• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯದುವೀರ ಒಡೆಯರ್ ಬಳಿ ಕಾರು, ಸೈಟ್, ಭೂಮಿ ಏನಿಲ್ಲ!

Tulunadu News Posted On April 1, 2024
0


0
Shares
  • Share On Facebook
  • Tweet It

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಬಳಿ ಎಷ್ಟು ಆಸ್ತಿ ಇರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಮೈಸೂರಿನ ರಾಜರೆಂದರೆ ಸುಮ್ಮನೇನಾ? ಅವರ ವೈಭೋಗ ಕಡಿಮೆನಾ ಎಂದು ಜನರಿಗೆ ಅನಿಸದೇ ಇರದು. ಈಗ ಮೊದಲ ಬಾರಿ ಜನರಿಗೆ ರಾಜರ ಬಳಿ ಅಧಿಕೃತವಾಗಿರುವ ಸಂಪತ್ತಿನ ಪರಿಚಯ ಸಾರ್ವಜನಿಕವಾಗಿ ಆಗಿದೆ. ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ನಿಯಮಗಳ ಪ್ರಕಾರ ಅವರು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಬಳಿ ಸ್ವಂತ ಕಾರು, ಕೃಷಿ ಭೂಮಿ, ಸೈಟ್, ಮನೆ ಆಗಲಿ ಇಲ್ಲ ಎಂದು ಅಫಿಡಾವಿಟ್ ನಲ್ಲಿ ಬರೆದಿದ್ದಾರೆ.

ಯದುವೀರ್ ಒಡೆಯರ್ ಅವರ ಕೈಯಲ್ಲಿ ಸದ್ಯ ಒಂದು ಲಕ್ಷ ರೂ ನಗದು ಹಣ ಇದ್ದು, ವಿವಿಧ ಬ್ಯಾಂಕ್ ಅಕೌಂಟ್ ಗಳಲ್ಲಿ 1.36 ಕೋಟಿ ರೂ ಹಣ ಇದೆ. 3.25 ಕೋಟಿ ರೂ ಮೌಲ್ಯದ 4 ಕೆ.ಜಿ ಚಿನ್ನ, 14 ಲಕ್ಷ ರೂ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂ ಚರಾಸ್ತಿಯನ್ನು ಯದುವೀರ್ ಈ ವೇಳೆ ಘೋಷಿಸಿಕೊಂಡಿದ್ದಾರೆ.

ಅವರ ಪತ್ನಿ ರಾಜವಂಶ ಕುಲದಿಂದ ಬಂದಿರುವ ತ್ರಿಷಿಕಾ ಅವರ ಬಳಿ 75 ಸಾವಿರ ರೂ ನಗದು ಇದ್ದು, ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ 1 ಲಕ್ಷ ರೂ ಹೊಂದಿದ್ದಾರೆ. 90 ಲಕ್ಷ ರೂ ಮೌಲ್ಯದ 2 ಕೆಜಿ ಚಿನ್ನ, 5.5 ಲಕ್ಷ ರೂ ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿಗಳಿದ್ದು, 7 ಲಕ್ಷ ರೂ ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 1.04 ಕೋಟಿ ರೂ ಮೌಲ್ಯದ ಚರಾಸ್ತಿಯನ್ನು ಘೋಷಿಸಿದ್ದಾರೆ.
ಯದುವೀರ್ ಅವರ ಅವಲಂಬಿತರ ಬಳಿ ಇರುವ ಆಸ್ತಿಪಾಸ್ತಿಯ ಮಾಹಿತಿ ಕೂಡ ಅಫಿದಾವಿತ್ ನಲ್ಲಿ ದಾಖಲಿಸಲಾಗಿದ್ದು, ಅವರ ಹೆಸರಲ್ಲಿ ಒಟ್ಟು 3.63 ಕೋಟಿ ರೂ ಚರಾಸ್ತಿ ಇದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search