• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದ ಮಾರ್ತಾಂಡ ದೇಗುಲಕ್ಕೆ ಹೊಸ ಕಾಯಕಲ್ಪ ಎಂದ ಶಾ!

Tulunadu News Posted On March 30, 2024


  • Share On Facebook
  • Tweet It

ಕಾಶ್ಮೀರದ ಅನಂತನಾಗ ಜಿಲ್ಲೆಯಲ್ಲಿರುವ ಮಾರ್ತಾಂಡ ದೇವಸ್ಥಾನವನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಎಂಟನೇ ಶತಮಾನದಲ್ಲಿ ಲಲಿತಾದಿತ್ಯ ಮುಕ್ತಾಪೀಡಾ ನಿರ್ಮಿಸಿದ ಬೃಹತ್ ದೇವಾಲಯಕ್ಕೆ ಮತ್ತೆ ಹೊಸ ವೈಭವ ಬರಲಿದೆ. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ಸಿಕಂದರ್ ಶಾ ಮಿರಿ ಎಂಬ ಅರಸ ನಾಶ ಮಾಡಿದ್ದ ಎನ್ನುವ ಉಲ್ಲೇಖ ಇತಿಹಾಸದಲ್ಲಿ ದೊರಕುತ್ತದೆ. ಆಗ ಈ ದೇವಾಲಯದ ಕಟ್ಟಡಗಳ ನಡುವೆ ಬೃಹತ್ ಮರದ ದಿಂಬಿಗಳನ್ನು ಇಟ್ಟು ಬೆಂಕಿ ಹಚ್ಚಿ ಸುಟ್ಟು ಹಾಕಿದರು ಎಂದು ಇತಿಹಾಸಕಾರರು ಬಣ್ಣಿಸುತ್ತಾರೆ. ಆ ಬೆಂಕಿಯ ಜ್ವಾಲೆ ಹಲವು ವರ್ಷಗಳ ತನಕ ಉರಿದು ದೇವಾಲಯದ ಅವನತಿಗೆ ಕಾರಣವಾಯಿತು ಎಂದು ಹೇಳಲಾಗುತ್ತದೆ.

ಮಾರ್ತಾಂಡಾ ದೇವಸ್ಥಾನ ಯಾವ ರೀತಿ ಕಟ್ಟಲ್ಪಟ್ಟಿತ್ತು ಎಂದರೆ ದೇವಾಲಯದ ಪರಿಸರದಲ್ಲಿ ನಿಂತು ನೋಡಿದರೆ ಇಡೀ ಕಾಶ್ಮೀರದ ಸುಂದರ ವಾತಾವರಣ ನಮ್ಮ ಕಣ್ಣಿಗೆ ಬೀಳುತ್ತದೆ. ಈ ದೇವಸ್ಥಾನದ ವಾಸ್ತು ಮತ್ತು ಸೌಂದರ್ಯ ಹೇಗಿದೆ ಎಂದರೆ ಗಾಂಧಾರಣ್, ಗುಪ್ತಾ ಮತ್ತು ಚೈನೀಶ್ ಪರಂಪರೆಯನ್ನು ಮಿಶ್ರಣ ಮಾಡಿ ಇದನ್ನು ನಿರ್ಮಿಸಲಾಗಿದೆ. ಈ ದೇವಸ್ಥಾನವನ್ನು ನಮ್ಮ ದೇಶದ ಮೇಲೆ ದಾಳಿ ಮಾಡಿದ ಪರಕೀಯರು ನಾಶ ಮಾಡಿದರೂ ಅಲ್ಲಿ ಭೇಟಿ ನೀಡುವ ಪ್ರವಾಸಿಗರಿಗೆ ಅಲ್ಲಿನ ಗೈಡ್ ಗಳು ಬೇರೆಯದ್ದೇ ಉತ್ತರ ಹೇಳುತ್ತಾರೆ. ಕೆಲವರು ಹಿಮಪಾತದಿಂದ ನಾಶವಾಯಿತು ಎಂದರೆ, ಇನ್ನು ಕೆಲವು ಗೈಡ್ ಗಳು ಭೂಕಂಪದಿಂದ ಅವನತಿ ಹೊಂದಿತು ಎನ್ನುತ್ತಾರೆ. ಕೆಲವರು ವಿಪರೀತ ನೆರೆಗೆ ದೇವಸ್ಥಾನ ಬಿದ್ದು ಹೋಯಿತು ಎನ್ನುತ್ತಾರೆ. ಆದರೆ ವಾಸ್ತವ ಹೆಚ್ಚಿನವರಿಗೆ ತಿಳಿದಿದೆ.

ಇಂತಹ ಇತಿಹಾಸ ಪ್ರಸಿದ್ಧ ದೇವಾಲಯವನ್ನು ಮತ್ತೆ ವೈಭವಕ್ಕೆ ತಂದು ಅಲ್ಲಿ ಅದರ ಮೂಲ ನಿರ್ಮಾತೃರಾದ ರಾಜಾ ಲಲಿತಾದಿತ್ಯ ಅವರ ಪುತ್ಥಳಿಯನ್ನು ನಿರ್ಮಿಸಿ ದೇವಸ್ಥಾನದ ಆವರಣದಲ್ಲಿ ನಿಲ್ಲಿಸಲು ಕೇಂದ್ರ ಸರಕಾರ ಮನಸ್ಸು ಮಾಡಿದೆ.

  • Share On Facebook
  • Tweet It


- Advertisement -


Trending Now
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
Tulunadu News May 19, 2025
Leave A Reply

  • Recent Posts

    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
  • Popular Posts

    • 1
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 2
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 3
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 4
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search