• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ವಿದ್ಯಾರ್ಥಿನಿಯರ ಕೃತ್ಯ ದೃಢ

Tulunadu News Posted On March 21, 2024
0


0
Shares
  • Share On Facebook
  • Tweet It

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟಿನಲ್ಲಿ ಮೊಬೈಲ್ ಇಟ್ಟು ಅದರಿಂದ ವಿಡಿಯೋ ಮಾಡಿದ್ದ ಪ್ರಕರಣ ಈಗ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ಈ ಬಗ್ಗೆ ರಾಜ್ಯ ಸರಕಾರ ಸಿಐಡಿಗೆ ತನಿಖೆ ಮಾಡಲು ಸೂಚಿಸಿತ್ತು. ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಶಬನಾಜ್, ಅಲ್ಫಿಯಾ ಹಾಗೂ ಅಲಿಮತ್ ಉಲ್ ಶಫಾ ಎಂಬ ವಿದ್ಯಾರ್ಥಿನಿಯರು ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳು ಬೇರೆ ಯುವತಿಯ ಟಾಯ್ಲೆಟ್ ವಿಡಿಯೋ ಮಾಡಲು ಪ್ಲಾನ್ ಮಾಡಿದ್ದರು. ಆದರೆ ಅದರಲ್ಲಿ ಇನ್ನೊರ್ವ ಯುವತಿಯ ವಿಡಿಯೋ ಚಿತ್ರೀಕರಣವಾಗಿತ್ತು. ಕೂಡಲೇ ವಿಡಿಯೋ ಡಿಲೀಟ್ ಮಾಡಿ ಸಂತ್ರಸ್ತೆಗೆ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆಯಾಚಿಸಿದ್ದರು. ಆದರೆ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಅವರು ವಿದ್ಯಾರ್ಥಿನಿಯರನ್ನು ವಿಚಾರಣೆಗೆ ಒಳಪಡಿಸಿದಾಗ ವಿಡಿಯೋ ಮಾಡಿರುವುದು ಗೊತ್ತಾಗಿದೆ. ಆಡಳಿತ ಮಂಡಳಿಯ ಸೂಚನೆ ಪ್ರಕಾರ ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು. ಇದೆಲ್ಲಾ ನಡೆದದ್ದು 2023 ರ ಜುಲೈ 18 ರಂದು.

ಆ ದಿನಗಳಲ್ಲಿ ಇದು ಕರಾವಳಿಯಲ್ಲಿ ಬಹಳ ದೊಡ್ಡ ಸುದ್ದಿಯಾಗಿ ರಾಜ್ಯಮಟ್ಟದಲ್ಲಿಯೂ ಸಾಕಷ್ಟು ಗಮನ ಸೆಳೆದಿತ್ತು. ಕೇಸರಿಪಡೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಅಂತಿಮವಾಗಿ ಸಿಐಡಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜತೆಗೆ ಕಾಲೇಜಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಿದ್ಯಾರ್ಥಿನಿಯರ ಮೇಲಿನ ಆರೋಪಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search