• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸಿದ ನವನೀತ್ ಕೌರ್ ಬಿಜೆಪಿಗೆ!

Tulunadu News Posted On March 28, 2024
0


0
Shares
  • Share On Facebook
  • Tweet It

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ದರ್ಶನ” ಸಿನೆಮಾದಿಂದ 2004 ರಲ್ಲಿ ನಾಯಕಿನಟಿಯಾಗಿ ಸಿನೆಮಾ ವೃತ್ತಿ ಆರಂಭಿಸಿ ನಂತರ ತೆಲುಗು ಸಿನೆಮಾ ರಂಗದಲ್ಲಿ ಕೆಲವು ಹಿಟ್ ಸಿನೆಮಾಗಳನ್ನು ನೀಡಿದ ನವನೀತ್ ಕೌರ್ ಅವರು ಭಾರತೀಯ ಜನತಾ ಪಾರ್ಟಿಯಿಂದ ಅಮರಾವತಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಅವರು ಮಾರ್ಚ್ 28 ರಂದು ಅಧಿಕೃತವಾಗಿ ಬಿಜೆಪಿಯನ್ನು ಸೇರಿದರು. ಇವರು ಅಮರಾವತಿ ಕ್ಷೇತ್ರದ ಹಾಲಿ ಸಂಸದೆಯಾಗಿದ್ದು, 2019 ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗ ಅವರಿಗೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದವು. ಅವರು ಕಳೆದ ಬಾರಿ ಶಿವಸೇನೆಯ ಆನಂದರಾವ್ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು.

ಮಹಾರಾಷ್ಟ್ರ ನಿಕಟಪೂರ್ವ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನೆ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡುವ ವಿಷಯದಲ್ಲಿ ಉಂಟಾದ ವಿವಾದದಿಂದ ನವನೀತ್ ಕೌರ್ ರಾಜಕೀಯವಾಗಿ ಹೆಚ್ಚು ಸುದ್ದಿಯಲ್ಲಿದ್ದರು. ಅವರ ಪತಿ ಕೂಡ ಶಾಸಕರಾಗಿದ್ದು, ಪಕ್ಷೇತರರಾಗಿ ಅಮರಾವತಿ ನಗರದಿಂದ ಗೆದ್ದಿದ್ದಾರೆ. ಇಬ್ಬರ ವಿರುದ್ಧವೂ ಮಹಾರಾಷ್ಟ್ರ ಪೊಲೀಸ್ ಇಲಾಖೆ ಹನುಮಾನ ಚಾಲೀಸಾ ವಿವಾದದಲ್ಲಿ ಕೇಸು ದಾಖಲಿಸಿದ ಪರಿಣಾಮ ಕೌರ್ 14 ದಿನಗಳ ಕಾಲ ಮುಂಬೈಯ ಬೈಕುಲಾ ಜೈಲಿನಲ್ಲಿದ್ದರು. ಅವರು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು ಎನ್ನುವ ಆರೋಪ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಮಾನ್ಯ ನ್ಯಾಯಾಲಯ ನವನೀತ್ ಕೌರ್ ಗೆ ಎರಡು ಲಕ್ಷ ರೂಪಾಯಿ ದಂಡ ಕೂಡ ವಿಧಿಸಿತ್ತು. ನವನೀತ್ ಕೌರ್ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿಯ ಸಂಖ್ಯಾದೃಷ್ಟಿಯಿಂದ ಇದು ಮಹತ್ವದ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search