• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಪಲ್ಲವಿ ಡೆಂಪೊ: ದಕ್ಷಿಣ ಗೋವಾದಲ್ಲಿ ಬಿಜೆಪಿ ಮಾಸ್ಟರ್ ಸ್ಟೋಕ್!

Tulunadu News Posted On March 26, 2024
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಐದನೇ ಪಟ್ಟಿಯಲ್ಲಿ ದಕ್ಷಿಣ ಗೋವಾದಿಂದ ಯಾರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಬಿಜೆಪಿಯಿಂದ ಖ್ಯಾತ ಉದ್ಯಮಿ ಶ್ರೀನಿವಾಸ್ ಡೆಂಪೊ ಅವರ ಪತ್ನಿ 49 ವರ್ಷ ವಯಸ್ಸಿನ ಪಲ್ಲವಿ ಡೆಂಪೊ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಪಲ್ಲವಿ ಡೆಂಪೊ ಗೋವಾ ಚುನಾವಣಾ ಇತಿಹಾಸದಲ್ಲಿ ಮೊದಲ ಮಹಿಳಾ ಅಭ್ಯರ್ಥಿಯಾಗಿಯೂ ದಾಖಲೆ ಬರೆದಿದ್ದಾರೆ. ಗೋವಾ ರಾಜ್ಯದಲ್ಲಿ ಕೇವಲ ಎರಡು ಲೋಕಸಭಾ ಸ್ಥಾನಗಳಿದ್ದು, ದಕ್ಷಿಣ ಗೋವಾದಲ್ಲಿ ಕಾಂಗ್ರೆಸ್ಸಿನ ಫ್ರಾನ್ಸಿಸ್ ಸರ್ದಿನ್ನಾ ಹಾಲಿ ಸಂಸದರಾಗಿದ್ದಾರೆ. 1999 ರಲ್ಲಿ ಬಿಜೆಪಿಯಿಂದ ರಮಾಕಾಂತ್ ಅನ್ಗಲೆ ಹಾಗೂ 2014 ರಲ್ಲಿ ನರೇಂದ್ರ ಸವೈಕರ್ ಮಾತ್ರ ಇಲ್ಲಿಯ ತನಕ ಈ ಕ್ಷೇತ್ರದಿಂದ ಗೆದ್ದಿರುತ್ತಾರೆ.

ದಕ್ಷಿಣ ಗೋವಾ ಜನಸಂಖ್ಯಾ ಆಧಾರಿತವಾಗಿ ನೋಡಿದ್ರೆ ಇಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದವರು ಎಲ್ಲಾ ಸಮುದಾಯಗಳ ಪ್ರೀತಿ, ವಿಶ್ವಾಸ ಗಳಿಸಿರುವುದರಿಂದ ಚುನಾವಣೆಗೆ ನಿಂತರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಯಾಕೆಂದರೆ ಜಿಎಸ್ ಬಿಗಳು ಕೊಂಕಣಿ ಮಾತನಾಡುವುದರಿಂದ ಬೇರೆ ಸಮುದಾಯದ ವೋಟುಗಳನ್ನು ಕೂಡ ಸೆಳೆಯುವ ಅವಕಾಶವಿದೆ. ಇನ್ನು ಮಹಿಳಾ ಮತದಾರರು ಕೂಡ ನಿರ್ಣಾಯಕರಾಗಿರುವುದರಿಂದ ಬಿಜೆಪಿ ಇಲ್ಲಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಮಹಿಳೆಯರ ಮತಗಳನ್ನು ಬಿಜೆಪಿಗೆ ಆಕರ್ಷಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಇನ್ನು ಪಲ್ಲವಿ ಹಾಗೂ ಅವರ ಪತಿ ಖ್ಯಾತ ಉದ್ಯಮಿಗಳು ಕೂಡ ಆಗಿದ್ದು, ಆರ್ಥಿಕವಾಗಿಯೂ ಚುನಾವಣೆಗೆ ಇದು ಸಹಕಾರಿಯಾಗಿದೆ. ಇನ್ನು ಪಲ್ಲವಿ ಕುಟುಂಬಕ್ಕೆ ಗೋವಾದಲ್ಲಿ ಬಹಳ ದೊಡ್ಡ ನೆಟ್ ವರ್ಕ್ ಇದ್ದು, ಅವರ ಪತಿ ಶ್ರೀನಿವಾಸ್ ಡೆಂಪೊ ಅವರು ಗೋವಾದ ಚೆಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಪ್ರಮುಖರಾಗಿದ್ದಾರೆ. ಇದು ಮಾಧ್ಯಮ ನಿರ್ವಹಣೆಯಲ್ಲಿ ಪಲ್ಲವಿಯವರ ಗೆಲುವಿಗೆ ಸಹಕಾರಿಯಾಗಲಿದೆ. ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಆಡಳಿತದಲ್ಲಿ ಜಿಎಸ್ ಬಿ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪವನ್ನು ಇದು ಹೋಗಲಾಡಿಸಲಿದೆ.

ಪಲ್ಲವಿಯವರ ಗೆಲುವಿನ ಸಾಧ್ಯತೆ ಹೆಚ್ಚಾಗಿರುವುದರಿಂದ ಗೋವಾ ರಾಜ್ಯದ ರಾಜಕೀಯದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳಿಗೂ ಇಲ್ಲಿ ಅವಕಾಶ ನೀಡಿದಂತೆ ಆಗುತ್ತದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮರಾಠಾ ಕುಂಬಿ ಸಮುದಾಯಕ್ಕೆ ಸೇರಿದವರಾಗಿದ್ದು, ಅವರದ್ದೇ ಪಂಗಡದವರು ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ಭಂಡಾರಿ ಸಮುದಾಯಕ್ಕೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಅನೇಕ ಕ್ರೈಸ್ತರು ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನಪಡೆದಿದ್ದಾರೆ. ಇನ್ನು ಪಲ್ಲವಿ ಕುಟುಂಬಕ್ಕೆ ಗೋವಾದ ಎಲ್ಲಾ ಪಕ್ಷದವರೊಂದಿಗೂ ಸೌಹಾರ್ದ ಬಾಂಧವ್ಯ ಇರುವುದರಿಂದ ಅದು ಪಲ್ಲವಿ ಗೆಲುವಿಗೆ ಅನುಕೂಲವಾಗಲಿದೆ. ಬೇರೆ ಪಕ್ಷಗಳ ಮುಖಂಡರು ಪಲ್ಲವಿಯವರನ್ನು ಗೆಲ್ಲಿಸಲು ತಮ್ಮ ಸಹಕಾರ ನೀಡಲಿದ್ದಾರೆ. ಒಟ್ಟಿನಲ್ಲಿ ಗೋವಾದ ಎರಡೂ ಲೋಕಸಭಾ ಕ್ಷೇತ್ರಗಳು ಈ ಬಾರಿ ಬಿಜೆಪಿ ಪಾಲಾಗಲಿವೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search