• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಹಕಾರಿ ಬ್ಯಾಂಕುಗಳಲ್ಲಿರುವ ಜನಸಾಮಾನ್ಯರ ಹಣ ಕೊಳ್ಳೆಹೊಡೆಯಲಾಗಿದೆ ಎಂದ ಬಿಜೆಪಿ ಅಭ್ಯರ್ಥಿ!

Tulunadu News Posted On March 27, 2024
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರು ಕೇರಳದ ಅಳತ್ತೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸರಸು ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಕೇರಳದ ವಸ್ತುಸ್ಥಿತಿಯನ್ನು ವಿವರಿಸಿದ ಸರಸು ಅವರು ” ಕೇರಳದಲ್ಲಿರುವ ಸಹಕಾರಿ ಬ್ಯಾಂಕುಗಳು ಸಿಪಿಐ(ಎಂ} ಮುಖಂಡರ ಆಡಳಿತದಲ್ಲಿವೆ. ಅವರು ಜನಸಾಮಾನ್ಯರು ಬ್ಯಾಂಕಿನಲ್ಲಿಟ್ಟಿರುವ ಡೆಪಾಸಿಟ್ ಗಳನ್ನು ಲೂಟಿ ಹೊಡೆಯುತ್ತಿದ್ದಾರೆ. ಇದರಿಂದ ಪಾಪದ ಜನ ತಮ್ಮ ಡೆಪಾಸಿಟ್ ಹಿಂತೆಗೆದುಕೊಳ್ಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಅನೇಕ ದೂರುಗಳು ಜನರಿಂದ ಬರುತ್ತಿವೆ. ಇದಕ್ಕೆ ತಾವು ಏನಾದರೂ ಕ್ರಮ ತೆಗೆದುಕೊಳ್ಳಬಹುದೇ?” ಎಂದು ವಿನಂತಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿಯವರು ” ಚುನಾವಣೆಯ ಮೊದಲೇ ಕೇವಲ ಅಭ್ಯರ್ಥಿಯಾಗಿ ನೀವು ಜನಸಾಮಾನ್ಯರ ಬಗ್ಗೆ ಇಷ್ಟು ಕಾಳಜಿ ವಹಿಸುತ್ತಿರುವುದು ನಿಜಕ್ಕೂ ಖುಷಿಯ ವಿಷಯ. ಇದು ಜನಸೇವಕರ ಉತ್ತಮ ಲಕ್ಷಣವೂ ಹೌದು. ತಾವು ಹೇಳಿರುವ ವಿಷಯ ನನ್ನ ಅರಿವಿಗೆ ಬಂದಿದೆ. ಈ ಬಗ್ಗೆ ಕೊಂಚ ಮಾಹಿತಿ ನನ್ನ ಬಳಿ ಇದೆ. ಅನೇಕ ಬಡ ಕುಟುಂಬಗಳು ಇದರಿಂದ ನಷ್ಟಕ್ಕೆ ಒಳಗಾಗಿರುವುದು ನಿಜ. ನಮ್ಮ ಸರಕಾರ ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಅನುಭವಿಸುವ ಹಾಗೆ ಮಾಡಿ ಬಡವರ ಹಣ ಅವರಿಗೆ ಮರಳಿಸುವ ಕೆಲಸ ಮಾಡಲಿದೆ. ನಾನು ಈ ಬಗ್ಗೆ ಕಾನೂನಾತ್ಮಕ ಸಲಹೆಗಳನ್ನು ಪಡೆಯುವೆ. ಒಂದು ವೇಳೆ ಜನಸಾಮಾನ್ಯರ ಹಣ ಹಿಂದಿರುಗಿಸಲು ಆರೋಪಿಗಳ ಆಸ್ತಿಯನ್ನು ಕೂಡ ಮುಟ್ಟುಗೋಲು ಹಾಕಲು ಇಡಿ ಮುಂದಾದರೆ ಆಗ ಪ್ರತಿ ಅಸಹಾಯಕರ ಹಣ ಅವರಿಗೆ ಹಿಂದಿರುಗಿಸುವ ಕೆಲಸವೂ ನಡೆಯಲಿದೆ. ನಾವು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search