• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಹಕಾರಿ ಬ್ಯಾಂಕುಗಳಲ್ಲಿರುವ ಜನಸಾಮಾನ್ಯರ ಹಣ ಕೊಳ್ಳೆಹೊಡೆಯಲಾಗಿದೆ ಎಂದ ಬಿಜೆಪಿ ಅಭ್ಯರ್ಥಿ!

Tulunadu News Posted On March 27, 2024
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರು ಕೇರಳದ ಅಳತ್ತೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸರಸು ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಕೇರಳದ ವಸ್ತುಸ್ಥಿತಿಯನ್ನು ವಿವರಿಸಿದ ಸರಸು ಅವರು ” ಕೇರಳದಲ್ಲಿರುವ ಸಹಕಾರಿ ಬ್ಯಾಂಕುಗಳು ಸಿಪಿಐ(ಎಂ} ಮುಖಂಡರ ಆಡಳಿತದಲ್ಲಿವೆ. ಅವರು ಜನಸಾಮಾನ್ಯರು ಬ್ಯಾಂಕಿನಲ್ಲಿಟ್ಟಿರುವ ಡೆಪಾಸಿಟ್ ಗಳನ್ನು ಲೂಟಿ ಹೊಡೆಯುತ್ತಿದ್ದಾರೆ. ಇದರಿಂದ ಪಾಪದ ಜನ ತಮ್ಮ ಡೆಪಾಸಿಟ್ ಹಿಂತೆಗೆದುಕೊಳ್ಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಅನೇಕ ದೂರುಗಳು ಜನರಿಂದ ಬರುತ್ತಿವೆ. ಇದಕ್ಕೆ ತಾವು ಏನಾದರೂ ಕ್ರಮ ತೆಗೆದುಕೊಳ್ಳಬಹುದೇ?” ಎಂದು ವಿನಂತಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿಯವರು ” ಚುನಾವಣೆಯ ಮೊದಲೇ ಕೇವಲ ಅಭ್ಯರ್ಥಿಯಾಗಿ ನೀವು ಜನಸಾಮಾನ್ಯರ ಬಗ್ಗೆ ಇಷ್ಟು ಕಾಳಜಿ ವಹಿಸುತ್ತಿರುವುದು ನಿಜಕ್ಕೂ ಖುಷಿಯ ವಿಷಯ. ಇದು ಜನಸೇವಕರ ಉತ್ತಮ ಲಕ್ಷಣವೂ ಹೌದು. ತಾವು ಹೇಳಿರುವ ವಿಷಯ ನನ್ನ ಅರಿವಿಗೆ ಬಂದಿದೆ. ಈ ಬಗ್ಗೆ ಕೊಂಚ ಮಾಹಿತಿ ನನ್ನ ಬಳಿ ಇದೆ. ಅನೇಕ ಬಡ ಕುಟುಂಬಗಳು ಇದರಿಂದ ನಷ್ಟಕ್ಕೆ ಒಳಗಾಗಿರುವುದು ನಿಜ. ನಮ್ಮ ಸರಕಾರ ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಅನುಭವಿಸುವ ಹಾಗೆ ಮಾಡಿ ಬಡವರ ಹಣ ಅವರಿಗೆ ಮರಳಿಸುವ ಕೆಲಸ ಮಾಡಲಿದೆ. ನಾನು ಈ ಬಗ್ಗೆ ಕಾನೂನಾತ್ಮಕ ಸಲಹೆಗಳನ್ನು ಪಡೆಯುವೆ. ಒಂದು ವೇಳೆ ಜನಸಾಮಾನ್ಯರ ಹಣ ಹಿಂದಿರುಗಿಸಲು ಆರೋಪಿಗಳ ಆಸ್ತಿಯನ್ನು ಕೂಡ ಮುಟ್ಟುಗೋಲು ಹಾಕಲು ಇಡಿ ಮುಂದಾದರೆ ಆಗ ಪ್ರತಿ ಅಸಹಾಯಕರ ಹಣ ಅವರಿಗೆ ಹಿಂದಿರುಗಿಸುವ ಕೆಲಸವೂ ನಡೆಯಲಿದೆ. ನಾವು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search