• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಸುಮಲತಾ ಆಪ್ತ!

Tulunadu News Posted On April 1, 2024
0


0
Shares
  • Share On Facebook
  • Tweet It

ಎಪ್ರಿಲ್ 3 ರಂದು ಮಂಡ್ಯದಲ್ಲಿ ಅಭಿಮಾನಿಗಳ, ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದ ಸಂಸದೆ ಸುಮಲತಾ ಅವರು ಕಳೆದ ಬಾರಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಇಂಡವಾಳು ಸಚ್ಚಿದಾನಂದ ಮೈತ್ರಿ ಅಭ್ಯರ್ಥಿ ಪರ ಈಗಾಗಲೇ ಪ್ರಚಾರಕ್ಕೆ ಇಳಿದಿದ್ದಾರೆ. ಈ ಬಾರಿಯೂ ಸುಮಲತಾ ಪಕ್ಷೇತರವಾಗಿ ಚುನಾವಣೆಗೆ ನಿಂತರೆ ಸಚ್ಚಿದಾನಂದ ಅವರು ಸುಮಲತಾ ಬೆನ್ನಿಗೆ ನಿಲ್ಲುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚ್ಚಿದಾನಂದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ವಿರುದ್ಧ ಸಚ್ಚಿದಾನಂದ ಅವರು ಮಾತನಾಡುವುದರಿಂದ ಸುಮಲತಾ ಅವರಿಗೆ ಏನೂ ಬೇಸರ ಇಲ್ಲ. ಆದರೆ ಮಾತನಾಡಿದ ವೇದಿಕೆ ಮಾತ್ರ ಜೆಡಿಎಸ್ ಹಾಗೂ ಭಾರತೀಯ ಜನತಾ ಪಾರ್ಟಿ ಮೈತ್ರಿ ಕೂಟದಿಂದ ಮಾಡಿದ ಸಭೆ ಅದಾಗಿತ್ತು. ಒಂದು ವೇಳೆ ಸುಮಲತಾ ಅವರು ಸ್ಪರ್ಧಿಸದೇ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದರೆ ಆಗ ಸಚ್ಚಿದಾನಂದ ಅವರು ಮೈತ್ರಿಕೂಟದ ಅಭ್ಯರ್ಥಿಯ ಪರವಾಗಿ ಪ್ರಚಾರ ಮುಂದುವರೆಸಿದರೆ ಯಾವುದೇ ಗೊಂದಲ ಆಗುವುದಿಲ್ಲ.

ಅದೇ ಸುಮಲತಾ ಸ್ವಾಭಿಮಾನದ ಪ್ರಶ್ನೆಯನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಆಗ ಸಚ್ಚಿದಾನಂದ ಇವರ ವಿರುದ್ಧ ಪ್ರಚಾರ ಮಾಡಿದರೆ ಸುಮಲತಾ ಅವರ ಗೆಲುವು ಕಷ್ಟವಾಗಬಹುದು. ಇನ್ನು ಸುಮಲತಾ ತಾವು ಗೆದ್ದರೂ , ಸೋತರೂ ಮಂಡ್ಯದಲ್ಲಿಯೇ ಎಂದು ಹೇಳಿರುವುದರಿಂದ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಗೆದ್ರೆ ಸಂಸತ್ತಿಗೆ, ಸೋತರೆ ಜನ ಆರ್ಶೀವದಿಸಲಿಲ್ಲ, ಅದಕ್ಕೆ ಸೋತೆ ಎಂದು ರಾಜಕೀಯದಿಂದ ದೂರಸರಿಯಲೂಬಹುದು. ಒಟ್ಟಿನಲ್ಲಿ ಎರಡು ದಿನದಲ್ಲಿ ಮಂಡ್ಯ ರಾಜಕೀಯದ ಸ್ಪಷ್ಟ ಚಿತ್ರಣ ಸಿಗಲಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search