• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮೇಕೆದಾಟು: ಈಗಲೇ ಸ್ಪಷ್ಟಪಡಿಸಿ!

Hanumantha Kamath Posted On March 22, 2024
0


0
Shares
  • Share On Facebook
  • Tweet It

ಕಾಂಗ್ರೆಸ್ ನಂತಹ ರಾಷ್ಟ್ರೀಯ ಪಕ್ಷವೊಂದು ಯಕಶ್ಚಿತ್ ಒಂದು ಪ್ರಾದೇಶಿಕ ಪಕ್ಷದ ಎದುರು ಮಂಡಿಯೂರುವುದು ಎನ್ನುವುದಕ್ಕೆ ಮೇಕೆದಾಟು ಯೋಜನೆಯೇ ಸಾಕ್ಷಿ. ಇ.ಂ.ಡಿ.ಯಾ ಎನ್ನುವ ವಿಪಕ್ಷಗಳ ಮೈತ್ರಿಕೂಟ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಇದರಿಂದ ತಮಿಳುನಾಡಿನಲ್ಲಿರುವ ಡಿಎಂಕೆ ಮತದಾರರಿಗೆ ಖುಷಿಯಾಗಬಹುದು. ಅವರು ತಮ್ಮ ಪಕ್ಷದ ದೂರದೃಷ್ಟಿಯನ್ನು ಕೊಂಡಾಡಬಹುದು. ಆದರೆ ಇಲ್ಲಿ ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬರದೇ ಇದ್ದರೆ ಬೆಂಗಳೂರಿಗೆ ಬೆಂಗಳೂರೇ ನೀರಿಗಾಗಿ ಹಾಹಾಕಾರಗೈಯಲಿದೆ. ಅಷ್ಟಕ್ಕೂ ಕಾಂಗ್ರೆಸ್ ಕಳೆದ ಬಾರಿ ವಿಪಕ್ಷದಲ್ಲಿದ್ದಾಗ ತನ್ನ ಚುನಾವಣಾ ಪ್ರಚಾರಕ್ಕೆ ಕಾವು ನೀಡಿದ್ದೇ ಮೇಕೆದಾಟು ಯೋಜನೆಯನ್ನು ಅನುಷ್ಟಾನಕ್ಕೆ ತಂದೇ ತರುತ್ತೇವೆ ಎನ್ನುವ ಹೋರಾಟದಿಂದ. ನನ್ನ ನೀರು ನನ್ನ ಹಕ್ಕು ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡಿದ ಪಾದಯಾತ್ರೆಯಿಂದ ನಿಜವಾಗಿಯೂ ಸಂಚಲನ ಸೃಷ್ಟಿಯಾಗಿತ್ತು. ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಮರುಕಳಿಸಲು ಅದು ಕೂಡ ಒಂದು ಕಾರಣವಾಗಿತ್ತು. ಭಾರತೀಯ ಜನತಾ ಪಾರ್ಟಿ ಈ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಸ್ವಲ್ಪ ಸಪ್ಪೆ ಎನಿಸಿದ್ದು ಹೌದು.

ಈಗಲೇ ಸ್ಪಷ್ಟಪಡಿಸಿ!

