• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮೇಕೆದಾಟು: ಈಗಲೇ ಸ್ಪಷ್ಟಪಡಿಸಿ!

Hanumantha Kamath Posted On March 22, 2024
0


0
Shares
  • Share On Facebook
  • Tweet It

ಕಾಂಗ್ರೆಸ್ ನಂತಹ ರಾಷ್ಟ್ರೀಯ ಪಕ್ಷವೊಂದು ಯಕಶ್ಚಿತ್ ಒಂದು ಪ್ರಾದೇಶಿಕ ಪಕ್ಷದ ಎದುರು ಮಂಡಿಯೂರುವುದು ಎನ್ನುವುದಕ್ಕೆ ಮೇಕೆದಾಟು ಯೋಜನೆಯೇ ಸಾಕ್ಷಿ. ಇ.ಂ.ಡಿ.ಯಾ ಎನ್ನುವ ವಿಪಕ್ಷಗಳ ಮೈತ್ರಿಕೂಟ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಇದರಿಂದ ತಮಿಳುನಾಡಿನಲ್ಲಿರುವ ಡಿಎಂಕೆ ಮತದಾರರಿಗೆ ಖುಷಿಯಾಗಬಹುದು. ಅವರು ತಮ್ಮ ಪಕ್ಷದ ದೂರದೃಷ್ಟಿಯನ್ನು ಕೊಂಡಾಡಬಹುದು. ಆದರೆ ಇಲ್ಲಿ ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬರದೇ ಇದ್ದರೆ ಬೆಂಗಳೂರಿಗೆ ಬೆಂಗಳೂರೇ ನೀರಿಗಾಗಿ ಹಾಹಾಕಾರಗೈಯಲಿದೆ. ಅಷ್ಟಕ್ಕೂ ಕಾಂಗ್ರೆಸ್ ಕಳೆದ ಬಾರಿ ವಿಪಕ್ಷದಲ್ಲಿದ್ದಾಗ ತನ್ನ ಚುನಾವಣಾ ಪ್ರಚಾರಕ್ಕೆ ಕಾವು ನೀಡಿದ್ದೇ ಮೇಕೆದಾಟು ಯೋಜನೆಯನ್ನು ಅನುಷ್ಟಾನಕ್ಕೆ ತಂದೇ ತರುತ್ತೇವೆ ಎನ್ನುವ ಹೋರಾಟದಿಂದ. ನನ್ನ ನೀರು ನನ್ನ ಹಕ್ಕು ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡಿದ ಪಾದಯಾತ್ರೆಯಿಂದ ನಿಜವಾಗಿಯೂ ಸಂಚಲನ ಸೃಷ್ಟಿಯಾಗಿತ್ತು. ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಮರುಕಳಿಸಲು ಅದು ಕೂಡ ಒಂದು ಕಾರಣವಾಗಿತ್ತು. ಭಾರತೀಯ ಜನತಾ ಪಾರ್ಟಿ ಈ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಸ್ವಲ್ಪ ಸಪ್ಪೆ ಎನಿಸಿದ್ದು ಹೌದು.

ಈಗಲೇ ಸ್ಪಷ್ಟಪಡಿಸಿ!

