• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದ ಮಾರ್ತಾಂಡ ದೇಗುಲಕ್ಕೆ ಹೊಸ ಕಾಯಕಲ್ಪ ಎಂದ ಶಾ!

Tulunadu News Posted On March 30, 2024
0


0
Shares
  • Share On Facebook
  • Tweet It

ಕಾಶ್ಮೀರದ ಅನಂತನಾಗ ಜಿಲ್ಲೆಯಲ್ಲಿರುವ ಮಾರ್ತಾಂಡ ದೇವಸ್ಥಾನವನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಎಂಟನೇ ಶತಮಾನದಲ್ಲಿ ಲಲಿತಾದಿತ್ಯ ಮುಕ್ತಾಪೀಡಾ ನಿರ್ಮಿಸಿದ ಬೃಹತ್ ದೇವಾಲಯಕ್ಕೆ ಮತ್ತೆ ಹೊಸ ವೈಭವ ಬರಲಿದೆ. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ಸಿಕಂದರ್ ಶಾ ಮಿರಿ ಎಂಬ ಅರಸ ನಾಶ ಮಾಡಿದ್ದ ಎನ್ನುವ ಉಲ್ಲೇಖ ಇತಿಹಾಸದಲ್ಲಿ ದೊರಕುತ್ತದೆ. ಆಗ ಈ ದೇವಾಲಯದ ಕಟ್ಟಡಗಳ ನಡುವೆ ಬೃಹತ್ ಮರದ ದಿಂಬಿಗಳನ್ನು ಇಟ್ಟು ಬೆಂಕಿ ಹಚ್ಚಿ ಸುಟ್ಟು ಹಾಕಿದರು ಎಂದು ಇತಿಹಾಸಕಾರರು ಬಣ್ಣಿಸುತ್ತಾರೆ. ಆ ಬೆಂಕಿಯ ಜ್ವಾಲೆ ಹಲವು ವರ್ಷಗಳ ತನಕ ಉರಿದು ದೇವಾಲಯದ ಅವನತಿಗೆ ಕಾರಣವಾಯಿತು ಎಂದು ಹೇಳಲಾಗುತ್ತದೆ.

ಮಾರ್ತಾಂಡಾ ದೇವಸ್ಥಾನ ಯಾವ ರೀತಿ ಕಟ್ಟಲ್ಪಟ್ಟಿತ್ತು ಎಂದರೆ ದೇವಾಲಯದ ಪರಿಸರದಲ್ಲಿ ನಿಂತು ನೋಡಿದರೆ ಇಡೀ ಕಾಶ್ಮೀರದ ಸುಂದರ ವಾತಾವರಣ ನಮ್ಮ ಕಣ್ಣಿಗೆ ಬೀಳುತ್ತದೆ. ಈ ದೇವಸ್ಥಾನದ ವಾಸ್ತು ಮತ್ತು ಸೌಂದರ್ಯ ಹೇಗಿದೆ ಎಂದರೆ ಗಾಂಧಾರಣ್, ಗುಪ್ತಾ ಮತ್ತು ಚೈನೀಶ್ ಪರಂಪರೆಯನ್ನು ಮಿಶ್ರಣ ಮಾಡಿ ಇದನ್ನು ನಿರ್ಮಿಸಲಾಗಿದೆ. ಈ ದೇವಸ್ಥಾನವನ್ನು ನಮ್ಮ ದೇಶದ ಮೇಲೆ ದಾಳಿ ಮಾಡಿದ ಪರಕೀಯರು ನಾಶ ಮಾಡಿದರೂ ಅಲ್ಲಿ ಭೇಟಿ ನೀಡುವ ಪ್ರವಾಸಿಗರಿಗೆ ಅಲ್ಲಿನ ಗೈಡ್ ಗಳು ಬೇರೆಯದ್ದೇ ಉತ್ತರ ಹೇಳುತ್ತಾರೆ. ಕೆಲವರು ಹಿಮಪಾತದಿಂದ ನಾಶವಾಯಿತು ಎಂದರೆ, ಇನ್ನು ಕೆಲವು ಗೈಡ್ ಗಳು ಭೂಕಂಪದಿಂದ ಅವನತಿ ಹೊಂದಿತು ಎನ್ನುತ್ತಾರೆ. ಕೆಲವರು ವಿಪರೀತ ನೆರೆಗೆ ದೇವಸ್ಥಾನ ಬಿದ್ದು ಹೋಯಿತು ಎನ್ನುತ್ತಾರೆ. ಆದರೆ ವಾಸ್ತವ ಹೆಚ್ಚಿನವರಿಗೆ ತಿಳಿದಿದೆ.

ಇಂತಹ ಇತಿಹಾಸ ಪ್ರಸಿದ್ಧ ದೇವಾಲಯವನ್ನು ಮತ್ತೆ ವೈಭವಕ್ಕೆ ತಂದು ಅಲ್ಲಿ ಅದರ ಮೂಲ ನಿರ್ಮಾತೃರಾದ ರಾಜಾ ಲಲಿತಾದಿತ್ಯ ಅವರ ಪುತ್ಥಳಿಯನ್ನು ನಿರ್ಮಿಸಿ ದೇವಸ್ಥಾನದ ಆವರಣದಲ್ಲಿ ನಿಲ್ಲಿಸಲು ಕೇಂದ್ರ ಸರಕಾರ ಮನಸ್ಸು ಮಾಡಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search