ಅದೆಲ್ಲಾ ಆಗಿ ಕೊನೆಗೆ ದೇವೆಗೌಡರು ಸಂಸತ್ತಿನ ರಾಜ್ಯಸಭೆಯಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿ ಎಂದು ಕೇಂದ್ರ ಸರಕಾರವನ್ನು ದೀನರಾಗಿ ವಿನಂತಿಸಿದ್ದು ಎಲ್ಲವನ್ನು ಈ ರಾಜ್ಯ ನೋಡಿದೆ. ಈಗ ಏನಾಗಿದೆ? ಇದೇ ವಿಪಕ್ಷಗಳ ಮೈತ್ರಿಕೂಟದ ಸದಸ್ಯ ಪಕ್ಷ ಡಿಎಂಕೆ ಬಹಿರಂಗವಾಗಿ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡುಹೊಡೆದು ನಿಂತಿದೆ. ಇದನ್ನು ಹೇಗೆ ಎದುರಿಸಬೇಕು ಎಂದು ಗೊತ್ತಾಗದೇ ರಾಜ್ಯದ ಕಾಂಗ್ರೆಸ್ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಒಂದು ವೇಳೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಹೆಚ್ಚಿನ ಸಂಸದರು ಆಯ್ಕೆಯಾಗಿ ವಿಪಕ್ಷಗಳ ಮೈತ್ರಿಕೂಟ ಅಪ್ಪಿತಪ್ಪಿ ಅಧಿಕಾರಕ್ಕೆ ಬಂದರೆ ಆಗ ಮೇಕೆದಾಟು ಯೋಜನೆ ಆಗುತ್ತೋ, ಬಿಡುತ್ತೋ ಎನ್ನುವುದನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಈಗಲೇ ಸ್ಪಷ್ಟಪಡಿಸಬೇಕು. ಇಲ್ಲದೇ ಹೋದರೆ “ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಪ್ರಮುಖ ಪಕ್ಷ ಡಿಎಂಕೆ. ಮೇಕೆದಾಟು ಅಣೆಕಟ್ಟು ಮಾಡಲು ಅವರು ಬಿಡುವುದಿಲ್ಲ. ಆದ್ದರಿಂದ ನಮಗೆ ಬೇರೆ ದಾರಿಯಿಲ್ಲ” ಎಂದು ಹೇಳಿ ಈಗ ಗ್ಯಾರಂಟಿಗಳಿಗೆ ಹಾಕಿದ ಹಾಗೆ ಕಂಡೀಷನ್ ಎಂಬ ಟೋಪಿ ಹಾಕುವ ಬದಲು ಈಗಲೇ ಹೇಳಿಬಿಡುವುದು ಒಳ್ಳೆಯದು.

ಮೇಕೆದಾಟು ಮಾಡಲು ಬಿಡುತ್ತಾರಾ?

ಮೇಕೆದಾಟು ಅಣೆಕಟ್ಟಿನಿಂದ ಹೆಚ್ಚಿನ ಪ್ರಯೋಜನ ಪಡೆಯುವವರು ರೈತರು ಕೂಡ ಹೌದು. ಕಾಂಗ್ರೆಸ್ ಈಗಲೇ ವಿಷಯ ಕ್ಲಿಯರ್ ಮಾಡಿದರೆ ಕೃಷಿಕರು ಕೂಡ ತಮ್ಮ ಬೆಂಬಲ ಯಾರಿಗೆಂದು ನಿರ್ಧರಿಸಿಬಿಡುತ್ತಾರೆ. ಮೇಕೆದಾಟು ಅಣೆಕಟ್ಟು ಅಸಂಖ್ಯಾತ ಜನರ ಜೀವನದ ಪ್ರಶ್ನೆಯೂ ಹೌದು. ಅದನ್ನು ಸ್ಟಾಲಿನ್ ಪ್ರಣಾಲಿಕೆಯಲ್ಲಿ ಸೇರಿಸಿ ಕರ್ನಾಟಕ ಕಾಂಗ್ರೆಸ್ಸಿಗೆ ಬಿಸಿತುಪ್ಪವನ್ನಾಗಿಸಿದ್ದಾರೆ. ಸ್ಟಾಲಿನ್ ಹವಾ ಹೇಗಿದೆ ಎಂದರೆ ಅವರು ಮಾಡಿ ಎಂದರೆ ಮೇಕೆದಾಟು ಅಣೆಕಟ್ಟು, ಬೇಡಾ ಎಂದರೆ ಅದು ಇಲ್ಲವೇ ಇಲ್ಲ. ಸ್ವಾತಂತ್ರ್ಯಪೂರ್ವದ ರಾಷ್ಟ್ರೀಯ ಪಕ್ಷದ ಅವಸ್ಥೆ ಸದ್ಯ ಹೀಗಿದೆ….

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Hanumantha Kamath January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Hanumantha Kamath January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search