ಅದೆಲ್ಲಾ ಆಗಿ ಕೊನೆಗೆ ದೇವೆಗೌಡರು ಸಂಸತ್ತಿನ ರಾಜ್ಯಸಭೆಯಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಂದ್ರ ಸರಕಾರವನ್ನು ದೀನರಾಗಿ ವಿನಂತಿಸಿದ್ದು ಎಲ್ಲವನ್ನು ಈ ರಾಜ್ಯ ನೋಡಿದೆ. ಈಗ ಏನಾಗಿದೆ? ಇದೇ ವಿಪಕ್ಷಗಳ ಮೈತ್ರಿಕೂಟದ ಸದಸ್ಯ ಪಕ್ಷ ಡಿಎಂಕೆ ಬಹಿರಂಗವಾಗಿ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡುಹೊಡೆದು ನಿಂತಿದೆ. ಇದನ್ನು ಹೇಗೆ ಎದುರಿಸಬೇಕು ಎಂದು ಗೊತ್ತಾಗದೇ ರಾಜ್ಯದ ಕಾಂಗ್ರೆಸ್ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಒಂದು ವೇಳೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಹೆಚ್ಚಿನ ಸಂಸದರು ಆಯ್ಕೆಯಾಗಿ ವಿಪಕ್ಷಗಳ ಮೈತ್ರಿಕೂಟ ಅಪ್ಪಿತಪ್ಪಿ ಅಧಿಕಾರಕ್ಕೆ ಬಂದರೆ ಆಗ ಮೇಕೆದಾಟು ಯೋಜನೆ ಆಗುತ್ತೋ, ಬಿಡುತ್ತೋ ಎನ್ನುವುದನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಈಗಲೇ ಸ್ಪಷ್ಟಪಡಿಸಬೇಕು. ಇಲ್ಲದೇ ಹೋದರೆ “ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಪ್ರಮುಖ ಪಕ್ಷ ಡಿಎಂಕೆ. ಮೇಕೆದಾಟು ಅಣೆಕಟ್ಟು ಮಾಡಲು ಅವರು ಬಿಡುವುದಿಲ್ಲ. ಆದ್ದರಿಂದ ನಮಗೆ ಬೇರೆ ದಾರಿಯಿಲ್ಲ” ಎಂದು ಹೇಳಿ ಈಗ ಗ್ಯಾರಂಟಿಗಳಿಗೆ ಹಾಕಿದ ಹಾಗೆ ಕಂಡೀಷನ್ ಎಂಬ ಟೋಪಿ ಹಾಕುವ ಬದಲು ಈಗಲೇ ಹೇಳಿಬಿಡುವುದು ಒಳ್ಳೆಯದು.

ಮೇಕೆದಾಟು ಮಾಡಲು ಬಿಡುತ್ತಾರಾ?

ಮೇಕೆದಾಟು ಅಣೆಕಟ್ಟಿನಿಂದ ಹೆಚ್ಚಿನ ಪ್ರಯೋಜನ ಪಡೆಯುವವರು ರೈತರು ಕೂಡ ಹೌದು. ಕಾಂಗ್ರೆಸ್ ಈಗಲೇ ವಿಷಯ ಕ್ಲಿಯರ್ ಮಾಡಿದರೆ ಕೃಷಿಕರು ಕೂಡ ತಮ್ಮ ಬೆಂಬಲ ಯಾರಿಗೆಂದು ನಿರ್ಧರಿಸಿಬಿಡುತ್ತಾರೆ. ಮೇಕೆದಾಟು ಅಣೆಕಟ್ಟು ಅಸಂಖ್ಯಾತ ಜನರ ಜೀವನದ ಪ್ರಶ್ನೆಯೂ ಹೌದು. ಅದನ್ನು ಸ್ಟಾಲಿನ್ ಪ್ರಣಾಲಿಕೆಯಲ್ಲಿ ಸೇರಿಸಿ ಕರ್ನಾಟಕ ಕಾಂಗ್ರೆಸ್ಸಿಗೆ ಬಿಸಿತುಪ್ಪವನ್ನಾಗಿಸಿದ್ದಾರೆ. ಸ್ಟಾಲಿನ್ ಹವಾ ಹೇಗಿದೆ ಎಂದರೆ ಅವರು ಮಾಡಿ ಎಂದರೆ ಮೇಕೆದಾಟು ಅಣೆಕಟ್ಟು, ಬೇಡಾ ಎಂದರೆ ಅದು ಇಲ್ಲವೇ ಇಲ್ಲ. ಸ್ವಾತಂತ್ರ್ಯಪೂರ್ವದ ರಾಷ್ಟ್ರೀಯ ಪಕ್ಷದ ಅವಸ್ಥೆ ಸದ್ಯ ಹೀಗಿದೆ….

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Hanumantha Kamath April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Hanumantha Kamath April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search