• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣಾಚಲ ಪ್ರದೇಶದಲ್ಲಿ ಸಿಎಂ ಸೇರಿ ಐದು ಬಿಜೆಪಿ ಅಭ್ಯರ್ಥಿಗಳಿಗೆ ಎದುರಾಳಿಗಳೇ ಇಲ್ಲ!

Tulunadu News Posted On March 28, 2024
0


0
Shares
  • Share On Facebook
  • Tweet It

ರಾಷ್ಟ್ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಈ ಸಂದರ್ಭದಲ್ಲಿ ಅರುಣಾಚಲ ವಿಧಾನಸಭೆಗೂ ಮತದಾನ ನಡೆಯಲಿದೆ. ಒಟ್ಟು ಅರವತ್ತು ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಅರುಣಾಚಲ ಪ್ರದೇಶದಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್ 28 ಕೊನೆಯ ದಿನವಾಗಿತ್ತು. ಆವತ್ತು ಮುಖ್ಯಮಂತ್ರಿ ಪೆಮಾ ಖಂಡು ಅವರು ಪ್ರತಿನಿಧಿಸುವ ಮುಕ್ತೋ ವಿಧಾನಸಭಾ ಕ್ಷೇತ್ರವನ್ನು ಸೇರಿಸಿಕೊಂಡು ಸಾಗ್ಲಿ ವಿಧಾನಸಭಾ ಕ್ಷೇತ್ರ, ತಲಿಹಾ ವಿಧಾನಸಭಾ ಕ್ಷೇತ್ರ, ರೋಯಿಂಗ್ ವಿಧಾನಸಭಾ ಕ್ಷೇತ್ರ, ತಾಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿಗೆ ಯಾರೂ ಎದುರಾಳಿಗಳೇ ಇಲ್ಲ ಎನ್ನುವುದು ಸಾಬೀತಾಗಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿವಸ ಈ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಅಲ್ಲಿ ಹಾಲಿ ಸಿಎಂ ಸಹಿತ ಐದು ಜನ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ.

ಈ ಬಗ್ಗೆ ಏಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜ್ಜು ಅವರು ಅರುಣಾಚಲ ಪ್ರದೇಶ ದೇಶದ ಚುನಾವಣೆಯ ದಿಕ್ಸೂಚಿಯಾಗಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನವೂ ಮುಖ್ಯಮಂತ್ರಿಯವರ ಕ್ಷೇತ್ರವೂ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ವಿಪಕ್ಷಗಳೂ ಕೂಡ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿಲ್ಲ ಎನ್ನುವುದರ ಅರ್ಥ ಏನು ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳು ಜನರ ಮನಸ್ಸಿಗೆ ತಲುಪಿರುವುದರಿಂದ ವಿಪಕ್ಷಗಳಿಗೆ ಹಿಮಾಚಲ ಪ್ರದೇಶದಲ್ಲಿ ನೆಲೆ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಏಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಬರೆದಿರುವ ಬಿಜೆಪಿ ಮುಖಂಡ ಅಶೋಕ್ ಸಿಂಘಾಲ್ ಅವರು ಅಭಿವೃದ್ಧಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಈಶಾನ್ಯ ರಾಷ್ಟ್ರಗಳನ್ನು ಪ್ರಥಮ ಆದ್ಯತೆಯಾಗಿ ತೆಗೆದುಕೊಂಡಿದ್ದಾರೆ. ಅರುಣಾಚಲ ಪ್ರದೇಶದ ಫಲಿತಾಂಶ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುತ್ತಿರುವುದರ ಮುನ್ನುಡಿ ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search