• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮನೆ ಗೇಟ್ ಬಳಿ ಅರ್ಧ ಗಂಟೆ ಕಾದರೂ ಹೆಗ್ಡೆ ಡೋಂಟ್ ಕೇರ್!

Tulunadu News Posted On March 28, 2024
0


0
Shares
  • Share On Facebook
  • Tweet It

ಪಕ್ಷದ ಸಭೆಯಲ್ಲಿ ಕುರ್ಚಿಯೊಂದನ್ನು ಟೇಬಲ್ ಮೇಲಿಟ್ಟು ಧಮ್ ಇದ್ದವರು ಬಂದು ಕುಳಿತುಕೊಳ್ಳಿ ಎಂದು ಸವಾಲೆಸೆದು ಸುದ್ದಿಯಾಗಿದ್ದ ಉತ್ತರ ಕನ್ನಡ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗ್ಡೆ ಪಕ್ಷದಿಂದ ಟಿಕೆಟ್ ನಿರಾಕರಿಸಲ್ಪಟ್ಟ ನಂತರ ಈಗ ಮೌನಕ್ಕೆ ಶರಣಾಗಿದ್ದಾರೆ. ಅವರ ಮೌನ ಅಲ್ಲಿನ ಹಾಲಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರ ನಿದ್ರೆಯನ್ನೇ ಕಸಿದುಬಿಟ್ಟಿದೆ. ಅವರು ಸಂಸದ ಅನಂತ ಕುಮಾರ್ ಹೆಗ್ಡೆಯವರ ಮನೆಗೆ ಹೋಗಿ ಅವರನ್ನು ಮಾತನಾಡಿಸಿ ಬರೋಣ ಎಂದು ಅಂದುಕೊಂಡಿದ್ದರು. ಆದರೆ ಹೆಗ್ಡೆ ಮನೆಯ ಹೊರಗಿನಿಂದಲೇ ಅರ್ಧ ಗಂಟೆ ಕಾದು ಬಂದ ದಾರಿಗೆ ಸುಂಕವಿಲ್ಲದೇ ಹಿಂತಿರುಗಿ ಬರಬೇಕಾಯಿತು. ಹಾಲಿ ಸಂಸದರ ಬೆಂಬಲವಿಲ್ಲದೇ ತಾವು ದಡ ಸೇರುವುದು ಹೇಗೆ ಎನ್ನುವುದು ಕಾಗೇರಿಯವರಿಗೆ ಈಗ ಚಿಂತೆಯಾಗಿದೆ.

ಅನಂತ ಕುಮಾರ್ ಹೆಗ್ಡೆಯವರು ಕಾಗೇರಿಯವರನ್ನು ಬೆಂಬಲಿಸದೇ ಹೋದರೆ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಅಷ್ಟು ಸುಲಭವಲ್ಲ. ಅದು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ರಚನೆಯಾಗಿದೆ. ಒಟ್ಟು ಈ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರು ಈಗಾಗಲೇ ಬಿಜೆಪಿಯಿಂದ ಎರಡೂ ಕಾಲುಗಳನ್ನು ಹೊರಗೆ ಇಟ್ಟಾಗಿದೆ. ಇನ್ನು ಕುಮಟಾದಿಂದ ದಿನಕರ ಶೆಟ್ಟಿ ಬಿಜೆಪಿಯಿಂದ ಗೆದ್ದಿದ್ದರೂ ಗೆದ್ದ ಅಂತರ ಕೇವಲ 676 ಮತಗಳು. ಇನ್ನು ಖಾನಾಪುರದಿಂದ ವಿಠಲ ಹಲಗೇಕರ್ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರೂ ಅವರ ವಿರುದ್ಧ ಸೋತಿದ್ದ ಅಂಜಲಿ ನಿಂಬಾಳ್ಕರ್ ಈ ಬಾರಿ ಕಾಂಗ್ರೆಸ್ಸಿನಿಂದ ಲೋಕಸಭೆಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಅವರು ಅಲ್ಲಿ 2018 ರಲ್ಲಿ ಶಾಸಕಿಯಾಗಿದ್ದರು.

ಒಟ್ಟಿನಲ್ಲಿ ಎಲ್ಲಾ ಕಡೆ ರಾಜಕೀಯ ಲೆಕ್ಕಾಚಾರಗಳನ್ನು ನೋಡುವಾಗ ಕಾಗೇರಿಯವರಿಗೆ ಗೆಲುವು ಅಷ್ಟು ಸುಲಭವಿಲ್ಲ ಎಂದು ಮೇಲ್ನೋಟಕ್ಕೆ ಅನಿಸುತ್ತದೆ. ಜನರು ಕಣ್ಣುಮುಚ್ಚಿ ನರೇಂದ್ರ ಮೋದಿಯವರಿಗೆ ಮತ ಹಾಕುತ್ತಾರೆ ಎಂದಾದರೆ ಕಾಗೇರಿಯವರು ಹೆದರಬೇಕಾಗಿಲ್ಲ. ಆದರೆ ಕಳೆದ ಏಳು ಬಾರಿ ಸ್ಪರ್ಧಿಸಿ ಆರು ಬಾರಿ ಗೆದ್ದಿದ್ದ ಅನಂತಕುಮಾರ್ ಹೆಗ್ಡೆಯವರನ್ನು ನೋಡಿ ಜನ ಮತ ಚಲಾಯಿಸುತ್ತಾರೆ ಎಂದಾದರೆ ಕಾಗೇರಿ ಇನ್ನಷ್ಟು ಬೆವರು ಸುರಿಸಬೇಕಾದಿತೇನೋ

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 3
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search