• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ವಿದ್ಯಾರ್ಥಿನಿಯರ ಕೃತ್ಯ ದೃಢ

Tulunadu News Posted On March 21, 2024
0


0
Shares
  • Share On Facebook
  • Tweet It

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟಿನಲ್ಲಿ ಮೊಬೈಲ್ ಇಟ್ಟು ಅದರಿಂದ ವಿಡಿಯೋ ಮಾಡಿದ್ದ ಪ್ರಕರಣ ಈಗ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ಈ ಬಗ್ಗೆ ರಾಜ್ಯ ಸರಕಾರ ಸಿಐಡಿಗೆ ತನಿಖೆ ಮಾಡಲು ಸೂಚಿಸಿತ್ತು. ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಶಬನಾಜ್, ಅಲ್ಫಿಯಾ ಹಾಗೂ ಅಲಿಮತ್ ಉಲ್ ಶಫಾ ಎಂಬ ವಿದ್ಯಾರ್ಥಿನಿಯರು ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳು ಬೇರೆ ಯುವತಿಯ ಟಾಯ್ಲೆಟ್ ವಿಡಿಯೋ ಮಾಡಲು ಪ್ಲಾನ್ ಮಾಡಿದ್ದರು. ಆದರೆ ಅದರಲ್ಲಿ ಇನ್ನೊರ್ವ ಯುವತಿಯ ವಿಡಿಯೋ ಚಿತ್ರೀಕರಣವಾಗಿತ್ತು. ಕೂಡಲೇ ವಿಡಿಯೋ ಡಿಲೀಟ್ ಮಾಡಿ ಸಂತ್ರಸ್ತೆಗೆ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆಯಾಚಿಸಿದ್ದರು. ಆದರೆ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಅವರು ವಿದ್ಯಾರ್ಥಿನಿಯರನ್ನು ವಿಚಾರಣೆಗೆ ಒಳಪಡಿಸಿದಾಗ ವಿಡಿಯೋ ಮಾಡಿರುವುದು ಗೊತ್ತಾಗಿದೆ. ಆಡಳಿತ ಮಂಡಳಿಯ ಸೂಚನೆ ಪ್ರಕಾರ ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು. ಇದೆಲ್ಲಾ ನಡೆದದ್ದು 2023 ರ ಜುಲೈ 18 ರಂದು.

ಆ ದಿನಗಳಲ್ಲಿ ಇದು ಕರಾವಳಿಯಲ್ಲಿ ಬಹಳ ದೊಡ್ಡ ಸುದ್ದಿಯಾಗಿ ರಾಜ್ಯಮಟ್ಟದಲ್ಲಿಯೂ ಸಾಕಷ್ಟು ಗಮನ ಸೆಳೆದಿತ್ತು. ಕೇಸರಿಪಡೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಅಂತಿಮವಾಗಿ ಸಿಐಡಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜತೆಗೆ ಕಾಲೇಜಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಿದ್ಯಾರ್ಥಿನಿಯರ ಮೇಲಿನ ಆರೋಪಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search