• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸಿದ ನವನೀತ್ ಕೌರ್ ಬಿಜೆಪಿಗೆ!

Tulunadu News Posted On March 28, 2024
0


0
Shares
  • Share On Facebook
  • Tweet It

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ದರ್ಶನ” ಸಿನೆಮಾದಿಂದ 2004 ರಲ್ಲಿ ನಾಯಕಿನಟಿಯಾಗಿ ಸಿನೆಮಾ ವೃತ್ತಿ ಆರಂಭಿಸಿ ನಂತರ ತೆಲುಗು ಸಿನೆಮಾ ರಂಗದಲ್ಲಿ ಕೆಲವು ಹಿಟ್ ಸಿನೆಮಾಗಳನ್ನು ನೀಡಿದ ನವನೀತ್ ಕೌರ್ ಅವರು ಭಾರತೀಯ ಜನತಾ ಪಾರ್ಟಿಯಿಂದ ಅಮರಾವತಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಅವರು ಮಾರ್ಚ್ 28 ರಂದು ಅಧಿಕೃತವಾಗಿ ಬಿಜೆಪಿಯನ್ನು ಸೇರಿದರು. ಇವರು ಅಮರಾವತಿ ಕ್ಷೇತ್ರದ ಹಾಲಿ ಸಂಸದೆಯಾಗಿದ್ದು, 2019 ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗ ಅವರಿಗೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದವು. ಅವರು ಕಳೆದ ಬಾರಿ ಶಿವಸೇನೆಯ ಆನಂದರಾವ್ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು.

ಮಹಾರಾಷ್ಟ್ರ ನಿಕಟಪೂರ್ವ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನೆ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡುವ ವಿಷಯದಲ್ಲಿ ಉಂಟಾದ ವಿವಾದದಿಂದ ನವನೀತ್ ಕೌರ್ ರಾಜಕೀಯವಾಗಿ ಹೆಚ್ಚು ಸುದ್ದಿಯಲ್ಲಿದ್ದರು. ಅವರ ಪತಿ ಕೂಡ ಶಾಸಕರಾಗಿದ್ದು, ಪಕ್ಷೇತರರಾಗಿ ಅಮರಾವತಿ ನಗರದಿಂದ ಗೆದ್ದಿದ್ದಾರೆ. ಇಬ್ಬರ ವಿರುದ್ಧವೂ ಮಹಾರಾಷ್ಟ್ರ ಪೊಲೀಸ್ ಇಲಾಖೆ ಹನುಮಾನ ಚಾಲೀಸಾ ವಿವಾದದಲ್ಲಿ ಕೇಸು ದಾಖಲಿಸಿದ ಪರಿಣಾಮ ಕೌರ್ 14 ದಿನಗಳ ಕಾಲ ಮುಂಬೈಯ ಬೈಕುಲಾ ಜೈಲಿನಲ್ಲಿದ್ದರು. ಅವರು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು ಎನ್ನುವ ಆರೋಪ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಮಾನ್ಯ ನ್ಯಾಯಾಲಯ ನವನೀತ್ ಕೌರ್ ಗೆ ಎರಡು ಲಕ್ಷ ರೂಪಾಯಿ ದಂಡ ಕೂಡ ವಿಧಿಸಿತ್ತು. ನವನೀತ್ ಕೌರ್ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿಯ ಸಂಖ್ಯಾದೃಷ್ಟಿಯಿಂದ ಇದು ಮಹತ್ವದ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search