• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಸುಮಲತಾ ಆಪ್ತ!

Tulunadu News Posted On April 1, 2024
0


0
Shares
  • Share On Facebook
  • Tweet It

ಎಪ್ರಿಲ್ 3 ರಂದು ಮಂಡ್ಯದಲ್ಲಿ ಅಭಿಮಾನಿಗಳ, ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದ ಸಂಸದೆ ಸುಮಲತಾ ಅವರು ಕಳೆದ ಬಾರಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಇಂಡವಾಳು ಸಚ್ಚಿದಾನಂದ ಮೈತ್ರಿ ಅಭ್ಯರ್ಥಿ ಪರ ಈಗಾಗಲೇ ಪ್ರಚಾರಕ್ಕೆ ಇಳಿದಿದ್ದಾರೆ. ಈ ಬಾರಿಯೂ ಸುಮಲತಾ ಪಕ್ಷೇತರವಾಗಿ ಚುನಾವಣೆಗೆ ನಿಂತರೆ ಸಚ್ಚಿದಾನಂದ ಅವರು ಸುಮಲತಾ ಬೆನ್ನಿಗೆ ನಿಲ್ಲುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚ್ಚಿದಾನಂದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ವಿರುದ್ಧ ಸಚ್ಚಿದಾನಂದ ಅವರು ಮಾತನಾಡುವುದರಿಂದ ಸುಮಲತಾ ಅವರಿಗೆ ಏನೂ ಬೇಸರ ಇಲ್ಲ. ಆದರೆ ಮಾತನಾಡಿದ ವೇದಿಕೆ ಮಾತ್ರ ಜೆಡಿಎಸ್ ಹಾಗೂ ಭಾರತೀಯ ಜನತಾ ಪಾರ್ಟಿ ಮೈತ್ರಿ ಕೂಟದಿಂದ ಮಾಡಿದ ಸಭೆ ಅದಾಗಿತ್ತು. ಒಂದು ವೇಳೆ ಸುಮಲತಾ ಅವರು ಸ್ಪರ್ಧಿಸದೇ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದರೆ ಆಗ ಸಚ್ಚಿದಾನಂದ ಅವರು ಮೈತ್ರಿಕೂಟದ ಅಭ್ಯರ್ಥಿಯ ಪರವಾಗಿ ಪ್ರಚಾರ ಮುಂದುವರೆಸಿದರೆ ಯಾವುದೇ ಗೊಂದಲ ಆಗುವುದಿಲ್ಲ.

ಅದೇ ಸುಮಲತಾ ಸ್ವಾಭಿಮಾನದ ಪ್ರಶ್ನೆಯನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಆಗ ಸಚ್ಚಿದಾನಂದ ಇವರ ವಿರುದ್ಧ ಪ್ರಚಾರ ಮಾಡಿದರೆ ಸುಮಲತಾ ಅವರ ಗೆಲುವು ಕಷ್ಟವಾಗಬಹುದು. ಇನ್ನು ಸುಮಲತಾ ತಾವು ಗೆದ್ದರೂ , ಸೋತರೂ ಮಂಡ್ಯದಲ್ಲಿಯೇ ಎಂದು ಹೇಳಿರುವುದರಿಂದ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಗೆದ್ರೆ ಸಂಸತ್ತಿಗೆ, ಸೋತರೆ ಜನ ಆರ್ಶೀವದಿಸಲಿಲ್ಲ, ಅದಕ್ಕೆ ಸೋತೆ ಎಂದು ರಾಜಕೀಯದಿಂದ ದೂರಸರಿಯಲೂಬಹುದು. ಒಟ್ಟಿನಲ್ಲಿ ಎರಡು ದಿನದಲ್ಲಿ ಮಂಡ್ಯ ರಾಜಕೀಯದ ಸ್ಪಷ್ಟ ಚಿತ್ರಣ ಸಿಗಲಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search