• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸಿದ ನವನೀತ್ ಕೌರ್ ಬಿಜೆಪಿಗೆ!

Tulunadu News Posted On March 28, 2024


  • Share On Facebook
  • Tweet It

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ದರ್ಶನ” ಸಿನೆಮಾದಿಂದ 2004 ರಲ್ಲಿ ನಾಯಕಿನಟಿಯಾಗಿ ಸಿನೆಮಾ ವೃತ್ತಿ ಆರಂಭಿಸಿ ನಂತರ ತೆಲುಗು ಸಿನೆಮಾ ರಂಗದಲ್ಲಿ ಕೆಲವು ಹಿಟ್ ಸಿನೆಮಾಗಳನ್ನು ನೀಡಿದ ನವನೀತ್ ಕೌರ್ ಅವರು ಭಾರತೀಯ ಜನತಾ ಪಾರ್ಟಿಯಿಂದ ಅಮರಾವತಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಅವರು ಮಾರ್ಚ್ 28 ರಂದು ಅಧಿಕೃತವಾಗಿ ಬಿಜೆಪಿಯನ್ನು ಸೇರಿದರು. ಇವರು ಅಮರಾವತಿ ಕ್ಷೇತ್ರದ ಹಾಲಿ ಸಂಸದೆಯಾಗಿದ್ದು, 2019 ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗ ಅವರಿಗೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದವು. ಅವರು ಕಳೆದ ಬಾರಿ ಶಿವಸೇನೆಯ ಆನಂದರಾವ್ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು.

ಮಹಾರಾಷ್ಟ್ರ ನಿಕಟಪೂರ್ವ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನೆ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡುವ ವಿಷಯದಲ್ಲಿ ಉಂಟಾದ ವಿವಾದದಿಂದ ನವನೀತ್ ಕೌರ್ ರಾಜಕೀಯವಾಗಿ ಹೆಚ್ಚು ಸುದ್ದಿಯಲ್ಲಿದ್ದರು. ಅವರ ಪತಿ ಕೂಡ ಶಾಸಕರಾಗಿದ್ದು, ಪಕ್ಷೇತರರಾಗಿ ಅಮರಾವತಿ ನಗರದಿಂದ ಗೆದ್ದಿದ್ದಾರೆ. ಇಬ್ಬರ ವಿರುದ್ಧವೂ ಮಹಾರಾಷ್ಟ್ರ ಪೊಲೀಸ್ ಇಲಾಖೆ ಹನುಮಾನ ಚಾಲೀಸಾ ವಿವಾದದಲ್ಲಿ ಕೇಸು ದಾಖಲಿಸಿದ ಪರಿಣಾಮ ಕೌರ್ 14 ದಿನಗಳ ಕಾಲ ಮುಂಬೈಯ ಬೈಕುಲಾ ಜೈಲಿನಲ್ಲಿದ್ದರು. ಅವರು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು ಎನ್ನುವ ಆರೋಪ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಮಾನ್ಯ ನ್ಯಾಯಾಲಯ ನವನೀತ್ ಕೌರ್ ಗೆ ಎರಡು ಲಕ್ಷ ರೂಪಾಯಿ ದಂಡ ಕೂಡ ವಿಧಿಸಿತ್ತು. ನವನೀತ್ ಕೌರ್ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿಯ ಸಂಖ್ಯಾದೃಷ್ಟಿಯಿಂದ ಇದು ಮಹತ್ವದ ಬೆಳವಣಿಗೆಯಾಗಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search