• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮಗೆ ಚುನಾವಣೆಗೆ ಹಣ ಇಲ್ಲದಂತೆ ಮಾಡಲಾಗಿದೆ ಎಂದು ರಾಹುಲ್ ಸುದ್ದಿಗೋಷ್ಟಿ!

Tulunadu News Posted On March 21, 2024
0


0
Shares
  • Share On Facebook
  • Tweet It

ನವದೆಹಲಿಯಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ವಯನಾಡು ಸಂಸದ ರಾಹುಲ್ ಗಾಂಧಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ” ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ನಾವು ಪ್ರಚಾರ ನಡೆಸಲು ಸಾಧ್ಯವಿಲ್ಲವಾಗಿದೆ. ನಾವು ನಮ್ಮ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಿಲ್ಲ. ನಮ್ಮ ನಾಯಕರು ದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ. ನಮಗೆ ಒಂದು ರೈಲ್ವೆ ಟಿಕೆಟ್ ಖರೀದಿಸಲು ಸಾಧ್ಯವಾಗುತ್ತಿಲ್ಲ. ಚುನಾವಣೆಯ ಮುನ್ನವೇ ನಮ್ಮನ್ನು ಹೀಗೆ ಮಾಡಲಾಗುತ್ತಿದೆ. ಇಂದು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ. ಭಾರತದ ಜನತೆಯ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.

ಈ ವಿಷಯದಲ್ಲಿ ಚುನಾವಣಾ ಆಯೋಗ ಕೂಡ ಮಾತನಾಡುತ್ತಿಲ್ಲ. ನ್ಯಾಯಾಲಯಗಳು ಏನೂ ಹೇಳುತ್ತಿಲ್ಲ. ಇದು ನಮ್ಮ ಬ್ಯಾಂಕುಗಳನ್ನು ಮಾತ್ರ ಫ್ರೀಜ್ ಮಾಡಿರುವುದಲ್ಲ. ಇದು ಪ್ರಜಾಪ್ರಭುತ್ವದ ವಿರುದ್ಧ ಕೃತ್ಯ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಾರ್ಟಿಯ ಮುಖಂಡರಾದ ರವಿಶಂಕರ್ ಪ್ರಸಾದ್ ಅವರು ” ದೇಶದ ಮೇಲೆ ತುರ್ತು ಪರಿಸ್ಥಿತಿಯಂತಹ ಕರಾಳ ದಿನಗಳನ್ನು ಹೇರಿದವರು ಈಗ ಅಕೌಂಟ್ ಫ್ರೀಜ್ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅಕೌಂಟ್ ಫ್ರೀಜ್ ಆದರೆ ದೇಶದ ಅಕೌಂಟ್ ಫ್ರೀಜ್ ಆದಂತೆ ಆಗುತ್ತಾ?” ಎಂದು ತಿರುಗೇಟು ನೀಡಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡರಾದ ಸೋನಿಯಾ ಹಾಗೂ ರಾಹುಲ್ ಅವರು ನ್ಯಾಶನಲ್ ಹೆರಾಲ್ಡ್ ಕೇಸಿನಲ್ಲಿ 5000 ಕೋಟಿ ಹಗರಣದಲ್ಲಿ ಆರೋಪಿ 1 ಮತ್ತು 2 ಎಂದು ಬಿಜೆಪಿ ವಕ್ತಾರ ಸಂಬಿತ್ ಮಹಾಪಾತ್ರ ಹೇಳಿದ್ದಾರೆ. ಅದರಲ್ಲಿ ಮಾಡಿದ ಹಣದಿಂದ ಒಂದಲ್ಲ ಎಷ್ಟೋ ಚುನಾವಣೆಗಳನ್ನು ಎದುರಿಸಬಹುದು. ಆದರೆ ಸೋಲಿನ ಭೀತಿಯಿಂದ ಈಗ ಸೋಲನ್ನು ಅಕೌಂಟ್ ಫ್ರೀಜ್ ಮೇಲೆ ಹಾಕುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search