• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಂದೇಶಖಾಲಿ ಸಂತ್ರಸ್ತೆಗೆ ಟಿಕೆಟ್ ನೀಡಿ ಶಕ್ತಿ ಸ್ವರೂಪ್ ಎಂದ ಮೋದಿ!

Tulunadu News Posted On March 27, 2024
0


0
Shares
  • Share On Facebook
  • Tweet It

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಷಹಜಹಾನ್ ಹಾಗೂ ಆತನ ಬೆಂಬಲಿಗರ ನಿರಂತರ ದೌರ್ಜನ್ಯದಿಂದ ಬುಗಿಲೆದ್ದ ಆಕ್ರೋಶದ ಕೇಂದ್ರಬಿಂದು ಆಗಿದ್ದ ಸಂತ್ರಸ್ತೆ ರೇಖಾ ಪತ್ರಾ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ. ಪಶ್ಚಿಮ ಬಂಗಾಲದ ಬಸೀರಹಟ್ ಲೋಕಸಭಾ ಕ್ಷೇತ್ರದಿಂದ ರೇಖಾ ಪತ್ರ ಸ್ಪರ್ಧಿಸಲಿದ್ದಾರೆ. ಇದು ಬಿಜೆಪಿಯ ಪಾಲಿಗೆ ಸವಾಲಿನದ್ದಾಗಿದ್ದು, ಒಂದು ವೇಳೆ ರೇಖಾ ಪತ್ರ ಗೆದ್ದರೆ ಅದು ಮಹಿಳಾ ಮುಖ್ಯಮಂತ್ರಿಯನ್ನೇ ಹೊಂದಿರುವ ಪಶ್ಚಿಮ ಬಂಗಾಲದ ಟಿಎಂಸಿ ಪಕ್ಷದ ಇಮೇಜಿಗೆ ದೊಡ್ಡ ದಕ್ಕೆ ತರಲಿದೆ ಎಂದು ಹೇಳಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು ಅಭ್ಯರ್ಥಿ ರೇಖಾ ಪತ್ರಾ ಅವರಿಗೆ ಕರೆ ಮಾಡಿ ಚುನಾವಣೆಯ ಸಿದ್ಧತೆಯ ಬಗ್ಗೆ ಕೇಳಿದರು. ಈ ಸಂದರ್ಭದಲ್ಲಿ ರೇಖಾ ಅವರನ್ನು ಶಕ್ತಿ ಸ್ವರೂಪ್ ಎಂದು ಬಣ್ಣಿಸಿದ ಮೋದಿಯವರು, ರೇಖಾ ಪತ್ರಾ ಅವರ ಧೈರ್ಯವನ್ನು ಶ್ಲಾಘಿಸಿದರು. ಪ್ರಧಾನಿಯೊಂದಿಗೆ ಮಾತನಾಡಿದ ರೇಖಾ ಅವರು ತನಗೆ ಟಿಕೆಟ್ ನೀಡಿ ಪ್ರೋತ್ಸಾಹಿಸಿರುವುದಕ್ಕೆ ಕೃತಜ್ಞತೆಗಳನ್ನು ಹೇಳಿ ತಮ್ಮ ಲೋಕಸಭಾ ಕ್ಷೇತ್ರದಲ್ಲಿ ಎಲ್ಲರೂ ಬೆಂಬಲಿಸುತ್ತಿದ್ದಾರೆ. ಉತ್ತಮ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು. ನಿಮ್ಮ ಕೈ ನನ್ನ ತಲೆಯ ಮೇಲೆ ಇರುವುದರಿಂದ ಗೆಲ್ಲುವ ಭರವಸೆ ಮೂಡಿದೆ ಎಂದು ಮೋದಿಯವರಿಗೆ ರೇಖಾ ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಮೋದಿಯವರು ಇಡೀ ರಾಷ್ಟ್ರದ ತಾಯಂದಿರ ಕೈ ತನ್ನ ತಲೆ ಮೇಲಿದೆ. ಅವರ ಆರ್ಶೀವಾದದಿಂದ ತಾನು ಉತ್ತಮ ಕಾರ್ಯ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಈ ಬಸೀರಹಟ್ ಲೋಕಸಭಾ ಕ್ಷೇತ್ರ ಟಿಎಂಸಿ ಪಕ್ಷಕ್ಕೂ ದೊಡ್ಡ ಸವಾಲಿನದ್ದಾಗಿದ್ದು, ಹಾಲಿ ಸಂಸದೆ, ನಟಿ ನುಸ್ರತ್ ಜಹಾನ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ಸ್ಥಾನಕ್ಕೆ ಹಾಜಿ ನುರುಲ್ ಇಸ್ಲಾಂ ಅವರಿಗೆ ಟಿಕೆಟ್ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search