• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಿರುತೆರೆ ರಾಮನ ವಿರುದ್ಧ ಅಭ್ಯರ್ಥಿ ಬದಲಾಯಿಸಿದ ಸಮಾಜವಾದಿ ಪಾರ್ಟಿ!

Tulunadu News Posted On April 3, 2024
0


0
Shares
  • Share On Facebook
  • Tweet It

ಅಭ್ಯರ್ಥಿ ಘೋಷಣೆ ಆಗಿ ನಾಮಪತ್ರ ಸಲ್ಲಿಕೆ ಆಗುವ ನಡುವಿನ ಅವಧಿಯಲ್ಲಿ ಅನೇಕ ಕಡೆ ಅಭ್ಯರ್ಥಿಯನ್ನು ಪಕ್ಷ ಬದಲಾಯಿಸಿದ ಇತಿಹಾಸ ಇದೆ. ಹೆಸರು ಘೋಷಣೆ ಆದ ಕೂಡಲೇ ಅಭ್ಯರ್ಥಿ ಫಿಕ್ಸ್ ಎಂದಲ್ಲ. ಬಿ – ಫಾರಂ ಕೈಗೆ ಸಿಗದೇ ತನಗೆ ಟಿಕೆಟ್ ಸಿಕ್ಕಿಬಿಟ್ಟಿದೆ, ತಾನು ಅಭ್ಯರ್ಥಿ ಆಗಿಬಿಟ್ಟೆ ಎಂದು ಅಭ್ಯರ್ಥಿ ಗ್ಯಾರಂಟಿಯಾಗಿ ಪ್ರತಿ ಬಾರಿ ಅಂದುಕೊಳ್ಳಬೇಕಾಗಿಲ್ಲ. ಕೆಲವೊಮ್ಮೆ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿ ನಂತರ ಎದುರಾಳಿ ಪಕ್ಷದ ಅಭ್ಯರ್ಥಿಯ ವರ್ಚಸ್ಸು ನೋಡಿ ತಮ್ಮ ಅಭ್ಯರ್ಥಿಯನ್ನು ಬದಲಾಯಿಸಿದ್ದೂ ಇದೆ. ಅಂತಹುದೇ ಘಟನೆ ಈಗ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

ಮೀರತ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಾರ್ಟಿಯಿಂದ ಅದೇ ಜಿಲ್ಲೆಯ ಸರ್ದಾನ ವಿಧಾನಸಭಾ ಕ್ಷೇತ್ರದ ಶಾಸಕ ಅತುಲ್ ಪ್ರಧಾನ್ ಅವರನ್ನು ಲೋಕಸಭಾ ಕಣಕ್ಕೆ ಇಳಿಸಲು ಸಮಾಜವಾದಿ ಪಾರ್ಟಿ ಚಿಂತಿಸಿದೆ. ಇದಕ್ಕಿಂತ ಮೊದಲು ಮಾಜಿ ಎಡಿಜಿ ಭಾನು ಪ್ರತಾಪ್ ಸಿಂಗ್ ಅವರನ್ನು ಮೀರತ್ ಅಭ್ಯರ್ಥಿ ಎಂದು ಎಸ್ ಪಿಯಿಂದ ಘೋಷಿಸಲಾಗಿತ್ತು. ಆದರೆ ಮೀರತ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅರುಣ್ ಗೋವಿಲ್ ಅವರಿಗೆ ಸಿಗುತ್ತಿರುವ ಸ್ಪಂದನೆ ಮತ್ತು ಕಿರುತೆರೆ ರಾಮನ ಜನಪ್ರಿಯತೆಯನ್ನು ನೋಡಿ ಕಂಗಾಲಾಗಿರುವ ಅಖಿಲೇಶ್ ಸಿಂಗ್ ಯಾದವ್ ಮೀರತ್ ಅಭ್ಯರ್ಥಿಯನ್ನು ಬದಲಾಯಿಸಿದ್ದಾರೆ.

ಹೊಸ ಅಭ್ಯರ್ಥಿ ಅತುಲ್ ಪ್ರಧಾನ ಬಹಳ ವರ್ಷಗಳಿಂದ ಸಮಾಜವಾದಿ ಪಾರ್ಟಿಯಲ್ಲಿದ್ದು, ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕರೂ ಆಗಿರುವುದರಿಂದ ಜನ ಸಂಪರ್ಕವೂ ಚೆನ್ನಾಗಿದೆ. ಇನ್ನು ಭಾನು ಪ್ರತಾಪ್ ಸಿಂಗ್ ಅವರಿಗೆ ಜನಸಂಪರ್ಕ ಇಲ್ಲದಿರುವುದರಿಂದ ಅವರನ್ನು ನಿಲ್ಲಿಸಿದರೆ ಡೆಪಾಸಿಟ್ ಕೂಡ ಕಷ್ಟ ಎನ್ನುವುದು ಸಮಾಜವಾದಿ ಪಾರ್ಟಿಗೆ ಗೊತ್ತಾಗಿದೆ. ಆದ್ದರಿಂದ ಕಿರುತೆರೆ ರಾಮನ ಪ್ರಭಾವದ ಎದುರು ನಮ್ಮ ಅಭ್ಯರ್ಥಿ ಮಂಕಾಗಬಾರದು ಎನ್ನುವ ಕಾರಣಕ್ಕೆ ಅಭ್ಯರ್ಥಿ ಬದಲಾವಣೆ ಆಗಿದೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search