲ್ಬುರ್ಗಿಯಿಂದ, ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರ ಸೊಸೆ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ದಾವಣಗೆರೆಯಿಂದ, ಮಾಜಿ ರಾಜ್ಯಸಭಾ ಸದಸ್ಯರಾದ ಕೆ ರೆಹಮಾನ್ ಅವರ ಮಗ ಮನ್ಸೂರ್ ಅಲಿ ಖಾನ್ ಅವರನ್ನು ಬೆಂಗಳೂರು ಸೆಂಟ್ರಲ್ ನಿಂದ, ಸಚಿವ ಎಚ್ ಸಿ ಮಹದೇವಪ್ಪನವರ ಮಗ ಸುನೀಲ್ ಬೋಸ್ ಅವರಿಗೆ ಚಾಮರಾಜಪೇಟೆಯಿಂದ ಹೀಗೆ ಪಟ್ಟಿ ಇನ್ನೂ ಬೆಳೆಯುತ್ತಿದೆ.

ಒಟ್ಟು ಎಂಟರಿಂದ ಹತ್ತು ಸಚಿವರುಗಳ ಕುಟುಂಬದವರಿಗೆ ಟಿಕೆಟ್ ಕೊಡುವ ಸಾಧ್ಯತೆ ದಟ್ಟವಾಗಿದೆ. ಕೆಲವೇ ಹೊತ್ತಿನಲ್ಲಿ ಅಧಿಕೃತ ಘೋಷಣೆ ಆಗಲಿದ್ದು ಕಾಂಗ್ರೆಸ್ ಕಾರ್ಯಕರ್ತರು ಕೇವಲ ಕಾರ್ಯಕರ್ತರಾಗಿಯೇ ಇರಬೇಕಾ ಎನ್ನುವುದಕ್ಕೆ ಉತ್ತರ ಸಿಗಲಿದೆ. ರಾಜ್ಯದ ಪ್ರಭಾವಿ ಸಚಿವರುಗಳನ್ನು ಕಣಕ್ಕೆ ಇಳಿಸಿ ಹೆಚ್ಚಿನ ಸೀಟುಗಳಲ್ಲಿ ಜಯಗಳಿಸಲು ಎರಡು ತಿಂಗಳ ಹಿಂದೆ ರಣತಂತ್ರ ಹೆಣೆಯಲಾಗಿತ್ತು. ಆದರೆ ಯಾವುದೇ ಸಚಿವರು ಈ ಸವಾಲಿಗೆ ಸಿದ್ಧರಿಲ್ಲ. ಅದರ ಬದಲು ತಮ್ಮ ಕುಟುಂಬದವರಿಗೆ ಕೊಟ್ಟರೆ ಗೆಲ್ಲಿಸಿ ತರುತ್ತೇವೆ ಎಂದು ಹೈಕಮಾಂಡಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search