• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸಿದ ನವನೀತ್ ಕೌರ್ ಬಿಜೆಪಿಗೆ!

Tulunadu News Posted On March 28, 2024
0


0
Shares
  • Share On Facebook
  • Tweet It

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ದರ್ಶನ” ಸಿನೆಮಾದಿಂದ 2004 ರಲ್ಲಿ ನಾಯಕಿನಟಿಯಾಗಿ ಸಿನೆಮಾ ವೃತ್ತಿ ಆರಂಭಿಸಿ ನಂತರ ತೆಲುಗು ಸಿನೆಮಾ ರಂಗದಲ್ಲಿ ಕೆಲವು ಹಿಟ್ ಸಿನೆಮಾಗಳನ್ನು ನೀಡಿದ ನವನೀತ್ ಕೌರ್ ಅವರು ಭಾರತೀಯ ಜನತಾ ಪಾರ್ಟಿಯಿಂದ ಅಮರಾವತಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಅವರು ಮಾರ್ಚ್ 28 ರಂದು ಅಧಿಕೃತವಾಗಿ ಬಿಜೆಪಿಯನ್ನು ಸೇರಿದರು. ಇವರು ಅಮರಾವತಿ ಕ್ಷೇತ್ರದ ಹಾಲಿ ಸಂಸದೆಯಾಗಿದ್ದು, 2019 ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗ ಅವರಿಗೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದವು. ಅವರು ಕಳೆದ ಬಾರಿ ಶಿವಸೇನೆಯ ಆನಂದರಾವ್ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು.

ಮಹಾರಾಷ್ಟ್ರ ನಿಕಟಪೂರ್ವ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನೆ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡುವ ವಿಷಯದಲ್ಲಿ ಉಂಟಾದ ವಿವಾದದಿಂದ ನವನೀತ್ ಕೌರ್ ರಾಜಕೀಯವಾಗಿ ಹೆಚ್ಚು ಸುದ್ದಿಯಲ್ಲಿದ್ದರು. ಅವರ ಪತಿ ಕೂಡ ಶಾಸಕರಾಗಿದ್ದು, ಪಕ್ಷೇತರರಾಗಿ ಅಮರಾವತಿ ನಗರದಿಂದ ಗೆದ್ದಿದ್ದಾರೆ. ಇಬ್ಬರ ವಿರುದ್ಧವೂ ಮಹಾರಾಷ್ಟ್ರ ಪೊಲೀಸ್ ಇಲಾಖೆ ಹನುಮಾನ ಚಾಲೀಸಾ ವಿವಾದದಲ್ಲಿ ಕೇಸು ದಾಖಲಿಸಿದ ಪರಿಣಾಮ ಕೌರ್ 14 ದಿನಗಳ ಕಾಲ ಮುಂಬೈಯ ಬೈಕುಲಾ ಜೈಲಿನಲ್ಲಿದ್ದರು. ಅವರು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು ಎನ್ನುವ ಆರೋಪ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಮಾನ್ಯ ನ್ಯಾಯಾಲಯ ನವನೀತ್ ಕೌರ್ ಗೆ ಎರಡು ಲಕ್ಷ ರೂಪಾಯಿ ದಂಡ ಕೂಡ ವಿಧಿಸಿತ್ತು. ನವನೀತ್ ಕೌರ್ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿಯ ಸಂಖ್ಯಾದೃಷ್ಟಿಯಿಂದ ಇದು ಮಹತ್ವದ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search