• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ವಿದ್ಯಾರ್ಥಿನಿಯರ ಕೃತ್ಯ ದೃಢ

Tulunadu News Posted On March 21, 2024
0


0
Shares
  • Share On Facebook
  • Tweet It

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟಿನಲ್ಲಿ ಮೊಬೈಲ್ ಇಟ್ಟು ಅದರಿಂದ ವಿಡಿಯೋ ಮಾಡಿದ್ದ ಪ್ರಕರಣ ಈಗ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ಈ ಬಗ್ಗೆ ರಾಜ್ಯ ಸರಕಾರ ಸಿಐಡಿಗೆ ತನಿಖೆ ಮಾಡಲು ಸೂಚಿಸಿತ್ತು. ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಶಬನಾಜ್, ಅಲ್ಫಿಯಾ ಹಾಗೂ ಅಲಿಮತ್ ಉಲ್ ಶಫಾ ಎಂಬ ವಿದ್ಯಾರ್ಥಿನಿಯರು ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳು ಬೇರೆ ಯುವತಿಯ ಟಾಯ್ಲೆಟ್ ವಿಡಿಯೋ ಮಾಡಲು ಪ್ಲಾನ್ ಮಾಡಿದ್ದರು. ಆದರೆ ಅದರಲ್ಲಿ ಇನ್ನೊರ್ವ ಯುವತಿಯ ವಿಡಿಯೋ ಚಿತ್ರೀಕರಣವಾಗಿತ್ತು. ಕೂಡಲೇ ವಿಡಿಯೋ ಡಿಲೀಟ್ ಮಾಡಿ ಸಂತ್ರಸ್ತೆಗೆ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆಯಾಚಿಸಿದ್ದರು. ಆದರೆ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಅವರು ವಿದ್ಯಾರ್ಥಿನಿಯರನ್ನು ವಿಚಾರಣೆಗೆ ಒಳಪಡಿಸಿದಾಗ ವಿಡಿಯೋ ಮಾಡಿರುವುದು ಗೊತ್ತಾಗಿದೆ. ಆಡಳಿತ ಮಂಡಳಿಯ ಸೂಚನೆ ಪ್ರಕಾರ ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು. ಇದೆಲ್ಲಾ ನಡೆದದ್ದು 2023 ರ ಜುಲೈ 18 ರಂದು.

ಆ ದಿನಗಳಲ್ಲಿ ಇದು ಕರಾವಳಿಯಲ್ಲಿ ಬಹಳ ದೊಡ್ಡ ಸುದ್ದಿಯಾಗಿ ರಾಜ್ಯಮಟ್ಟದಲ್ಲಿಯೂ ಸಾಕಷ್ಟು ಗಮನ ಸೆಳೆದಿತ್ತು. ಕೇಸರಿಪಡೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಅಂತಿಮವಾಗಿ ಸಿಐಡಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜತೆಗೆ ಕಾಲೇಜಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಿದ್ಯಾರ್ಥಿನಿಯರ ಮೇಲಿನ ಆರೋಪಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search