• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆಯಾಗಿ ಸಾಂಸಾರಿಕ ಜೀವನದಲ್ಲಿ ಆಸಕ್ತಿ ಇಲ್ಲ, ಜನಸೇವೆ ಮಾಡಬೇಕು – ನಿಶಾ ಯೋಗೇಶ್ವರ್

Tulunadu News Posted On April 1, 2024
0


0
Shares
  • Share On Facebook
  • Tweet It

ನಿಶಾ ಯೋಗೇಶ್ವರ್ ಅವರಿಗೆ ಮದುವೆಯಾಗಿಲ್ಲ. ಅವರಿಗೆ ಅವರ ತಂದೆಯೇ ಧಾರೆ ಎರೆಯಬೇಕು. ರಾಜಕಾರಣಕ್ಕಾಗಿ ತಂದೆ ಮತ್ತು ಮಗಳನ್ನು ಬೇರೆ ಮಾಡುವ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿಕೆಗೆ ನಿಶಾ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ದೇಶದಲ್ಲಿ ಅನೇಕ ಮಹಿಳೆಯರು ಮದುವೆಯಾಗದೆಯೂ ದೇಶಸೇವೆ ಮಾಡಿದ್ದಾರೆ. ನಾನು ಕೂಡ ಅದೇ ದಾರಿಯಲ್ಲಿ ಸಾಗಲು ಬಯಸುತ್ತೇನೆ. ನನಗೆ ಮದುವೆ, ಸಾಂಸಾರಿಕ ಜೀವನದಲ್ಲಿ ಆಸಕ್ತಿ ಇಲ್ಲ. ಹೀಗೆನೆ ಇದ್ದು, ಜನರ ಸೇವೆ ಮಾಡಬೇಕೆಂಬ ಬಯಕೆ ಇದೆ ಎಂದು ತಿಳಿಸಿದ್ದಾರೆ.
ನಿಶಾ ಅವರ ತಂದೆ ಯೋಗೇಶ್ವರ್ ಅವರು ಸದ್ಯ ಭಾರತೀಯ ಜನತಾ ಪಾರ್ಟಿಯ ವಿಧಾನಪರಿಷತ್ ಸದಸ್ಯರಾಗಿದ್ದು, ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಅವರ ಗೆಲುವಿಗೆ ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ದು ಕೇಂದ್ರಕ್ಕೆ ಹೋದರೆ ಅವರು ಹಾಲಿ ಪ್ರತಿನಿಧಿಸುತ್ತಿರುವ ಚೆನ್ನಪಟ್ಟಣಕ್ಕೆ ಉಪಚುನಾವಣೆ ನಡೆಯಬೇಕಾಗಿದೆ. ಅಂತಹ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ಯೋಗೇಶ್ವರ್ ಅವರಿಗೆ ಟಿಕೆಟ್ ಕೊಟ್ಟರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಯೋಗೇಶ್ವರ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇದೆ.

ಹೀಗಿರುವಾಗ ತಂದೆಯ ವಿರುದ್ಧ ಮಗಳನ್ನು ಕಾಂಗ್ರೆಸ್ ಕಣಕ್ಕೆ ಇಳಿಸುತ್ತಾ ಎನ್ನುವುದು ಸದ್ಯದ ಲೆಕ್ಕಾಚಾರ. ಆದರೆ ಅದು ತುಂಬಾ ದೂರದ ವಿಷಯ ಎನ್ನುವುದು ನಿಶಾ ಅವರಿಗೂ ಗೊತ್ತಿದೆ. ಅವರು ಸದ್ಯ ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ ಮತ್ತು ಪ್ರಚಾರ ಕೂಡ ಮಾಡುತ್ತಿಲ್ಲ. ಆದರೆ ಅವರನ್ನು ಕಾಂಗ್ರೆಸ್ಸಿಗೆ ಸೇರಿಸಲು ಕಾಂಗ್ರೆಸ್ ಮುಖಂಡರು ಲೋಕಸಭಾ ಚುನಾವಣೆ ತನಕ ಕಾಯುವ ನಿರ್ಧಾರ ಮಾಡಿದಂತಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search