• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಳಿನ್ ಕುಮಾರ್ ಕಟೀಲ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್!

Tulunadu News Posted On March 28, 2024
0


0
Shares
  • Share On Facebook
  • Tweet It

ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಮುಖಂಡರು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ. ಕಟೀಲ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇರಳ ರಾಜ್ಯದ ಸಹಪ್ರಭಾರಿಯಾಗಿದ್ದಾರೆ.

ಈ ಬಾರಿ ಬಿಜೆಪಿಯಿಂದ ಕೇರಳದಲ್ಲಿ ಘಟಾನುಘಟಿ ನಾಯಕರು ಕಣಕ್ಕೆ ಇಳಿದಿದ್ದಾರೆ. ತ್ರಿಶೂರ್ ನಿಂದ ಖ್ಯಾತ ನಟ ಸುರೇಶ್ ಗೋಪಿ, ತಿರುವನಂತಪುರದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಅಟ್ಟಿಂಗಲ್ ನಿಂದ ವಿ. ಮುರಳೀಧರನ್ ಸ್ಪರ್ಧೆಯಲ್ಲಿದ್ದಾರೆ. 2019 ರಲ್ಲಿ ಬಿಜೆಪಿಯಿಂದ ಯಾರೂ ಗೆದ್ದಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರದ ಬಿಜೆಪಿ ಮುಖಂಡರು ಈ ಬಾರಿ ಕನಿಷ್ಟ ಮೂರರಿಂದ ನಾಲ್ಕು ಸ್ಥಾನಗಳನ್ನು ಜಯಿಸಲೇಬೇಕೆಂಬ ಪಣ ತೊಟ್ಟಿದ್ದಾರೆ. ಈ ಮೂಲಕ ಕೇರಳದಲ್ಲಿ ಬಿಜೆಪಿಯ ಬಾವುಟ ಹಾರಿಸುವುದಕ್ಕೆ ಪಕ್ಷ ಸಜ್ಜಾಗಿದೆ. ಈ ಉಮ್ಮೇದಿನಲ್ಲಿ ಪಕ್ಷದ ಮುಖಂಡರು ರಣತಂತ್ರ ಹೆಣೆಯುತ್ತಿದ್ದಾರೆ.

ಕರ್ನಾಟಕದಲ್ಲಿ ನಾಲ್ಕೂವರೆ ವರ್ಷ ಪಕ್ಷದ ಅಧ್ಯಕ್ಷರಾಗಿದ್ದು, ಮೂರು ಬಾರಿ ಲೋಕಸಭಾ ಸದಸ್ಯರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ತಳಮಟ್ಟದಿಂದ ಪಕ್ಷದ ಸಂಘಟನೆಯನ್ನು ಮಾಡುವಲ್ಲಿ ನಿಸ್ಸೀಮರಾಗಿದ್ದಾರೆ. ಅವರ ಅನುಭವವನ್ನು ಕೇರಳ ಬಿಜೆಪಿ ಮುಖಂಡರು ಪಡೆಯಬೇಕೆಂಬ ಕಾರಣಕ್ಕೆ ಕೇಂದ್ರದ ನಾಯಕರು ಈ ಮಹತ್ವದ ಜವಾಬ್ದಾರಿಯನ್ನು ನಳಿನ್ ಅವರಿಗೆ ವಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search