• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿಗೆ ಸೇರ್ತಾರಾ ತೇಜಸ್ವಿನಿ ಗೌಡ!

Tulunadu News Posted On March 27, 2024
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯಿಂದ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ ಅವರು ಆಸೆ ಈಡೇರದ ಹಿನ್ನಲೆಯಲ್ಲಿ ತಮ್ಮ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇದೇ ವರ್ಷದ ಜೂನ್ 17 ರವರೆಗೂ ಇತ್ತು. ಮತ್ತೊಂದು ಅವಧಿಗೆ ಅವಕಾಶ ಸಿಗುವ ಸಾಧ್ಯತೆ ಬಗ್ಗೆ ತೇಜಸ್ವಿನಿ ಗೌಡ ಅವರಿಗೆ ಅನುಮಾನ ಇದ್ದಿರಬಹುದು. ಅದಕ್ಕಾಗಿ ಅವರು ಲೋಕಸಭಾ ಕ್ಷೇತ್ರದ ಟಿಕೆಟನ್ನು ಪಡೆದು ಸ್ಪರ್ಧಿಸಲು ಮನಸ್ಸು ಮಾಡಿದ್ದರು.

ಒಕ್ಕಲಿಗರಾಗಿರುವುದರಿಂದ ತಮಗೆ ಸೇಫಾಗಿ ಕಾಣುವ ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದರು. ಆದರೆ ಮೈಸೂರಿನಿಂದ ಯದುವೀರ್ ಅವರಿಗೆ, ಬೆಂಗಳೂರು ಉತ್ತರದಿಂದ ಸದಾನಂದ ಗೌಡರ ಬದಲಿಗೆ ಶೋಭಾ ಕರಂದ್ಲಾಜೆ ಹಾಗೂ ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಅವರಿಗೆ ಟಿಕೆಟ್ ನೀಡಿರುವುದರಿಂದ ತೇಜಸ್ವಿನಿ ಗೌಡ ಅವರಿಗೆ ಯಾವ ಕ್ಷೇತ್ರವೂ ಉಳಿದಿಲ್ಲ.

2004 ರಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿದ್ದ ತೇಜಸ್ವಿನಿ ಗೌಡ ಅವರನ್ನು ದೇವೆಗೌಡರ ವಿರುದ್ಧ ಕಣಕ್ಕೆ ಇಳಿಸಿತ್ತು. ಆಗ ರಾಜಕೀಯದಲ್ಲಿ ಏನೂ ಆಗಿರದಿದ್ದ ತೇಜಸ್ವಿನಿ ಗೌಡ ಅವರು ದೇವೇಗೌಡ ಅವರನ್ನು ಒಂದು ಲಕ್ಷ ಮತಗಳ ಅಂತರದಿಂದ ಸೋಲಿಸಿ ಇತಿಹಾಸವನ್ನು ನಿರ್ಮಿಸಿದ್ದರು. ಆ ಮೂಲಕ ರಾಷ್ಟ್ರದಾದ್ಯಂತ ಹೊಸ ಸಂಚಲನ ಸೃಷ್ಟಿಯಾಗಿತ್ತು. ಮಾಜಿ ಪ್ರಧಾನಿಯನ್ನು ಸೋಲಿಸಿದವರು ಎನ್ನುವ ಹೆಗ್ಗಳಿಕೆಯೊಂದಿಗೆ ರಾಜಕೀಯ ಪಡಸಾಲೆಗೆ ಕಾಲಿಟ್ಟ ತೇಜಸ್ವಿನಿ ಗೌಡ ಅವರು 2009 ರಲ್ಲಿ ಡಿಲಿಮಿಟೇಶನ್ ಆದ ಅದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಆ ಬಳಿಕ ಕಾಂಗ್ರೆಸ್ಸಿನಲ್ಲಿ ಮೂಲೆಗುಂಪಾದ ತೇಜಸ್ವಿನಿ ಅವರು ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದಂತೆ ಬಿಜೆಪಿಗೆ ಸೇರಿದರು. ಕಳೆದ ಆರು ವರ್ಷಗಳಿಂದ ಅವರು ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಅವರು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ಸ್ವಹಸ್ತಾಕ್ಷರದಿಂದ ಬರೆದ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಅದನ್ನು ಸಭಾಪತಿಗಳು ಅಂಗೀಕರಿಸಿದ್ದಾರೆ. ತೇಜಸ್ವಿನಿ ಅವರು ಮತ್ತೆ ಮಾತೃಪಕ್ಷಕ್ಕೆ ಮರಳುತ್ತಾರಾ ಅಥವಾ ತಟಸ್ಥರಾಗಿ ಉಳಿಯುತ್ತಾರಾ ಎನ್ನುವುದು ಸದ್ಯಕ್ಕೆ ಕುತೂಹಲ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search