• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯದುವೀರ ಒಡೆಯರ್ ಬಳಿ ಕಾರು, ಸೈಟ್, ಭೂಮಿ ಏನಿಲ್ಲ!

Tulunadu News Posted On April 1, 2024
0


0
Shares
  • Share On Facebook
  • Tweet It

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಬಳಿ ಎಷ್ಟು ಆಸ್ತಿ ಇರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಮೈಸೂರಿನ ರಾಜರೆಂದರೆ ಸುಮ್ಮನೇನಾ? ಅವರ ವೈಭೋಗ ಕಡಿಮೆನಾ ಎಂದು ಜನರಿಗೆ ಅನಿಸದೇ ಇರದು. ಈಗ ಮೊದಲ ಬಾರಿ ಜನರಿಗೆ ರಾಜರ ಬಳಿ ಅಧಿಕೃತವಾಗಿರುವ ಸಂಪತ್ತಿನ ಪರಿಚಯ ಸಾರ್ವಜನಿಕವಾಗಿ ಆಗಿದೆ. ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ನಿಯಮಗಳ ಪ್ರಕಾರ ಅವರು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಬಳಿ ಸ್ವಂತ ಕಾರು, ಕೃಷಿ ಭೂಮಿ, ಸೈಟ್, ಮನೆ ಆಗಲಿ ಇಲ್ಲ ಎಂದು ಅಫಿಡಾವಿಟ್ ನಲ್ಲಿ ಬರೆದಿದ್ದಾರೆ.

ಯದುವೀರ್ ಒಡೆಯರ್ ಅವರ ಕೈಯಲ್ಲಿ ಸದ್ಯ ಒಂದು ಲಕ್ಷ ರೂ ನಗದು ಹಣ ಇದ್ದು, ವಿವಿಧ ಬ್ಯಾಂಕ್ ಅಕೌಂಟ್ ಗಳಲ್ಲಿ 1.36 ಕೋಟಿ ರೂ ಹಣ ಇದೆ. 3.25 ಕೋಟಿ ರೂ ಮೌಲ್ಯದ 4 ಕೆ.ಜಿ ಚಿನ್ನ, 14 ಲಕ್ಷ ರೂ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂ ಚರಾಸ್ತಿಯನ್ನು ಯದುವೀರ್ ಈ ವೇಳೆ ಘೋಷಿಸಿಕೊಂಡಿದ್ದಾರೆ.

ಅವರ ಪತ್ನಿ ರಾಜವಂಶ ಕುಲದಿಂದ ಬಂದಿರುವ ತ್ರಿಷಿಕಾ ಅವರ ಬಳಿ 75 ಸಾವಿರ ರೂ ನಗದು ಇದ್ದು, ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ 1 ಲಕ್ಷ ರೂ ಹೊಂದಿದ್ದಾರೆ. 90 ಲಕ್ಷ ರೂ ಮೌಲ್ಯದ 2 ಕೆಜಿ ಚಿನ್ನ, 5.5 ಲಕ್ಷ ರೂ ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿಗಳಿದ್ದು, 7 ಲಕ್ಷ ರೂ ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 1.04 ಕೋಟಿ ರೂ ಮೌಲ್ಯದ ಚರಾಸ್ತಿಯನ್ನು ಘೋಷಿಸಿದ್ದಾರೆ.
ಯದುವೀರ್ ಅವರ ಅವಲಂಬಿತರ ಬಳಿ ಇರುವ ಆಸ್ತಿಪಾಸ್ತಿಯ ಮಾಹಿತಿ ಕೂಡ ಅಫಿದಾವಿತ್ ನಲ್ಲಿ ದಾಖಲಿಸಲಾಗಿದ್ದು, ಅವರ ಹೆಸರಲ್ಲಿ ಒಟ್ಟು 3.63 ಕೋಟಿ ರೂ ಚರಾಸ್ತಿ ಇದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search