• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣಾಚಲ ಪ್ರದೇಶದಲ್ಲಿ ಸಿಎಂ ಸೇರಿ ಐದು ಬಿಜೆಪಿ ಅಭ್ಯರ್ಥಿಗಳಿಗೆ ಎದುರಾಳಿಗಳೇ ಇಲ್ಲ!

Tulunadu News Posted On March 28, 2024
0


0
Shares
  • Share On Facebook
  • Tweet It

ರಾಷ್ಟ್ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಈ ಸಂದರ್ಭದಲ್ಲಿ ಅರುಣಾಚಲ ವಿಧಾನಸಭೆಗೂ ಮತದಾನ ನಡೆಯಲಿದೆ. ಒಟ್ಟು ಅರವತ್ತು ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಅರುಣಾಚಲ ಪ್ರದೇಶದಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್ 28 ಕೊನೆಯ ದಿನವಾಗಿತ್ತು. ಆವತ್ತು ಮುಖ್ಯಮಂತ್ರಿ ಪೆಮಾ ಖಂಡು ಅವರು ಪ್ರತಿನಿಧಿಸುವ ಮುಕ್ತೋ ವಿಧಾನಸಭಾ ಕ್ಷೇತ್ರವನ್ನು ಸೇರಿಸಿಕೊಂಡು ಸಾಗ್ಲಿ ವಿಧಾನಸಭಾ ಕ್ಷೇತ್ರ, ತಲಿಹಾ ವಿಧಾನಸಭಾ ಕ್ಷೇತ್ರ, ರೋಯಿಂಗ್ ವಿಧಾನಸಭಾ ಕ್ಷೇತ್ರ, ತಾಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿಗೆ ಯಾರೂ ಎದುರಾಳಿಗಳೇ ಇಲ್ಲ ಎನ್ನುವುದು ಸಾಬೀತಾಗಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿವಸ ಈ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಅಲ್ಲಿ ಹಾಲಿ ಸಿಎಂ ಸಹಿತ ಐದು ಜನ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ.

ಈ ಬಗ್ಗೆ ಏಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜ್ಜು ಅವರು ಅರುಣಾಚಲ ಪ್ರದೇಶ ದೇಶದ ಚುನಾವಣೆಯ ದಿಕ್ಸೂಚಿಯಾಗಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನವೂ ಮುಖ್ಯಮಂತ್ರಿಯವರ ಕ್ಷೇತ್ರವೂ ಸೇರಿದಂತೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ವಿಪಕ್ಷಗಳೂ ಕೂಡ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿಲ್ಲ ಎನ್ನುವುದರ ಅರ್ಥ ಏನು ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳು ಜನರ ಮನಸ್ಸಿಗೆ ತಲುಪಿರುವುದರಿಂದ ವಿಪಕ್ಷಗಳಿಗೆ ಹಿಮಾಚಲ ಪ್ರದೇಶದಲ್ಲಿ ನೆಲೆ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಏಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಬರೆದಿರುವ ಬಿಜೆಪಿ ಮುಖಂಡ ಅಶೋಕ್ ಸಿಂಘಾಲ್ ಅವರು ಅಭಿವೃದ್ಧಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಈಶಾನ್ಯ ರಾಷ್ಟ್ರಗಳನ್ನು ಪ್ರಥಮ ಆದ್ಯತೆಯಾಗಿ ತೆಗೆದುಕೊಂಡಿದ್ದಾರೆ. ಅರುಣಾಚಲ ಪ್ರದೇಶದ ಫಲಿತಾಂಶ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುತ್ತಿರುವುದರ ಮುನ್ನುಡಿ ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search