• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಹಕಾರಿ ಬ್ಯಾಂಕುಗಳಲ್ಲಿರುವ ಜನಸಾಮಾನ್ಯರ ಹಣ ಕೊಳ್ಳೆಹೊಡೆಯಲಾಗಿದೆ ಎಂದ ಬಿಜೆಪಿ ಅಭ್ಯರ್ಥಿ!

Tulunadu News Posted On March 27, 2024
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರು ಕೇರಳದ ಅಳತ್ತೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸರಸು ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಕೇರಳದ ವಸ್ತುಸ್ಥಿತಿಯನ್ನು ವಿವರಿಸಿದ ಸರಸು ಅವರು ” ಕೇರಳದಲ್ಲಿರುವ ಸಹಕಾರಿ ಬ್ಯಾಂಕುಗಳು ಸಿಪಿಐ(ಎಂ} ಮುಖಂಡರ ಆಡಳಿತದಲ್ಲಿವೆ. ಅವರು ಜನಸಾಮಾನ್ಯರು ಬ್ಯಾಂಕಿನಲ್ಲಿಟ್ಟಿರುವ ಡೆಪಾಸಿಟ್ ಗಳನ್ನು ಲೂಟಿ ಹೊಡೆಯುತ್ತಿದ್ದಾರೆ. ಇದರಿಂದ ಪಾಪದ ಜನ ತಮ್ಮ ಡೆಪಾಸಿಟ್ ಹಿಂತೆಗೆದುಕೊಳ್ಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಅನೇಕ ದೂರುಗಳು ಜನರಿಂದ ಬರುತ್ತಿವೆ. ಇದಕ್ಕೆ ತಾವು ಏನಾದರೂ ಕ್ರಮ ತೆಗೆದುಕೊಳ್ಳಬಹುದೇ?” ಎಂದು ವಿನಂತಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿಯವರು ” ಚುನಾವಣೆಯ ಮೊದಲೇ ಕೇವಲ ಅಭ್ಯರ್ಥಿಯಾಗಿ ನೀವು ಜನಸಾಮಾನ್ಯರ ಬಗ್ಗೆ ಇಷ್ಟು ಕಾಳಜಿ ವಹಿಸುತ್ತಿರುವುದು ನಿಜಕ್ಕೂ ಖುಷಿಯ ವಿಷಯ. ಇದು ಜನಸೇವಕರ ಉತ್ತಮ ಲಕ್ಷಣವೂ ಹೌದು. ತಾವು ಹೇಳಿರುವ ವಿಷಯ ನನ್ನ ಅರಿವಿಗೆ ಬಂದಿದೆ. ಈ ಬಗ್ಗೆ ಕೊಂಚ ಮಾಹಿತಿ ನನ್ನ ಬಳಿ ಇದೆ. ಅನೇಕ ಬಡ ಕುಟುಂಬಗಳು ಇದರಿಂದ ನಷ್ಟಕ್ಕೆ ಒಳಗಾಗಿರುವುದು ನಿಜ. ನಮ್ಮ ಸರಕಾರ ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಅನುಭವಿಸುವ ಹಾಗೆ ಮಾಡಿ ಬಡವರ ಹಣ ಅವರಿಗೆ ಮರಳಿಸುವ ಕೆಲಸ ಮಾಡಲಿದೆ. ನಾನು ಈ ಬಗ್ಗೆ ಕಾನೂನಾತ್ಮಕ ಸಲಹೆಗಳನ್ನು ಪಡೆಯುವೆ. ಒಂದು ವೇಳೆ ಜನಸಾಮಾನ್ಯರ ಹಣ ಹಿಂದಿರುಗಿಸಲು ಆರೋಪಿಗಳ ಆಸ್ತಿಯನ್ನು ಕೂಡ ಮುಟ್ಟುಗೋಲು ಹಾಕಲು ಇಡಿ ಮುಂದಾದರೆ ಆಗ ಪ್ರತಿ ಅಸಹಾಯಕರ ಹಣ ಅವರಿಗೆ ಹಿಂದಿರುಗಿಸುವ ಕೆಲಸವೂ ನಡೆಯಲಿದೆ. ನಾವು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search