• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎರಡು ಸಲ ಪೆಟ್ಟು ಬಿದ್ದಿದೆ, ಮೂರನೇ ಸಲ ಹೆಚ್ಚು ಕಡಿಮೆ ಆದ್ರೆ… ಎಂದ ನಿಖಿಲ್!

Tulunadu News Posted On March 27, 2024
0


0
Shares
  • Share On Facebook
  • Tweet It

ಎನ್ ಡಿಎ ಮೈತ್ರಿಕೂಟದ ಅಂಗಪಕ್ಷವಾಗಿರುವ ಜಾತ್ಯಾತೀತ ಜನತಾದಳಕ್ಕೆ ಅಳೆದು ತೂಗಿ ರಾಜ್ಯದಲ್ಲಿ ಮೂರು ಲೋಕಸಭಾ ಕ್ಷೇತ್ರಗಳನ್ನು ಭಾರತೀಯ ಜನತಾ ಪಾರ್ಟಿ ಹೈಕಮಾಂಡ್ ಬಿಟ್ಟುಕೊಟ್ಟಿದೆ. ಆರಂಭದಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರ ಮಾತ್ರ ನೀಡುವ ಬಗ್ಗೆ ವದಂತಿ ಹರಡಿತ್ತು. ಕೇವಲ ಎರಡು ಸ್ಥಾನಗಳಿಗಾಗಿ ಮೈತ್ರಿ ಬೇಕಿತ್ತಾ? ಅಲ್ಲಿ ಎರಡೂ ಕಡೆ ನಾವು ಹೇಗಾದರೂ ಮಾಡಿ ಗೆಲ್ಲುತ್ತೇವೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳುತ್ತಿದ್ದಂತೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡ ಬಿಜೆಪಿ ರಾಷ್ಟ್ರೀಯ ಮುಖಂಡರು ಕೋಲಾರವನ್ನು ಕೂಡ ಬಿಟ್ಟುಕೊಡುವ ಬಗ್ಗೆ ಚಿಂತನೆ ನಡೆಸಿದರು. ಪ್ರಸ್ತುತ ಎಲ್ಲರ ನಿರೀಕ್ಷೆಯಂತೆ ಹಾಸನದಲ್ಲಿ ದೇವೆಗೌಡರ ಮೊಮ್ಮೊಗ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಲ್ಲಿ ಮಲ್ಲೇಶ್ ಬಾಬು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಂಡ್ಯದಲ್ಲಿ ಸಿ.ಎಸ್.ಪುಟ್ಟರಾಜು ಹಾಗೂ ನಿಖಿಲ್ ಕುಮಾರಸ್ವಾಮಿಯವರಲ್ಲಿ ಯಾರಾದರೂ ಒಬ್ಬರು ಸ್ಪರ್ಧಿಸಲಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಆದರೆ ಅಂತಿಮವಾಗಿ ಕುಮಾರಸ್ವಾಮಿಯವರೇ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೆಗೌಡರು ಸ್ವಷ್ಟಪಡಿಸಿದ್ದಾರೆ.

ಮಂಡ್ಯದಲ್ಲಿ ಕುಮಾರಸ್ವಾಮಿಯವರು ಸ್ಪರ್ಧಿಸಿದರೆ ಮಾತ್ರ ಗೆಲ್ಲುವ ಸಾಧ್ಯತೆ ಇದೆ ಎನ್ನುವ ಗುಪ್ತಚರ ಮಾಹಿತಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರ ಕೈತಲುಪಿತ್ತು. ಆದ್ದರಿಂದ ಮಂಡ್ಯದಲ್ಲಿ ಕುಮಾರಸ್ವಾಮಿಯವರೇ ನಿಲ್ಲಬೇಕು ಎನ್ನುವುದು ಬಿಜೆಪಿ ಕೇಂದ್ರ ಸಮಿತಿಯ ಆಶಯವೂ ಆಗಿತ್ತು. ಆದರೆ ಕುಮಾರಸ್ವಾಮಿಯವರಿಗೆ ಹೇಗಾದರೂ ಮಾಡಿ ಮಗನ ರಾಜಕೀಯ ಭವಿಷ್ಯ ಭದ್ರಗೊಳಿಸಬೇಕೆಂಬ ಆಸೆ ಗಟ್ಟಿಯಾಗಿತ್ತು. ಅದಕ್ಕಾಗಿ ನಿಖಿಲ್ ಅವರನ್ನು ಮಂಡ್ಯದಿಂದ ಮತ್ತೆ ಕಣಕ್ಕೆ ಇಳಿಸಬೇಕೆಂದು ಅವರು ಯೋಜನೆ ಹಾಕಿಕೊಂಡಿದ್ದರು. ಆದರೆ ನಿಖಿಲ್ ಅದಕ್ಕೆ ಒಪ್ಪಲಿಲ್ಲ. ಈಗಾಗಲೇ 2019 ರಲ್ಲಿ ಮಂಡ್ಯದಿಂದ ಹಾಗೂ 2023 ರಲ್ಲಿ ರಾಮನಗರದಿಂದ ಸೋತಿರುವುದರಿಂದ ಈಗ ಮತ್ತೆ ಏನಾದರೂ ಹೆಚ್ಚು ಕಡಿಮೆ ಆಗಿ ಮತ್ತೆ ಮಂಡ್ಯದಲ್ಲಿ ಸೋತರೆ ಅದನ್ನು ರಾಜಕೀಯವಾಗಿ ಸಹಿಸಿಕೊಳ್ಳುವ ಶಕ್ತಿ ಇಲ್ಲ ಎಂದು ನಿಖಿಲ್ ಹೇಳಿದ್ದಾಗಿ ಕುಮಾರಸ್ವಾಮಿ ಸುದ್ದಿಗೋಷ್ಟಿಯಲ್ಲಿ ಬಹಿರಂಗಪಡಿಸಿದ್ದಾರೆ. ಆದ್ದರಿಂದ ಅನಿವಾರ್ಯವಾಗಿ ಪಕ್ಷದ ಏಳಿಗೆಗಾಗಿ ತಾನು ತಲೆಕೊಡಬೇಕಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ಸಿನಿಂದ ಸ್ಟಾರ್ ಚಂದ್ರು ಎದುರಾಳಿಯಾಗಿದ್ದಾರೆ. ಸುಮಲತಾ ಏನು ಮಾಡುತ್ತಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search