• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ವಿರುದ್ಧ ಕೆ ಸುರೇಂದ್ರನ್!

Tulunadu News Posted On March 26, 2024


  • Share On Facebook
  • Tweet It

ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿರುವ ಮಂಜೇಶ್ವರದಲ್ಲಿ 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಕಾಂಗ್ರೆಸ್ಸಿನ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಜಾಕ್ ವಿರುದ್ಧ ಕೇವಲ 89 ಮತಗಳಿಂದ ಸೋತಿದ್ದ ಕೆ ಸುರೇಂದ್ರನ್ ಅವರು ಈಗ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಎರಡನೇ ಬಾರಿ ವಯನಾಡಿನಿಂದ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ವಿರುದ್ಧ ಸುರೇಂದ್ರನ್ ಸ್ಪರ್ಧಿಸುತ್ತಿದ್ದಾರೆ.

ಇಲ್ಲಿಯವರೆಗೆ ಕಾಂಗ್ರೆಸ್ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಹುಲ್ ಗಾಂಧಿಯವರು ಕೇವಲ ಒಂದು ಸೀಟಿನಿಂದ ಮಾತ್ರ ಸ್ಪರ್ಧಿಸುತ್ತಿದ್ದಾರೆ. 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಉತ್ತರ ಪ್ರದೇಶದ ಅಮೇಠಿ ಹಾಗೂ ಕೇರಳದ ವಯನಾಡು ಎರಡು ಕಡೆಗಳಿಂದ ಸ್ಪರ್ಧೆ ಮಾಡಿ ಅಮೇಠಿಯಲ್ಲಿ ಸೋತು, ವಯನಾಡಿನಲ್ಲಿ ಗೆದ್ದಿದ್ದರು. ಈ ಬಾರಿ ಕೇವಲ ಒಂದೇ ಸೀಟಿನಿಂದ ಸ್ಪರ್ಧಿಸುವುದು ರಾಹುಲ್ ಅವರಿಗಂತೂ ಬಹಳ ಸವಾಲಿನ ಕೆಲಸವಾಗಿದೆ. ಇನ್ನು ಸುರೇಂದ್ರನ್ ಅವರನ್ನು ಕಣಕ್ಕೆ ಇಳಿಸಿ ಭಾರತೀಯ ಜನತಾ ಪಾರ್ಟಿ ರಾಹುಲ್ ಅವರಿಗೆ ಪ್ರಬಲ ಸ್ಪರ್ಧೆ ನೀಡಿದೆ. ಸುರೇಂದ್ರನ್ ಕೇರಳದ ಬಿಜೆಪಿ ಅಧ್ಯಕ್ಷರೂ ಆಗಿದ್ದಾರೆ. 2009 ಮತ್ತು 2014 ರಲ್ಲಿ ಸುರೇಂದ್ರನ್ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಎರಡೂ ಬಾರಿ ಸಿಪಿಐ (ಎಂ) ಅಭ್ಯರ್ಥಿ ಪಿ ಕರುಣಾಕರನ್ ಅವರ ವಿರುದ್ಧ ಸೋತಿದ್ದರು. 2019 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಟೋ ಅಂಟೋನಿ ವಿರುದ್ಧ ಪಥಾನಾಮತ್ತಿಲ್ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ನೀಡಿದ್ದರೂ 84,462 ಮತಗಳ ಅಂತರದಿಂದ ಸೋತಿದ್ದರು.

ಈ ಬಾರಿ ರಾಹುಲ್ ಗಾಂಧಿ ಅವರು ವಯನಾಡು ಕ್ಷೇತ್ರದಲ್ಲಿ ಸುರೇಂದ್ರನ್ ಜೊತೆ ಸಿಪಿಐ ವಿರುದ್ಧವೂ ಸ್ಪರ್ಧೆ ಮಾಡಬೇಕಾಗಿದೆ. ಸಿಪಿಐ ಅಣ್ಣೀ ರಾಜಾ ಅವರನ್ನು ಕಣಕ್ಕೆ ಇಳಿಸಿದೆ.

ಹಾಗೆ ನೋಡಿದರೆ ಇ.0.ಡಿ.ಯಾ ಮೈತ್ರಿಕೂಟದಲ್ಲಿ ಸಿಪಿಐ ಕೂಡ ಅಂಗಪಕ್ಷ. ಆದರೆ ಕೇರಳದಲ್ಲಿ ಸಿಪಿಐಗೆ ಕಾಂಗ್ರೆಸ್ ಶತ್ರು. ಆದ್ದರಿಂದ ಕಮ್ಯೂನಿಸ್ಟರು ರಾಹುಲ್ ಗಾಂಧಿಯವರನ್ನು ಕೇರಳದಿಂದ ಕಣಕ್ಕೆ ಇಳಿಸುವ ಬದಲು ಬೇರೆ ರಾಜ್ಯಗಳಿಂದ ಕಣಕ್ಕೆ ಇಳಿಸಿ ಎಂದು ಸಲಹೆ ನೀಡಿದೆ. ರಾಹುಲ್ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುವ ಅಗತ್ಯ ಏನಿದೆ? ಅವರು ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕದಿಂದಲೂ ಸ್ಪರ್ಧಿಸಬಹುದಲ್ಲ ಎಂದು ವಯನಾಡು ಸಿಪಿಐ ಅಭ್ಯರ್ಥಿ ಅಣ್ಣಿ ರಾಜಾ ಸಲಹೆ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search