• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮನೆ ಗೇಟ್ ಬಳಿ ಅರ್ಧ ಗಂಟೆ ಕಾದರೂ ಹೆಗ್ಡೆ ಡೋಂಟ್ ಕೇರ್!

Tulunadu News Posted On March 28, 2024
0


0
Shares
  • Share On Facebook
  • Tweet It

ಪಕ್ಷದ ಸಭೆಯಲ್ಲಿ ಕುರ್ಚಿಯೊಂದನ್ನು ಟೇಬಲ್ ಮೇಲಿಟ್ಟು ಧಮ್ ಇದ್ದವರು ಬಂದು ಕುಳಿತುಕೊಳ್ಳಿ ಎಂದು ಸವಾಲೆಸೆದು ಸುದ್ದಿಯಾಗಿದ್ದ ಉತ್ತರ ಕನ್ನಡ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗ್ಡೆ ಪಕ್ಷದಿಂದ ಟಿಕೆಟ್ ನಿರಾಕರಿಸಲ್ಪಟ್ಟ ನಂತರ ಈಗ ಮೌನಕ್ಕೆ ಶರಣಾಗಿದ್ದಾರೆ. ಅವರ ಮೌನ ಅಲ್ಲಿನ ಹಾಲಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರ ನಿದ್ರೆಯನ್ನೇ ಕಸಿದುಬಿಟ್ಟಿದೆ. ಅವರು ಸಂಸದ ಅನಂತ ಕುಮಾರ್ ಹೆಗ್ಡೆಯವರ ಮನೆಗೆ ಹೋಗಿ ಅವರನ್ನು ಮಾತನಾಡಿಸಿ ಬರೋಣ ಎಂದು ಅಂದುಕೊಂಡಿದ್ದರು. ಆದರೆ ಹೆಗ್ಡೆ ಮನೆಯ ಹೊರಗಿನಿಂದಲೇ ಅರ್ಧ ಗಂಟೆ ಕಾದು ಬಂದ ದಾರಿಗೆ ಸುಂಕವಿಲ್ಲದೇ ಹಿಂತಿರುಗಿ ಬರಬೇಕಾಯಿತು. ಹಾಲಿ ಸಂಸದರ ಬೆಂಬಲವಿಲ್ಲದೇ ತಾವು ದಡ ಸೇರುವುದು ಹೇಗೆ ಎನ್ನುವುದು ಕಾಗೇರಿಯವರಿಗೆ ಈಗ ಚಿಂತೆಯಾಗಿದೆ.

ಅನಂತ ಕುಮಾರ್ ಹೆಗ್ಡೆಯವರು ಕಾಗೇರಿಯವರನ್ನು ಬೆಂಬಲಿಸದೇ ಹೋದರೆ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಅಷ್ಟು ಸುಲಭವಲ್ಲ. ಅದು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ರಚನೆಯಾಗಿದೆ. ಒಟ್ಟು ಈ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರು ಈಗಾಗಲೇ ಬಿಜೆಪಿಯಿಂದ ಎರಡೂ ಕಾಲುಗಳನ್ನು ಹೊರಗೆ ಇಟ್ಟಾಗಿದೆ. ಇನ್ನು ಕುಮಟಾದಿಂದ ದಿನಕರ ಶೆಟ್ಟಿ ಬಿಜೆಪಿಯಿಂದ ಗೆದ್ದಿದ್ದರೂ ಗೆದ್ದ ಅಂತರ ಕೇವಲ 676 ಮತಗಳು. ಇನ್ನು ಖಾನಾಪುರದಿಂದ ವಿಠಲ ಹಲಗೇಕರ್ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರೂ ಅವರ ವಿರುದ್ಧ ಸೋತಿದ್ದ ಅಂಜಲಿ ನಿಂಬಾಳ್ಕರ್ ಈ ಬಾರಿ ಕಾಂಗ್ರೆಸ್ಸಿನಿಂದ ಲೋಕಸಭೆಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಅವರು ಅಲ್ಲಿ 2018 ರಲ್ಲಿ ಶಾಸಕಿಯಾಗಿದ್ದರು.

ಒಟ್ಟಿನಲ್ಲಿ ಎಲ್ಲಾ ಕಡೆ ರಾಜಕೀಯ ಲೆಕ್ಕಾಚಾರಗಳನ್ನು ನೋಡುವಾಗ ಕಾಗೇರಿಯವರಿಗೆ ಗೆಲುವು ಅಷ್ಟು ಸುಲಭವಿಲ್ಲ ಎಂದು ಮೇಲ್ನೋಟಕ್ಕೆ ಅನಿಸುತ್ತದೆ. ಜನರು ಕಣ್ಣುಮುಚ್ಚಿ ನರೇಂದ್ರ ಮೋದಿಯವರಿಗೆ ಮತ ಹಾಕುತ್ತಾರೆ ಎಂದಾದರೆ ಕಾಗೇರಿಯವರು ಹೆದರಬೇಕಾಗಿಲ್ಲ. ಆದರೆ ಕಳೆದ ಏಳು ಬಾರಿ ಸ್ಪರ್ಧಿಸಿ ಆರು ಬಾರಿ ಗೆದ್ದಿದ್ದ ಅನಂತಕುಮಾರ್ ಹೆಗ್ಡೆಯವರನ್ನು ನೋಡಿ ಜನ ಮತ ಚಲಾಯಿಸುತ್ತಾರೆ ಎಂದಾದರೆ ಕಾಗೇರಿ ಇನ್ನಷ್ಟು ಬೆವರು ಸುರಿಸಬೇಕಾದಿತೇನೋ

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search