• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಸುಮಲತಾ ಆಪ್ತ!

Tulunadu News Posted On April 1, 2024
0


0
Shares
  • Share On Facebook
  • Tweet It

ಎಪ್ರಿಲ್ 3 ರಂದು ಮಂಡ್ಯದಲ್ಲಿ ಅಭಿಮಾನಿಗಳ, ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದ ಸಂಸದೆ ಸುಮಲತಾ ಅವರು ಕಳೆದ ಬಾರಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಇಂಡವಾಳು ಸಚ್ಚಿದಾನಂದ ಮೈತ್ರಿ ಅಭ್ಯರ್ಥಿ ಪರ ಈಗಾಗಲೇ ಪ್ರಚಾರಕ್ಕೆ ಇಳಿದಿದ್ದಾರೆ. ಈ ಬಾರಿಯೂ ಸುಮಲತಾ ಪಕ್ಷೇತರವಾಗಿ ಚುನಾವಣೆಗೆ ನಿಂತರೆ ಸಚ್ಚಿದಾನಂದ ಅವರು ಸುಮಲತಾ ಬೆನ್ನಿಗೆ ನಿಲ್ಲುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚ್ಚಿದಾನಂದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ವಿರುದ್ಧ ಸಚ್ಚಿದಾನಂದ ಅವರು ಮಾತನಾಡುವುದರಿಂದ ಸುಮಲತಾ ಅವರಿಗೆ ಏನೂ ಬೇಸರ ಇಲ್ಲ. ಆದರೆ ಮಾತನಾಡಿದ ವೇದಿಕೆ ಮಾತ್ರ ಜೆಡಿಎಸ್ ಹಾಗೂ ಭಾರತೀಯ ಜನತಾ ಪಾರ್ಟಿ ಮೈತ್ರಿ ಕೂಟದಿಂದ ಮಾಡಿದ ಸಭೆ ಅದಾಗಿತ್ತು. ಒಂದು ವೇಳೆ ಸುಮಲತಾ ಅವರು ಸ್ಪರ್ಧಿಸದೇ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದರೆ ಆಗ ಸಚ್ಚಿದಾನಂದ ಅವರು ಮೈತ್ರಿಕೂಟದ ಅಭ್ಯರ್ಥಿಯ ಪರವಾಗಿ ಪ್ರಚಾರ ಮುಂದುವರೆಸಿದರೆ ಯಾವುದೇ ಗೊಂದಲ ಆಗುವುದಿಲ್ಲ.

ಅದೇ ಸುಮಲತಾ ಸ್ವಾಭಿಮಾನದ ಪ್ರಶ್ನೆಯನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಆಗ ಸಚ್ಚಿದಾನಂದ ಇವರ ವಿರುದ್ಧ ಪ್ರಚಾರ ಮಾಡಿದರೆ ಸುಮಲತಾ ಅವರ ಗೆಲುವು ಕಷ್ಟವಾಗಬಹುದು. ಇನ್ನು ಸುಮಲತಾ ತಾವು ಗೆದ್ದರೂ , ಸೋತರೂ ಮಂಡ್ಯದಲ್ಲಿಯೇ ಎಂದು ಹೇಳಿರುವುದರಿಂದ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಗೆದ್ರೆ ಸಂಸತ್ತಿಗೆ, ಸೋತರೆ ಜನ ಆರ್ಶೀವದಿಸಲಿಲ್ಲ, ಅದಕ್ಕೆ ಸೋತೆ ಎಂದು ರಾಜಕೀಯದಿಂದ ದೂರಸರಿಯಲೂಬಹುದು. ಒಟ್ಟಿನಲ್ಲಿ ಎರಡು ದಿನದಲ್ಲಿ ಮಂಡ್ಯ ರಾಜಕೀಯದ ಸ್ಪಷ್ಟ ಚಿತ್ರಣ ಸಿಗಲಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search