• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯದುವೀರ ಒಡೆಯರ್ ಬಳಿ ಕಾರು, ಸೈಟ್, ಭೂಮಿ ಏನಿಲ್ಲ!

Tulunadu News Posted On April 1, 2024
0


0
Shares
  • Share On Facebook
  • Tweet It

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಬಳಿ ಎಷ್ಟು ಆಸ್ತಿ ಇರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಮೈಸೂರಿನ ರಾಜರೆಂದರೆ ಸುಮ್ಮನೇನಾ? ಅವರ ವೈಭೋಗ ಕಡಿಮೆನಾ ಎಂದು ಜನರಿಗೆ ಅನಿಸದೇ ಇರದು. ಈಗ ಮೊದಲ ಬಾರಿ ಜನರಿಗೆ ರಾಜರ ಬಳಿ ಅಧಿಕೃತವಾಗಿರುವ ಸಂಪತ್ತಿನ ಪರಿಚಯ ಸಾರ್ವಜನಿಕವಾಗಿ ಆಗಿದೆ. ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ನಿಯಮಗಳ ಪ್ರಕಾರ ಅವರು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಬಳಿ ಸ್ವಂತ ಕಾರು, ಕೃಷಿ ಭೂಮಿ, ಸೈಟ್, ಮನೆ ಆಗಲಿ ಇಲ್ಲ ಎಂದು ಅಫಿಡಾವಿಟ್ ನಲ್ಲಿ ಬರೆದಿದ್ದಾರೆ.

ಯದುವೀರ್ ಒಡೆಯರ್ ಅವರ ಕೈಯಲ್ಲಿ ಸದ್ಯ ಒಂದು ಲಕ್ಷ ರೂ ನಗದು ಹಣ ಇದ್ದು, ವಿವಿಧ ಬ್ಯಾಂಕ್ ಅಕೌಂಟ್ ಗಳಲ್ಲಿ 1.36 ಕೋಟಿ ರೂ ಹಣ ಇದೆ. 3.25 ಕೋಟಿ ರೂ ಮೌಲ್ಯದ 4 ಕೆ.ಜಿ ಚಿನ್ನ, 14 ಲಕ್ಷ ರೂ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂ ಚರಾಸ್ತಿಯನ್ನು ಯದುವೀರ್ ಈ ವೇಳೆ ಘೋಷಿಸಿಕೊಂಡಿದ್ದಾರೆ.

ಅವರ ಪತ್ನಿ ರಾಜವಂಶ ಕುಲದಿಂದ ಬಂದಿರುವ ತ್ರಿಷಿಕಾ ಅವರ ಬಳಿ 75 ಸಾವಿರ ರೂ ನಗದು ಇದ್ದು, ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ 1 ಲಕ್ಷ ರೂ ಹೊಂದಿದ್ದಾರೆ. 90 ಲಕ್ಷ ರೂ ಮೌಲ್ಯದ 2 ಕೆಜಿ ಚಿನ್ನ, 5.5 ಲಕ್ಷ ರೂ ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿಗಳಿದ್ದು, 7 ಲಕ್ಷ ರೂ ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 1.04 ಕೋಟಿ ರೂ ಮೌಲ್ಯದ ಚರಾಸ್ತಿಯನ್ನು ಘೋಷಿಸಿದ್ದಾರೆ.
ಯದುವೀರ್ ಅವರ ಅವಲಂಬಿತರ ಬಳಿ ಇರುವ ಆಸ್ತಿಪಾಸ್ತಿಯ ಮಾಹಿತಿ ಕೂಡ ಅಫಿದಾವಿತ್ ನಲ್ಲಿ ದಾಖಲಿಸಲಾಗಿದ್ದು, ಅವರ ಹೆಸರಲ್ಲಿ ಒಟ್ಟು 3.63 ಕೋಟಿ ರೂ ಚರಾಸ್ತಿ ಇದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search